ನೌಕರ ಸಂಘದ ರಾಜ್ಯಧ್ಯಕ್ಷ ಸಿ.ಎಸ್ ಷಡಕ್ಷರಿಗೆ ಅಭಿನಂದನಾ ಸಮಾರಂಭ, ಹೆಚ್ಚಿನ ಸಂಖ್ಯೆ ಪಾಲ್ಗೊಳ್ಳಲು ಕರೆ : ಬಿ.ಎ ರಾವೂರ
ಇಂಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಎರಡನೇ ಬಾರಿ ಆಯ್ಕೆಯಾದ ಸಿ.ಎಸ್.ಷಡಕ್ಷರಿ ಅವರು ಜನೇವರಿ ೩ ಶುಕ್ರವಾರದಂದು ಇಂಡಿ ನಗರಕ್ಕೆ ಆಗಮಿಸಲಿದ್ದು, ಅವರಿಗೆ ತಾಲೂಕು ಸರಕಾರಿ ನೌಕರರ ಸಂಘದ ವತಿಯಿಂದ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಸರಕಾರಿ ನೌಕರರ ಸಂಘದ ತಾಲೂಕಾ ಅಧ್ಯಕ್ಷ ಬಸವರಾಜ ರಾವೂರ ಹೇಳಿದರು.
ಅವರು ಗುರುವಾರ ಪಟ್ಟಣದ ಸರಕಾರಿ ನೌಕರರ ಸಂಘದ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಶುಕ್ರವಾರ ಬೆಳಿಗ್ಗೆ ೧೧ ಘಂಟೆಗೆ ಇಂಡಿ ಪಟ್ಟಣದ ಸರಕಾರಿ ನೌಕರರ ಸಂಘದ ಸಭಾ ಭವನದಲ್ಲಿ ಅಭಿನಂದನೆ ಸಲ್ಲಿಸಲು ತೀರ್ಮಾನಿಸಲಾಗಿದ್ದು, ಅಭಿನಂದನಾ ಸಮಾರಂಭದಲ್ಲಿ ನೌಕರ ಸಂಘದ ರಾಜ್ಯಧ್ಯಕ್ಷ ಷಡಕ್ಷರಿ ಹಾಗೂ ನೌಕರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ ಸೇರಿದಂತೆ ರಾಜ್ಯ ಹಾಗೂ ಜಿಲ್ಲೆಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಕಾರ್ಯಕ್ರಮಕ್ಕೆ ತಾಲ್ಲೂಕಿನ ಎಲ್ಲ ಇಲಾಖೆಯ ನೌಕರರು ಭಾಗವಹಿಸಿ, ನಮ್ಮ ಒಳಿತಿಗಾಗಿ ಸದಾ ಹೋರಾಟ ನಡೆಸುತ್ತಿರುವ ಷಡಕ್ಷರಿ ಅವರಿಗೆ ಅಭಿನಂದಿಸೋಣ ಎಂದರು.
ಎನ್ಪಿಸಿ ರದ್ದುಗೊಳಿಸಿ ಓಬಿಸಿ ಜಾರಿಮಾಡಬೇಕು. ಎಲ್ಲ ನೌಕರ ಕುಟುಂಬಗಳಿಗೆ ಆರೋಗ್ಯ ರಕ್ಷಣೆಗೆ ಸಂಬAಧಿಸಿದAತೆ ಉತ್ತಮ ಯೋಜನೆ ರೂಪಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ರಾಜ್ಯಾಧ್ಯಕ್ಷರ ಮುಂದೆ ಇಲಿದ್ದೇವೆ ಎಂದು ತಿಳಿಸಿದ ಅವರು ಈ ಅಭಿನಂದನಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಮಖ್ಯೆಯಲ್ಲಿ ನೌಕರರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಾಲ್ಲೂಕು ಸರಕಾರಿ ನೌಕರ ಸಂಘದ ಅಧ್ಯಕ್ಷ ಬಸವರಾಜ ರಾವೂರ ಹಾಗೂ ಸಂಘದ ಪದಾಧಿಕಾರಿಗಳು ತಿಳಿಸಿದರು.
ರಾಜ್ಯ ಪರಿಷತ್ ಸದಸ್ಯ ಬಸವರಾಜ ಮೇತ್ರಿ, ರವಿ ಗಿಣ್ಣಿ, ವಿಜಯಕುಮಾರ ನಾಯಿಕ್, ಜಿ.ಎಮ್. ಬಿರಾದಾರ, ನಿಜಣ್ಣ ಕಾಳೆ, ಶಿವಶರಣ ಹಂಜಗಿ, ಸುಧಾಕರಗೌಡ ಬಿರಾದಾರ, ಎಂ.ಎಸ್. ಬಿರಾದಾರ, ಹೆಚ್.ಎಸ್. ಗುನ್ನಾಪೂರ ಸೇರಿದಂತೆ ಇನ್ನಿತರರು ಇದ್ದರು.
ಇಂಡಿ: ಪತ್ರಿಕಾಗೋಷ್ಠಿಯಲ್ಲಿ ಬಸವರಾಜ ರಾವೂರ ಮಾತನಾಡಿದರು.


















