ಡಿಸೆಂಬರ್ ಅಂತ್ಯದೊಳಗೆ ಅಮೃತ-1.0 ಯೋಜನೆ ಕಾಮಗಾರಿ ಪೂರ್ಣಗೊಳಿಸಿ -ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್ಕುಮಾರ ಘೋಷ್ ಸೂಚನೆ
ವಿಜಯಪುರ, ಡಿಸೆಂಬರ್ 1: ಕೇಂದ್ರ ಪುರಷ್ಕøತ ಅಮೃತ್- 1.0 ಯೋಜನೆಯಡಿಯ ಕಾಮಗಾರಿಗಳನ್ನು 2024ರ ಡಿಸೆಂಬರ್ ಅಂತ್ಯದೊಳಗಾಗಿ ಪೂರ್ಣಗೊಳಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್ಕುಮಾರ್ ಘೋಷ ಸೂಚನೆ ನೀಡಿದರು.
ರವಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಡಾ.ಸೆಲ್ವಮಣಿ ಆರ್. ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್ಕುಮಾರ ಘೋಷ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ವಿಜಯಪುರ ನಗರದಲ್ಲಿ ಕೇಂದ್ರ ಪುರಸ್ಕೃತ ಅಮೃತ್- 1.0 ಯೋಜನೆಯನ್ನು ಪೂರ್ಣಗೊಳಿಸಲು ವಿವಿಧ ಹಂತಗಳಲ್ಲಿ ಹಲವು ಬಾರಿ ಜಲಮಂಡಳಿ ವತಿಯಿಂದ ನೋಟೀಸ್ ನೀಡಲಾಗಿದ್ದು, ಪ್ರಸ್ತುತ ವಲಯವಾರು ಪ್ರಗತಿಯನ್ನು ಅವಲೋಕಿಸಿ, ಎಲ್ಲ ಕಾಮಗಾರಿಗಳನ್ನು ಡಿಸೆಂಬರ್-2024 ರ ಅಂತ್ಯಕ್ಕೆ ಪೂರ್ಣಗೊಳಿಸಬೇಕು. ಒಂದು ವೇಳೆ ಗುತ್ತಿಗೆದಾರರು ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸದಿದ್ದಲ್ಲಿ ಟೆಂಡರ್ ನಿಯಮಾವಳಿಗಳಂತೆ, ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಜಿಲ್ಲಾ ಉಸ್ತುವಾರಿ ಸಚಿವರ ನಿರ್ದೇಶನದಂತೆ ವಿಜಯಪುರ ಜಿಲ್ಲೆಯ ಬಬಲೇಶ್ವರ ಹಾಗೂ ತಿಕೋಟಾ ಪಟ್ಟಣಗಳಿಗೆ ಸಗಟು ನೀರು ಸರಬರಾಜು ಹಾಗೂ ಕೇಂದ್ರ ಪುರಸ್ಕೃತ ಅಮೃತ್-2.0 ಯೋಜನೆಯಲ್ಲಿ ವಿತರಣಾ ನೀರು ಸರಬರಾಜು ಯೋಜನೆಗಳ ಕುರಿತು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳೊಂದಿಗೆ ಸುಧೀರ್ಘವಾಗಿ ಚರ್ಚೆ ನಡೆಸಿದ ಅವರು, ಎರಡೂ ಪಟ್ಟಣಗಳಿಗೆ ಸಗಟು ನೀರು ಸರಬರಾಜು ಮಾಡಲು ರಾಜ್ಯ ಸರ್ಕಾರದ ಅನುದಾನದಲ್ಲಿ ಹಾಗೂ ವಿತರಣಾ ನೀರು ಸರಬರಾಜು ವ್ಯವಸ್ಥೆ ಮಾಡಲು ಕೇಂದ್ರ ಪುರಷ್ಕೃತ ಅಮೃತ್ 2.0 ಅನುದಾನದಲ್ಲಿ ಯೋಜನೆಗಳ ರೂಪು ರೇμÉಗಳನ್ನು ತಯಾರಿಸಿ, ಆಡಳಿತಾತ್ಮಕ ಅನುಮೋದನೆ ಪಡೆದು, ಟೆಂಡರ್ ಕರೆಯಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ವಿಜಯಪುರ ನಗರದ ವಾರ್ಡ ನಂ.4, 5, 6, 10 ಮತ್ತು 12 ಗಳು ಭೂತನಾಳ ಕೆರೆಯ ಮೇಲೆ ಅವಲಂಬಿತವಾಗಿದ್ದು, ಇವುಗಳಿಗೆ ವರ್ಷ ಪೂರ್ತಿ ಕುಡಿಯುವ ನೀರು ಸರಬರಾಜು ಮಾಡಲು ಭೂತನಾಳ ಕೆರೆಯನ್ನು ಪ್ರತಿ ವರ್ಷ 2 ಬಾರಿ ಸಂರ್ಪೂಣವಾಗಿ ತುಂಬುವುದು ಅವಶ್ಯಕವಾಗಿದೆ. ಸನ್ 2023-24ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ನಿಬರ್ಂಧಿತ ಅನುದಾನ (ಖಿiಜe ಉಡಿಚಿಟಿಣ) ದಲ್ಲಿ ಅಂದಾಜು ಮೊತ್ತ ರೂ.327.40 ಲಕ್ಷಗಳನ್ನು ಮೀಸಲಿರಿಸಲಾಗಿರುತ್ತದೆ.
