ಮುದ್ದೇಬಿಹಾಳ: ವ್ಯಾಪಾರಸ್ಥರು ಹಾಗೂ ಮಹಿಳೆಯರ ಆರ್ಥಿಕ ಚಟುವಟಿಕೆಗಳಿಗೆ ಆದ್ಯತೆ ನೀಡಲು ನಾಲತವಾಡ ಪಟ್ಟಣದಲ್ಲಿ ಎರಡನೇ ಶಾಖೆಯನ್ನು ಆರಂಭಿಸಲಾಗುತ್ತಿದೆ ಎಂದು ಶ್ರೀ ಬನಶಂಕರಿ ಪತ್ತಿನ ಸಹಕಾರಿ ಸಂಘದ ಸಲಹಾ ಸಮಿತಿ ಸದಸ್ಯ ಬಸವರಾಜ ಪಣೇಗೋಳ ಹೇಳಿದರು.
ತಾಲ್ಲೂಕಿನ ನಾಲತವಾಡ ಪಟ್ಟಣದ ರುದ್ರಗಂಟಿ ಕಾಂಪ್ಲೆಕ್ಸ್ನಲ್ಲಿ ಶನಿವಾರ ಸಂಘದ ಆರಂಭೋತ್ಸವದ ಕುರಿತು ಪೂರ್ವಭಾವಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕಳೆದ ೨೫ ವರ್ಷಗಳ ಹಿಂದೆ ಮುದ್ದೇಬಿಹಾಳದಲ್ಲಿ ಬನಶಂಕರಿ ಪತ್ತಿನ ಸಹಕಾರಿ ಸಂಘ ಆರಂಭಿಸಲಾಗಿದೆ.ಎರಡನೇ ಶಾಖೆಯನ್ನು ನಾಲತವಾಡದಲ್ಲಿ ಆರಂಭಿಸಲಾಗುತ್ತಿದ್ದು ಕಾರ್ಯಕ್ರಮಕ್ಕೆ ಬಾಳೇಹೊಸೂರು ಭಾವೈಕ್ಯತಾ ಸಂಸ್ಥಾನ ಪೀಠದ ಫಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.ಕುಂಟೋಜಿ ಸಂಸ್ಥಾನ ಹಿರೇಮಠದ ಚೆನ್ನವೀರ ಶಿವಾಚಾರ್ಯರು, ಲೊಟಗೇರಿಯ ದೇವಿ ಆರಾಧಕ ಗುರುಮೂರ್ತಿ ಕಣಕಾಲಮಠ ಸಾನಿಧ್ಯ ವಹಿಸುವರು. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರು, ಶಾಸಕರಾದ ಸಿ.ಎಸ್.ನಾಡಗೌಡ ಅಪ್ಪಾಜಿ ಉದ್ಘಾಟಿಸುವರು ಎಂದು ತಿಳಿಸಿದರು.
ಬನಶಂಕರಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಸಪ್ಪ ಹೆಬ್ಬಾಳ ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಶ್ರೀ ಶರಣ ವೀರೇಶ್ವರ ಪಟ್ಟಣ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎಸ್.ಪಾಟೀಲ್, ವೀರೇಶ್ವರ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಂ.ಬಿ.ಅಂಗಡಿ, ಪಟ್ಟಣ ಪಂಚಾಯತ್ ಅಧ್ಯಕ್ಷ ವಿಜಯಲಕ್ಷ್ಮ ಇಲಕಲ್, ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಶಂಕರರಾವ ದೇಶಮುಖ, ಕಾಂಗ್ರೆಸ್ ಮುಖಂಡ ಶಿವಪ್ಪಗೌಡ ತಾತರೆಡ್ಡಿ, ನೇಕಾರ ಸಮಾಜದ ಮುಖಂಡರಾದ ಗುರುಪಾದಪ್ಪ ರುದ್ರಗಂಟಿ, ಮುದ್ದೇಬಿಹಾಳದ ನೇಕಾರ ಸಮಾಜದ ಮುಖಂಡ ಮುತ್ತಣ್ಣ ಪ್ಯಾಟಿಗೌಡರ, ಸಹಕಾರ ಅಭಿವೃದ್ಧಿ ಅಧಿಕಾರಿ ವಿಜಯಕುಮಾರ ಉತ್ನಾಳ ಆಗಮಿಸುವರು ಎಂದು ಹೇಳಿದರು.
ಸಂಘದ ನಿರ್ದೇಶಕ ಶಂಕರ ಹೆಬ್ಬಾಳ ಮಾತನಾಡಿ,ಈಗಾಗಲೇ ಸಂಘದ ಉದ್ಘಾಟನಾ ಕಾರ್ಯಕ್ರಮಕ್ಕೆ ಪೂಜ್ಯರು, ಶಾಸಕರು, ಗಣ್ಯರಿಗೆ ಆಹ್ವಾನಿಸಲಾಗಿದ್ದು ಸಂಘದ ಶೇರು ಸದಸ್ಯರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಮುಖಂಡ ಮುತ್ತಣ್ಣ ಪ್ಯಾಟಿಗೌಡರ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿಜಯಲಕ್ಷ್ಮಿ ಪ್ಯಾಟಿಗೌಡರ, ಸಲಹಾ ಸಮಿತಿ ಸದಸ್ಯರಾದ ಸಿದ್ರಾಯ ರುದ್ರಗಂಟಿ, ಗಣೇಶಪ್ಪ ಮೇಗಿಲಮನಿ, ಸಂಗಪ್ಪ ಹಾವೇರಿ, ಡಾ.ಗುರುರಾಜ ಕಮತಗಿ, ಅಮರೇಶ ಬಂಟನೂರ, ಗೋದಾವರಿ ರುದ್ರಗಂಟಿ,ಬಸವರಾಜ ಪ್ಯಾಟಿಗೌಡರ, ಬಸವರಾಜ ಕಲ್ಲುಂಡಿ,ಸೇರಿದಂತೆ ಉಪಸ್ಥಿತರಿದ್ದರು.