ಮುದ್ದೇಬಿಹಾಳ ;ಪಟ್ಟಣದ ತಾಲೂಕು ಆಡಳಿತ ಸೌಧದ ಎದುರಿಗೆ ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕಿನ ಗ್ರಾಮಾಡಳಿತ ಅಧಿಕಾರಿಗಳು ಕೈಗೆ ಕಪ್ಪು ಬಟ್ಟೆಕಟ್ಟಿಕೂಂಡು ಮೂಲಭೂತ ಸೌಕರ್ಯ ಈಡೇರಿಕೆಗೆ ಮುಷ್ಕರ ಆರಂಭಿಸಿದ್ದಾರೆ , ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಈ ಹಿಂದೆ ಕೈಗೊಂಡ ಮುಷ್ಕರಕ್ಕೆ ಯಾವುದೇ ಬೇಡಿಕೆಗಳನ್ನ ಈಡೇರಿಸಿದ ಕಾರಣ ಗ್ರಾಮ ಆಡಳಿತ ಕೇಂದ್ರ ಸಂಘದ ಆದೇಶದಂತೆ ರಾಜ್ಯವ್ಯಾಪಿ 2 ನೇ ಹಂತದ ಮುಷ್ಕರಕ್ಕೆ ಕರೆ ನೀಡಲಾಗಿದೆ .
ಮುಷ್ಕರದಲ್ಲಿ ಪಾಲ್ಗೊಂಡು ಮಾತನಾಡಿದ ಜಿಲ್ಲಾಧ್ಯಕ್ಷ್ಯ ಗಂಗಾಧರ ಜೂಲಗುಡ್ಡ ಹಾಗೂ ತಾಲೂಕ ಅಧ್ಯಕ್ಷ ಮನೋಜ ರಾಠೋಡ,ತಾಳಿಕೋಟಿ ತಾಲೂಕು ಅಧ್ಯಕ್ಷ ಶಬ್ಬರಿ ಮುಲ್ಲಾ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಗ್ರಾಮಾಡಳಿತ ಅಧಿಕಾರಿಗಳು (ಹಿಂದಿನ ವಿ.ಎ.ಗಳು) ಸೋಮವಾರದಿಂದ ಜಿಲ್ಲೆಯ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದೇವೆ ,2024ರ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 3ರವರೆಗೆ ಇದೇ ರೀತಿಯಲ್ಲಿ ಮುಷ್ಕರ ನಡೆಸಿದ್ದೆವು. ಸರ್ಕಾರ ತಾನು ನೀಡಿದ ಭರವಸೆ ಈಡೇರಿಸಿಲ್ಲ. ಹೀಗಾಗಿ ರಾಜ್ಯ ಸಂಘದ ಕರೆಯಂತೆ ಎರಡನೇ ಹಂತದ ಮುಷ್ಕರ ಆರಂಭಿಸಿದ್ದೇವೆ ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾಭದ್ರತೆಯನ್ನು ಒದಗಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ 2 ನೇ ಹಂತದ ಅನಿರ್ದಿಷ್ಟವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಸರ್ಕಾರ ಬೇಗ ಸ್ಪಂದಿಸಿದರೆ ಜನರಿಗೆ ಕಷ್ಟವಾಗುವುದಿಲ್ಲ, ಸದ್ಯ ಮೂರು ದಿನ ಮುಷ್ಕರ ನಡೆಯುತ್ತದೆ, ಸರ್ಕಾರ ಸ್ಪಂದಿಸದಿದ್ದರ ಅದು ಮುಂದುವರಿಯಬಹುದು, ಏನಿದ್ದರೂ ರಾಜ್ಯ ಸಂಘದ ನಿರ್ಧಾರವನ್ನು ನಾವೆಲ್ಲ ಪಾಲಿಸುತ್ತೇವೆ’ ಎಂದರು.
ಕಂದಾಯ ನಿರಿಕ್ಷಕ ವೆಂಕಟೇಶ ಅಂಬಿಗೇರ ಮಾತನಾಡಿ ಈ ಹೋರಾಟಕ್ಕೆ ನೌಕರರ ಸಂಘದಿಂದಲೂ ನೈತಿಕ ಬೆಂಬಲವನ್ನು ನೀಡುವುದಾಗಿ ತಿಳಿಸಿದರು.
