ಮುದ್ದೇಬಿಹಾಳ:ಸರ್ವ ಧರ್ಮಗಳ ಸಾಮರಸ್ಯದ ಪ್ರತೀಕ ತಾಲ್ಲೂಕಿನ ಅಯ್ಯನಗುಡಿ ಗಂಗಪ್ಪಯ್ಯನ ರಥೋತ್ಸವ ಶುಕ್ರವಾರ ಸಂಜೆ ೫ ಕ್ಕೆ ಸಹಸ್ರ ಭಕ್ತರ ಹಾಗೂ ಪೋಲೀಸ್ ಬಿಗಿ ಭದ್ರತೆ ನಡುವ ಸಂಭ್ರಮದಿಂದ ಜರುಗಿತು.
ರಥೋತ್ಸವ ಆರಂಭಕ್ಕೂ ಮುನ್ನ ದೇಗುಲದ ಮುಂಭಾಗದಲ್ಲಿ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರಾದ ಶಾಸಕ ಸಿ.ಎಸ್.ನಾಡಗೌಡ ಸಹೋದರರ ಸಹಭಾಗಿತ್ವದಲ್ಲಿ ವಿಶ್ವಕರ್ಮ ಸಮಾಜದ ಬಂಧುಗಳ ಪರವಂತಿಕೆ, ನಂದಿ ಕೋಲು ಪ್ರದರ್ಶನ, ಪಲ್ಲಕ್ಕಿ ಮೆರವಣಿಗೆ ರಥದ ಸುತ್ತಲೂ ಪ್ರದಕ್ಷಿಣೆ ನಡೆಯಿತು.
ಭಕ್ತಿ ಅರ್ಪಣೆ: ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ್ದ ಅಪಾರ ಭಕ್ತರ ದಂಡು ರಥಕ್ಕೆ ಉತ್ತತ್ತಿ ಲಿಂಬೆ ಬಾಳೆ ಹಣ್ಣಿನಿಂದ ಎಸೆದು ಗಂಗಪ್ಪಯ್ಯ ಹರ ಹರ ಮಹಾದೇವ ಘೋಷಣೆಯಿಂದ ರಥ ತಲುಪುವ ಸುಮಾರು ೨೫೦ ಮೀಟರ್ ದೂರದ ಪಾದ ಗಟ್ಟೆವರೆಗೆ ತೆರಳಿ ತಮ್ಮ ಭಕ್ತಿ ತೋರ್ಪಡಿಸಿಕೊಂಡರು.
ಶಾಸಕರಿಂದ ಚಾಲನೆ: ರಥ ಎಳೆಯುವ ಮುಂಚೆ ಸಾಂಪ್ರದಾಯದಂತೆ ಗಂಗಪ್ಪಯ್ಯನ ಜಾತ್ರೋತ್ಸವವನ್ನು ಹಬ್ಬದ ರೂಪದಲ್ಲಿ ಆಚರಿಸಲು ಬಲದಿನ್ನಿ ನಾಡಗೌಡ ಧಣಿಗಳು ವ್ಯವಸ್ಥೆ ಮಾಡಿದ್ದರು, ಶಾಸಕ ಸಿ.ಎಸ್.ನಾಡಗೌಡ ಸಹೋದರರಾದ ಮುನ್ನಾಧಣಿ, ಬಾಳಸಾಹೇಬ, ಪ.ಪಂ ಮಾಜಿ ಅಧ್ಯಕ್ಷ ಹಾಲಿ ಸದಸ್ಯರಾದ ಪೃತ್ವಿರಾಜ, ರಾಹುಲ್, ರಿತೀಶ್ ಅವರು ರಥೋತ್ಸವಕ್ಕೆ ಪೂಜೆ ನೆರವೇರಿಸಿ ತಾವೂ ಸಹ ರಥದ ಹಗ್ಗಕ್ಕೆ ಕೈ ಜೋಡಿಸಿ ಚಾಲನೆ ನೀಡಿದರು.
ಬಿಗಿ ಬಂದೋಬಸ್ತ್: ರಥೋತ್ಸವದ ವೇಳೆ ಯಾವದೇ ಘಟನೆಗಳ ಸಂಭವಿಸದAತೆ ಡಿವೈಎಸ್ಪಿ ಬಲ್ಲಪ್ಪ ನಂದಗಾವಿ, ಮುದ್ದೇಬಿಹಾಳದ ಸಿಪಿಐ ಮಹ್ಮದ ಫೈಜುದ್ದಿನ್, ಪಿಎಸೈ ತಿಪ್ಪಾರಡ್ಡಿ ನೇತೃತ್ವದಲ್ಲಿ ಪೋಲೀಸ್ ಬಂದೋಬಸ್ತ ಕೈಗೊಳ್ಳಲಾಗಿತ್ತು.