ರಾಯಚೂರು: ಉದ್ಯಮಶೀಲತಾ ಯೋಜನೆ ಅಡಿಯಲ್ಲಿ ಆಯ್ಕೆಗೊಂಡ ಫಲಾಪೇಕ್ಷಿಯ ಹೆಸರುಗಳನ್ನು ತಿದ್ದುಪಡಿ ಮಾಡಿ ಅವ್ಯವಹಾರ ಮಾಡಿರುವ ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ರಾಯಚೂರು ಅಧಿಕಾರಿಗಳನ್ನು ಅಮಾನತ್ತು ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ರಾಜ್ಯ ಭೋವಿ ಸಂಘ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
೨೦೨೦-೨೧ ನೇ ಸಾಲಿನಲ್ಲಿ ಉದ್ಯಮಶೀಲತಾ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಿದ್ದರು. ಅದರಂತೆ ಅರ್ಜಿಗಳು ಪರಿಶೀಲಿಸಿ ಅವರ ಹೆಸರುಗಳನ್ನು ಆಯ್ಕೆ ಮಾಡಿದ್ದು ಆದರೆ ಅವರನ್ನು ಕಡೆಗಣಿಸಿ ಬೇರೆಯವರ ಹೆಸರುಗಳನ್ನು ಶಾಸಕ ಗೂಳಿಹಟ್ಟಿ ಡಿ.ಶೇಖರ್ ಶಿಫಾರಸಿನಂತೆ ಆಯ್ಕೆ ಮಾಡಿಕೊಂಡಿರುವುದು ಎಷ್ಟರ ಮಟ್ಟಿಗೆ ಸರಿ ಶಾಸಕರಿಗೂ ನಮ್ಮ ರಾಯಚೂರು ಜಿಲ್ಲೆ ಆಗಿರುವುದಿಲ್ಲ ಹಾಗೂ ಶಾಸಕರಿಗೂ ರಾಯಚೂರು ಜಿಲ್ಲೆಗೆ ಯಾವುದೇ ರೀತಿಯ ಸಂಬಂಧವಿಲ್ಲ. ಅವರ ಶಿಫಾರಸು ಪತ್ರವು ತಮ್ಮ ಕಾರ್ಯಾಲಯದಲ್ಲಿ ಖಾಸಗಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಜು ತಂದೆ ನಾಗರಾಜ ಇವರೇ ಆಗಿದ್ದಾರೆ ಇವರ ಜೊತೆಗೆ ಅಧಿಕಾರಿಗಳು ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ.
ಆದ್ದರಿಂದ ನಮ್ಮ ದೂರನ್ನು ಪರಿಗಣಿಸಿ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಭೋವಿ ಜಿಲ್ಲಾ ಸಮಿತಿ ಅಧ್ಯಕ್ಷರಾದ ಲಕ್ಷ್ಮಣ, ಕೆ.ತಿಮ್ಮಪ್ಪ, ಕೃಷ್ಣಮೂರ್ತಿ, ಹುಲಿಗೆಪ್ಪ, ಹನುಮಂತು ಸೇರಿದಂತೆ ಇತರರು ಉಪಸ್ಥಿತರಿದ್ದರು.



















