ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಶ್ರೀಗಳವರ ಗುರು ನಮನ ಕಾರ್ಯಕ್ರಮ
ಇಂಡಿ: ಸಿದ್ದೇಶ್ವರ ಶ್ರೀಗಳು ಯೋಗ ಮತ್ತು ಆಧ್ಯಾತ್ಮಕತೆಯ ಬೋಧನೆಗಳಿಗೆ ಹೆಸರುವಾಸಿಯಾದ ಭಾರತೀಯ ಆಧ್ಯಾತ್ಮಿಕ ಬೋಧಕ ಮತ್ತು ತತ್ವಜ್ಞಾನಿ ಎಂದು ಕಾತ್ರಾಳದ ಅಮೃತಾನಂದ ಶ್ರೀಗಳು ಹೇಳಿದರು. ತಾಲೂಕಿನ ಶಿರಶ್ಯಾಡ ಗ್ರಾಮದಲ್ಲಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಶ್ರೀಗಳವರ ಗುರು ನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಮ್ಮ ಸರಳಾತಿ ಸರಳ ಜೀವನ ಮತ್ತು ಅರ್ಥಪೂರ್ಣ ಬೋಧನೆಗಳ ಮೂಲಕವೇ ಜನಮನಗೆದ್ದಿದ್ದ ಶ್ರೀಗಳ ಒಂದೊAದು ಮಾತು ಮಾಣ ಕ್ಯ ಎಂದರು.
ಶಿರಶ್ಯಾಡದ ಅಭಿನವ ಮುರಗೇಂದ್ರ ಶ್ರೀಗಳು ಮಾತನಾಡಿ, ನಡೆದಾಡುವ ದೇವರು ಜೇಬಿಲ್ಲದ ಅಂಗಿಯ ರಾಷ್ಟç ಸಂತ ಎಂಬ ಹತ್ತು ಹಲವಾರು ನಾಮಾವಳಿಗಳಿಂದ ಜಗತ್ ಪ್ರಸಿದ್ದ ರಾಗಿದ್ದರು ಹಾಗೂ ಅಪಾರ ಭಕ್ತ ಸಾಗರವನ್ನು ಹೊಂದಿದ್ದರು.
ಅಹಾರ ಮತ್ತು ಜಲವನ್ನು ತ್ಯಾಗ ಮಾಡಿ ವೈಕುಂಠ ಏಕಾದಶಿ ಎಂದು ಇಚ್ಛಾಮರಣ ಹೊಂದಿದ್ದರು ಎಂದರು.
ಚಿAಚೋಳಿ ಭಾಲ್ಕಿಯ ಸಿದ್ಧರಾಮೇಶ್ವರ ಪಟ್ಟದೇವರು ಮಾತನಾಡಿ, ಉತ್ತಮ ಮಾರ್ಗದಲ್ಲಿ ನಡೆದು ಅದನ್ನೇ ಹೃದಯದಲ್ಲಿ ತುಂಬಿಕೊAಡು ತಮ್ಮ ಹೃದಯದಲ್ಲಿ ಮೂಡಿದ ಸದ್ಭಾವನೆ ಪಾಠವನ್ನೇ ಮಾತಿನಾನುಭೂತಿಯಲ್ಲಿ ಅಭಿವ್ಯಕ್ತಿಸುವ ಮಹಾತ್ಮರ ಹಾದಿ ಇಂದಿನ ಯುಗದ ಅಪರೂಪದ ಮಹಾತ್ಮರಲ್ಲಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಮುಖ್ಯ ಎಂದರು.
ಕಾತ್ರಾಳದ ಶ್ರೀ ಬಸವಾನಂದ ಶ್ರೀಗಳು, ಕರವೇ ಅಧ್ಯಕ್ಷ ಬಾಳು ಮುಳಜಿ, ಧನರಾಜ ಮುಜಗೊಂಡ ಮಾತನಾಡಿದರು.
ವೇದಿಕೆಯ ಮೇಲೆ ಶ್ರೀಶೈಲ ಸಾವಕಾರ ಬಿರಾದಾರ, ಕಾಂತು ಕೋಣಶಿರಸಗಿ, ಶರಣು ಸಾಹುಕಾರ ಬಿರಾದಾರ, ಅಣ್ಣಾರಾಯ ಬಿರಾದಾರ, ರಾಮನಗೌಡ ಪಾಟೀಲ, ಭೀಮರಾಯ ಬಿರಾದಾರ, ಧರ್ಮರಾಜ ಕಲ್ಲೂರ, ಸಿದ್ದುಗೌಡ ಪಾಟೀಲ, ಶಿವಾನಂದ ಕೋಳಿ, ಬಸವರಾಜ ಕಲ್ಲೂರ, ಸಂಗಮೇಶ ಬಿರಾದಾರ ಸೇರಿದಂತೆ ಅನೇಕರು ಇದ್ದರು.
ಇಂಡಿ: ತಾಲೂಕಿನ ಶಿರಶ್ಯಾಡ ಗ್ರಾಮದಲ್ಲಿ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಶ್ರೀಗಳವರ ಗುರು ನಮನ ಕಾರ್ಯಕ್ರಮದಲ್ಲಿ ಅಮೃತಾನಂದ ಶ್ರೀಗಳು ಮಾತನಾಡಿದರು.



















