ಜಾತ್ರೆಗೆಂದು ಬಂದವರು ಅಪಘಾತದಲ್ಲಿ, ದುರ್ಮಣ..!
ವಿಜಯಪುರ: ಜಾತ್ರೆಗೆಂದು ಬಂದವರು ಅಪಘಾತದಲ್ಲಿ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ
ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಅಪಘಾತದಲ್ಲಿ ಒಟ್ಟು ನಾಲ್ವರು ಯುವಕರ ಸಾವು, ಮೂವರ ಸ್ಥಿತಿ ಗಂಭೀರವಾಗಿದೆ. ಪಾದಚಾರಿಗಳ ಮೇಲೆ ಬೈಕ್ ಹರಿದು ಹೋಗಿದೆ. ಇದರಿಂದ ಅನಿಲ ಖೈನೂರ (23), ಪ್ರಯತ್ನ ಚೌಡಕಿ ( 22 ), ಕುಮಾರ ಪ್ಯಾಟಿ (18), ರಾಯಪ್ಪ ಬಾಗೇವಾಡಿ (24) ಮೃತಪಟ್ಟಿದ್ದಾರೆ. ಇನ್ನೂ ಶಾಹಿದ ಹುನಗುಂದ, ಪ್ರಶಾಂತ ಕುರುಬಗೌಡರ, ಹನಮಂತ ಕರುಬಗೌಡರ ಸ್ಥಿತಿ ಚಿಂತಾಜನಕ ಆಗಿದೆ. ಅಲ್ಲದೇ, ಗಾಯಾಳುಗಳು ಬಾಗಲಕೋಟ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮುದ್ದೇಬಿಹಾಳ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.