ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅಧ್ಯಕ್ಷತೆಯಲ್ಲಿ ಜ -6 ರಂದು ಪಿಂಚಣಿ ಅದಾಲತ್ ಕಾರ್ಯಕ್ರಮ
ಇಂಡಿ : ಕಂದಾಯ ಇಲಾಖೆಯ ಸಹಯೋಗದಲ್ಲಿ ತಾಲೂಕು, ಹೋಬಳಿ ಮಟ್ಟದಲ್ಲಿ ಏರ್ಪಡಿಸುವ ಪಿಂಚಣಿ ಅದಾಲತ್ (ಸಾಮಾಜಿಕ ಭದ್ರತಾ ಯೋಜನೆಗಳ ಮಂಜೂರಾತಿ) ಸೌಲಭ್ಯಗಳ ಸದು ಪಯೋಗವನ್ನು ಅರ್ಹರು ಪಡೆಯಲು ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ತಾಲ್ಲೂಕಿನ ರೂಗಿ ಗ್ರಾಮ ಪಂಚಾಯತ್ ಯಲ್ಲಿ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಅವರ ಅಧ್ಯಕ್ಷತೆ ಶನಿವಾರ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೌದು ತಾಲ್ಲೂಕಿನ ರೂಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರು ಜನವರಿ ೬ ಬೆಳಿಗ್ಗೆ 10 ರಿಂದ ನಡೆಯುವ ಪಿಂಚಣಿ ಅದಾಲತ್ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸೂಕ್ತ ಅವಕಾಶವಿದೆ. ಸುಮಾರು ದಿನಗಳಿಂದ ನಾನಾ ರೀತಿಯಲ್ಲಿ ಅರ್ಹ ಪಲಾನುಭವಿಗಳು ಎದುರಿಸುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಕಾರ್ಯಕ್ರಮ ಇದಾಗಿದೆ.
ಅದಲ್ಲದೇ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸರ್ಕಾರದ ಸವಲತ್ತುಗಳು ಪಡೆಯುವ ಅವಕಾಶ ಇದಾಗಿದ್ದು, ಅರ್ಹರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ಸರಕಾರದ ಯೋಜನೆಗಳು ಕಟ್ಟ ಕಡೆಯ ಅನಾನುಕೂಲ ವ್ಯಕ್ತಿಗಳು ಪಡೆಯಲು ಸಹಕಾರಿ.ಈ ನಿಟ್ಟಿನಲ್ಲಿ ಜವಾಬ್ದಾರಿಯುತ ಪ್ರತಿಯೊಬ್ಬರು ಕೈ ಜೋಡಿಸಿ ಯೋಜನೆಗಳ ಸಾಕಾರಕ್ಕೆ ಮುಂದಾಗಬೇಕು. ಕಂದಾಯ ಇಲಾಖೆಯಿಂದ ಅಂಗವಿಕಲ, ವಿಧವಾ, ಸಂಧ್ಯಾ ಸುರಕ್ಷಾ ವೇತನ ಮುಂತಾದ ಹಲವು ಪಿಂಚಣಿ ಯೋಜನೆ ಅರ್ಹರಿಗೆ ತಲುಪಿಸಬೇಕು. ಆ ನಿಟ್ಟಿನಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ನಲ್ಲಿ ಸ್ಥಳೀಯ ಹಾಗೂ ಗ್ರಾಮೀಣ ಪ್ರದೇಶದ ಹಲವಾರು ಅರ್ಹ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಮಂಜೂರಾತಿ ಪತ್ರಗಳನ್ನು ಅಧಿಕಾರಿಗಳು ವಿತರಿಸುತ್ತಾರೆ. ಹಾಗಾಗಿ ಅರ್ಹರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ನಿಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸೂಕ್ತ ಅವಕಾಶವಿದೆ ಎಂದು ತಿಳಿಸಿದ್ದಾರೆ.