ಪಾಕ್ ನ್ನು ಮೂರನೇ ಬಾರಿ ಸೋಲಿಸುವುದು ಭಾರತಕ್ಕೆ ಕಷ್ಟವಲ್ಲ : ಸಚಿವ ಶಿವಾನಂದ
ವಿಜಯಪುರ : ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನವನ್ನು ಸೋಲಿಸುವುದು ಭಾರತಕ್ಕೆ ದೊಡ್ಡ ಕೆಲಸವೇ ಅಲ್ಲ. ಹಿಂದೆ ಎರಡು ಬಾರಿ ಪಾಕಿಸ್ತಾನ ದೇಶವನ್ನು ಸೋಲಿಸಿರುವ ಭಾರತೀಯ ಸೈನಿಕರಿಗೆ ಮೂರನೇ ಬಾರಿಗೆ ಸೋಲಿಸುವುದು ಕಷ್ಟವೇ ? ಎಂದಿರುವ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ, ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ, ಅಮೆರಿಕಾ ಮಧ್ಯಪ್ರವೇಶಿಸಿದ್ದು ಸರಿಯಲ್ಲ ಎಂದು ಹೇಳಿದರು.
ಮಂಗಳವಾರ ವಿಜಯಪುರ ನಗರದಲ್ಲಿ ಜಿಲ್ಲಾಧಿಕಾರಿ ಕಛೇರಿಯಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿಯಾಗಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಜೊತೆಗೆ ಡಿಸಿ ಕಚೇರಿಗೆ ಆಗಮಿಸಿದ್ದ ವೇಳೆ ಮಾಧ್ಯಮದವರೊಂದಿಗೆ ಸಚಿವ ಶಿವಾನಂದ ಪಾಟೀಲ ಅವರು, ಪಾಕಿಸ್ತಾನ ವಿರುದ್ದ ಯುದ್ದ ಹಾಗೂ ಕದನ ವಿರಾಮ ವಿಚಾರ ಮಾತನಾಡಿದರು.
ಪಾಕಿಸ್ತಾನದ ವಿರುದ್ದದ ಕದನ ವಿರಾಮ ಉಲ್ಲಂಘನೆ ವಿಚಾರದಲ್ಲಿ ಸರ್ವಪಕ್ಷ ನಿಯೋಗ ಪ್ರಧಾನಿಗಳಿಗೆ ಒತ್ತಾಯ ಮಾಡಿದರು. ಸೀಸ್ ಫೈರ್ ಮಾಡುವದಾದರೆ ಅಧಿವೇಶ ಕರೆಯಬೇಕು, ಸೀಸ್ ಫೈರ್ ಮಾಡದಿದ್ದರೆ ಅಧಿವೇಶನ ಕರೆಯಬೇಡಿ. ಇಲ್ಲದಿದ್ದರೆ ಯುದ್ದವನ್ನಾದರೂ ಮಾಡಿ ಎಂದರು. ಯಾವುದೇ ಒಂದು ನಿಷ್ಕರ್ಷಕ್ಕೆ ಬರದೇ, ಬೇರೆ ಯಾರೋ ಹೇಳಿದರೆ ಅದಕ್ಕೊಂದು ಕಂಡಿಷನ್ ಇರಬೇಕು ಎಂದರು.
ಅಮೇರಿಕಾದವರು ಇಂಟರ್ ಫಿಯರ್ ಮಾಡಿದ್ದಾರೆ. ಕಾಶ್ಮೀರ ವಿಷಯ ಇಟ್ಟುಕೊಂಡು ನಿಮ್ಮ ಇಂಟರ್ ಫೈರ್ ಮಾಡುವದಾದರೆ ಸೀಸ್ ಫೈರ್ ಮಾಡಬಾರದಿತ್ತು. ಷರತ್ತು ರಹಿತವಾಗಿದ್ದರೆ ಮಾತ್ರ ಯುದ್ಧ ವಿರಾಮ ಘೋಷಿಸುವ ಮಾತುಕತೆಗೆ ಬರುತ್ತೇವೆ ಎಂದಿದ್ದರೆ ಅದು ಸೂಕ್ತವಾಗಿತ್ತು. ಅದನ್ನೆ ವಿರೋಧ ಪಕ್ಷದವರು, ದೇಶದ ಜನ ಕೇಳುತ್ತಿರುವುದು ಎಂದರು.
ಭಾರತೀಯ ಸೈನಿಕರು ಪಾಕಿಸ್ತಾನವನ್ನು ಎರಡು ಬಾರಿ ಸೋಲಿಸಿದ್ದು, ಮೂರನೇ ಬಾರಿ ಸೋಲಿಸುವದು ಏನು ದೊಡ್ಡ ಕಷ್ಟವಲ್ಲ. ಸರ್ವ ಪಕ್ಷಗಳ ಸಭೆ ಕರೆದಲ್ಲಿ, ಸದರಿ ಸಭೆಯಲ್ಲಿ ಅನೇಕ ವಿಷಯ ಚರ್ಚೆ ಆಗಲಿವೆ. ಆದರೆ ಮೋದಿ ಅವರು ಸಮರ್ಪಕ ಉತ್ತರ ಕೊಟ್ಟರೆ ಎಲ್ಲರೂ ಒಪ್ಪಿಕೊಳ್ಳಬಹುದು, ಇರದಿದ್ದರೆ ವಿಮರ್ಸೆ ಆಗಬಹುದು ಎಂದರು. ಸದಸ್ಯದ ಪರಸ್ಥಿತಿಯಲ್ಲಿ ಸೀಸ್ ಫೈರ್ ಮಾಡುವದಾದರೆ ಅಧಿವೇಶನ ಕರೆಯಿರಿ, ಯುದ್ಧ ಮುಂದುವಸಿದರೆ ಸಭೆ ಕರೆಯುವ ಅವಶ್ಯಕತೆ ಇಲ್ಲ ಎಂದು ತಿಳಿಸಿದರು.


