ಸದರಿ ಕಾಮಗಾರಿಯನ್ನು ಶೀಘ್ರದಲ್ಲಿ ಕೈಗೊಂಡಲ್ಲಿ ಮುಂಬರುವ ಬೇಸಿಗೆಯಲ್ಲಿ ಕೆರೆಯಲ್ಲಿ ನೀರು ಖಾಲಿಯಾಗದಂತೆ ನೋಡಿಕೊಳ್ಳಬಹುದಾಗಿದ್ದು, ಈ ಕುರಿತು ಮಹಾನಗರ ಪಾಲಿಕೆ ಆಯುಕ್ತರು ಕೆಬಿಜೆಎನ್ಎಲ್ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ಅನುಮತಿ ಹಾಗೂ ಅನುಮತಿ ಪಡೆಯಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ವಿಜಯಪುರ ನಗರಕ್ಕೆ ಸಗಟು ನೀರು ಸರಬರಾಜು ಮಾಡುವ ಆಲಮಟ್ಟಿ ಹೀನ್ನೀರಿನ (ಕೊಲ್ಹಾರದಿಂದ ವಿಜಯಪುರ ನಗರಕ್ಕೆ) ಪಿ.ಎಸ್.ಸಿ. ಕೊಳವೆ ಮಾರ್ಗವನ್ನು ಬದಲಾಯಿಸಿ ಎಮ್.ಎಸ್. ಪೈಪ್ ಅಳವಡಿಸುವ ಕಾಮಗಾರಿಯ ಮರು ಟೆಂಡರ್ ಕರೆಯಲು ಕಾರ್ಯಪಾಲಕ ಅಭಿಯಂತರೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ಪ್ರಸ್ತಾವನೆಯನ್ನು ಆಡಳಿತಾತ್ಮಕ ಅನುಮೋದನೆಗೆ 52 ಕೋಟಿ ರೂ.ಗಳ ಪರಿಷ್ಕøತ ಅಂದಾಜು ಪಟ್ಟಿಯನ್ನು ಸಲ್ಲಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಡಾ.ಸೆಲ್ವಮಣಿ ಆರ್. ಸೂಚನೆ ನೀಡಿದರು.
ಜಿಲ್ಲೆಯ ಇತರ ಪಟ್ಟಣಗಳಲ್ಲಿ ಕೇಂದ್ರ ಪುರಸ್ಕೃತ ಅಮೃತ-2.0 ಯೋಜನೆಗಳ ಪ್ರಗತಿ ಕುರಿತು ಚರ್ಚಿಸಿ, ಬಹುತೇಕ ಪಟ್ಟಣಗಳಲ್ಲಿ ಕಾಮಗಾರಿಯ ಕರಾರು ಪತ್ರಗಳನ್ನು ನೀಡಲಾಗಿದ್ದು, ಶೀಘ್ರದಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಕೆಲವು ಪಟ್ಟಣಗಳಲ್ಲಿ ನೀರು ಸರಬರಾಜು ಯೋಜನೆಗಳ ಆಡಳಿತಾತ್ಮಕ ಅನುಮೋದನೆಗೆ ಬಾಕಿ ಇರುವ ಯೋಜನೆಗಳನ್ನು ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆ ಪಡೆಯುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.


















