ವಂದೇ ಮಾತರಂ ೧೫೦ ನೇ ವರ್ಷಾಚರಣೆ..!
ವಿಜಯಪುರ: ವ್ಯಕ್ತಿಯ ವ್ಯಕ್ತಿತ್ವವು ಅವನು ಜೀವನದಲ್ಲಿ ಅಳವಡಿಸಿಕೊಂಡ ಮೌಲ್ಯಗಳು ಹಾಗೂ ಗುಣಗಳಿಂದಲೇ ರೂಪುಗೊಳ್ಳುತ್ತದೆ ಎಂದು ಹುಬ್ಬಳ್ಳಿಯ ಸಮಾಜ ಕಾರ್ಯಕರ್ತ ರಾಮಣ್ಣ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಹಾಗೂ ವಿವೇಕ ವೇದಿಕ ವಿಜಯಪುರ ಇವರ ಸಹಯೋಗದೊಂದಿಗೆ ವಂದೇ ಮಾತರಂ ೧೫೦ ನೇ ವರ್ಷಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಭಾರತವು ಕೇವಲ ಭೂಮಿ ಮಾತ್ರವಲ್ಲ, ಮಾತೃಭೂಮಿಯೂ ಹೌದು ಎಂಬ ಭಾವನೆ ಪ್ರತಿಯೊಬ್ಬರ ಮನದಲ್ಲಿ ಬೆಳೆಸುವ ಶಕ್ತಿ ವಂದೇ ಮಾತರಂ ಗೀತೆಗೆ ಇದೆ. ದೇಶದ ಜನತೆಯನ್ನು ಒಗ್ಗೂಡಿಸುವಲ್ಲಿ ಹಾಗೂ ಭಾವೈಕ್ಯತೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ತಮ್ಮ ಉಪನ್ಯಾಸದಲ್ಲಿ ೧೫೦ನೇ ವರ್ಷದ ಸಂಭ್ರಮಾಚರಣೆಯ ಮಹತ್ವವನ್ನು ಹೇಳಿದರು.ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮಾತನಾಡಿ, ವಂದೇ ಮಾತರಂ ಗೀತೆ ಕೇವಲ ಒಂದು ಗೀತೆಯಲ್ಲ, ಅದು ಭಾರತೀಯರಲ್ಲಿ ದೇಶಭಕ್ತಿ ಮತ್ತು ರಾಷ್ಟಿçÃಯ ಭಾವನೆಯನ್ನು ಬೆಳೆಸುವ ಶಕ್ತಿಶಾಲಿ ಭಾವೈಕ್ಯದ ಸಾಧನವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ. ಎಲ್. ಲಕ್ಕಣ್ಣವರ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ಚಂದ್ರಶೇಖರ ಕವಟಗಿ ಮತ್ತು ಅಧ್ಯಾಪಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.


















