ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ
ಅಫಜಲಪುರ:ಅಫಜಲಪುರ ಮತ್ತು ದೇವಲ ಗಾಣಗಾಪುರ ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ,ಸದಸ್ಯರಾಗಿ ಮಾರುತಿ ಮೂರನೆತ್ತಿ, ಗುಂಡಪ್ಪ ಹೊಸಮನಿ,ಮಹಿಬೂಬ ಮನಿಯಾರ್ ಶುಕ್ರವಾರ ಅಧಿಕಾರ ವಹಿಸಿಕೊಂಡರು.
ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್,ಶಾಸಕ ಎಂ.ವೈ.ಪಾಟೀಲ್,ವಿಧಾನ ಪರಿಷತ್ ಸದಸ್ಯ ಬಿ.ಜಿ.ಪಾಟೀಲ್ ಸಮ್ಮುಖದಲ್ಲಿ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಜರಗಿತು.
ಈ ಸಂದರ್ಭದಲ್ಲಿ ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ ಪಾಟೀಲ್, ತಹಶೀಲ್ದಾರ್ ಸಂಜೀವಕುಮಾರ ದಾಸರ,ಜಿಪಂ ಮಾಜಿ ಸದಸ್ಯ ಮತೀನ ಪಟೇಲ್, ಲಚ್ಚಪ್ಪ ಜಮಾದಾರ,ಕಂಟೇಪ್ಪ ಬಳೂರ್ಗಿ,ಶರಣು ಕುಂಬಾರ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.



