ಈ ವೇಳೆ ರಿಯಾಜ್ ನಾಯ್ಕೂಡಿ, ಅರ್ ಎಸ್ ಹೊಸೂರ, ಸುನಿಲ್ ರಾಠೋಡ, ಎ.ಎಸ್ ಬಾಗವಾನ, ಶ್ರೀನಿವಾಸ ಹುನಗುಂದ, ದೇವರಾಜ ಗುರಿಕಾರ,ಆರತಿ ಬಳವಾಟ, ಅನುಪಮ ಪೂಜಾರ, ಗಂಗಮ್ಮ ಕುಂಬಾರ, ಕಾವ್ಯ ಮುಲ್ಲಾಳ, ಶಿವಾನಂದ ಅಂಗಡಿ, ಶೈಲಶ್ರೀ ಕಂಚ್ಯಾಣಿ, ಕಿಶೋರ ಹಜೇರಿ, ಶೃತಿ ಡಂಬಳ ಸೇರಿದಂತೆ ಮುದ್ದೇಬಿಹಾಳ ತಾಳಿಕೋಟೆ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳು ಸಹಾಯಕರು ಮುಷ್ಕರದಲ್ಲಿ ಭಾಗವಹಿಸಿದ್ದರು.
ಬಾಕ್ಸ್ : ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳಾದ ರಾಜ್ಯಾದ್ಯಂತ ಆಧಾರ ಸೀಡಿಂಗ್ ಪ್ರಕ್ರಿಯೆಯಲ್ಲಿ ಪತ್ತೆಯಾಗಿರುವ ೫೧.೫ ಲಕ್ಷ ಮೃತ ಖಾತೆದಾರರ ಪಹಣಿ ದಾಖಲೆ ಅಭಿಯಾನ ಮಾದರಿಯಲ್ಲಿ ವಾರಸುದಾರರ ಹೆಸರುಗಳಿಗೆ ಪೌತಿ ಖಾತೆ ದಾಖಲಿಸುವಂತೆ ಇ-ಪೌತಿ ಖಾತಾ ಆಂದೋಲನ ಕೈಬಿಡಬೇಕು. ಚಿಕ್ಕಮಗಳೂರು ಜಿಲ್ಲೆಯಲ್ಲಿ ೩೦ ಗ್ರಾಮ ಆಡಳಿತ ಅಧಿಕಾರಿಗಳ ವಾರ್ಷಿಕ ವೇತನ ಬಡ್ತಿಯನ್ನು ತಡೆದು ನೈಸರ್ಗಿಕ ನ್ಯಾಯ ತತ್ವಗಳನ್ನು ಹಾಗೂ ಎಲ್ಲ ನಿಯಮಗಳನ್ನು ಉಲ್ಲಂಘಿಸಿ ಹೊರಡಿಸಿರುವ ದಂಡನಾ ಆದೇಶವನ್ನು ಕೂಡಲೇ ಹಿಂಪಡೆಯಬೇಕು.ಅಂತರ್ ಜಿಲ್ಲಾ ವರ್ಗಾವಣೆಯ ಕೆಸಿಎಸ್ಆರ್ ನಿಯಮ ೧೬ಎ ರ ಉಪಖಂಡ(೨)ನ್ನು ಮರುಸ್ಥಾಪಿಸುವ ಬಗ್ಗೆ ಅಥವಾ ಇತರೆ ಎಲ್ಲಾ ಇಲಾಖೆಗಳಲ್ಲಿರುವಂತೆ ಕಂದಾಯ ಇಲಾಖೆಯಲ್ಲಿ ವರ್ಗಾವಣೆಗಾಗಿ ವಿಶೇಷ ಮಾರ್ಗಸೂಚಿ ರಚಿಸಬೇಕು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಗುಣಮಟ್ಟದ ಟೇಬಲ್, ಖುರ್ಚಿ, ಅಲ್ಮೀರಾ, ಮೊಬೈಲ್, ಲ್ಯಾಪ್ಟಾಪ್, ಪ್ರಿಂಟರ್ ಹಾಗೂ ಸ್ಕ್ಯಾನರ್ಗಳನ್ನು ಒದಗಿಸಬೇಕು. ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡಬೇಕು.