• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಮುದ್ದೇಬಿಹಾಳ | ಸಾಮೂಹಿಕ ವಿವಾಹದಲ್ಲಿ 46 ಜೋಡಿಗಳು..!

      Voiceofjanata.in

      May 18, 2025
      0
      ಮುದ್ದೇಬಿಹಾಳ | ಸಾಮೂಹಿಕ ವಿವಾಹದಲ್ಲಿ 46 ಜೋಡಿಗಳು..!
      0
      SHARES
      104
      VIEWS
      Share on FacebookShare on TwitterShare on whatsappShare on telegramShare on Mail

      ಮುದ್ದೇಬಿಹಾಳ | ಸಾಮೂಹಿಕ ವಿವಾಹದಲ್ಲಿ 46 ಜೋಡಿಗಳು..!

       

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ:ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿ ಹೊಸಜೀವನಕ್ಕೆ ಕಾಲಿಟ್ಟಿರುವ ನವದಂಪತಿಗಳ ಸಂಸಾರ ಸುಂದರವಾಗಿ ಮುನ್ನಡೆಯಲಿ. ಇನ್ನು ಮುಂದೆ ಅವರಿಗೆ ಸುಖಕ್ಕಿಂತ ಕಷ್ಟಗಳನ್ನೇ ಜಾಸ್ತಿ ಎದುರಾಗಬಹುದು. ಎಂಥದ್ದೇ ಕಷ್ಟ ಬಂದರೂ ಮೆಟ್ಟಿ ನಿಂತು ಸುಖದ ಜೀವನ ನಡೆಸಲು ಸತಿ, ಪತಿ ಪರಸ್ಪರ ಹೊಂದಾಣಿಕೆಯಿAದ ಸಾಮರಸ್ಯದ ಬದುಕು ನಡೆಸಬೇಕು ಎಂದು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಯವರು ನುಡಿದರು.

      ಇಲ್ಲಿನ ಅಭ್ಯುದಯ ಪಿಯು ಸೈನ್ಸ್ ಕಾಲೇಜು ಆವರಣದಲ್ಲಿ ಅಹಿಲ್ಯಾದೇವಿ ಹೋಳ್ಕರ್ ಗ್ರಾಮೀಣಾಭಿವೃದ್ಧಿ ಮತ್ತು ಶೈಕ್ಷಣಿಕ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮದರಿ ಅವರು ತಮ್ಮ ಜೇಷ್ಠ ಪುತ್ರ ಕಿರಣ್ ಜೊತೆ ಶ್ರೀಶ್ರದ್ಧಾ ಅವರ ಮದುವೆಯೊಂದಿಗೆ ರವಿವಾರ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹದಲ್ಲಿ ನವದಂಪತಿಗಳಿಗೆ ಅಕ್ಷತೆ ಹಾಕಿ ಅವರು ಆಶೀರ್ವಚನ ನೀಡಿದರು.
      ಮದರಿಯವರು ಸಾಕಷ್ಟು ಬಡ ಕುಟುಂಬಗಳಿಗೆ ಸಾಮೂಹಿಕ ಲಗ್ನ ಮಾಡಿಕೊಡುವ ಮೂಲಕ ಅವರ ಏಳಿಗೆಗೆ ಸಹಕರಿಸಿ ಅವರ ಸಂಕಷ್ಟಕ್ಕೆ ನೆರವಾಗಿರುವುದು ಸಂತಸ ತರುವಂಥದ್ದು. ಸಾಮೂಹಿಕ ವಿವಾಹ ಸಂಘಟಿಸುವ ಮೂಲಕ ಅವರು ಸಮಾಜದಲ್ಲಿ ಆದರ್ಶ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಇನ್ನು ಮುಂದೆಯೂ ಸಹಿತ ಅವರಿಂದ ಇಂಥ ಅನೇಕ ಚಟುವಟಿಕೆಗಳು ನೆರವೇರಲಿ. ಅವರಿಂದ ಸಮಾಜಕ್ಕೆ ಒಳ್ಳೇಯದಾಗಲಿ ಎಂದು ಹರಸಿದರು.
      ತಿಂಥಣಿಯ ಸಿದ್ಧರಮಾನಂಪುರಿ, ಅಗತೀರ್ಥದ ಶಾಂತಮಯ ಸ್ವಾಮೀಜಿ, ಸರೂರ ಹಾಲುಮತ ಮೂಲಗುರುಪೀಠದ ಶಿವಯ್ಯ ಗುರುವಿನ್, ಗೊಳಸಾರಮಠದ ಅಭಿನವ ಪುಂಡಲಿಕ ಸ್ವಾಮೀಜಿ, ಅಂಕಲಿಮಠದ ಶ್ರೀಗಳು, ಹುಲಜಂತಿಯ ಸೋಮಲಿಂಗ ಸ್ವಾಮೀಜಿ, ಯರಝರಿಯ ಮಲ್ಲಾಲಿಂಗ ಮಹಾರಾಜರು, ಖಿಲಾರಹಟ್ಟಿಯ ಕಾಡಸಿದ್ದೇಶ್ವರ ಸ್ವಾಮೀಜಿ, ಖಾಸ್ಗತೇಶ್ವರ ಮಠದ ಸಿದ್ದಲಿಂಗ ದೇವರು, ಬಾಗಲಕೋಟೆಯ ಶಾಸಕ ಹುಲ್ಲಪ್ಪ ಮೇಟಿ, ದೇವರ ಹಿಪ್ಪರಗಿಯ ಶಾಸಕ ರಾಜುಗೌಡ ಪಾಟೀಲ, ಎಂಎಲ್‌ಸಿ ಸುನೀಲಗೌಡ ಪಾಟೀಲ, ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಚಡಚಣದ ಮಹಾದೇವಸಾಹುಕಾರ ಭೈರಗೊಂಡ, ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ, ಬಿಜೆಪಿ ಮುಖಂಡ ಮಲಕೇಂದ್ರಗೌಡ ಪಾಟೀಲ, ಜಿಪಂ ಮಾಜಿ ಉಪಾಧ್ಯಕ್ಷ ಕೆಂಚಪ್ಪ ಬಿರಾದಾರ, ವಿವಿಧ ಮಠಗಳ ಸ್ವಾಮೀಜಿಗಳು, ಗಣ್ಯರು, ಸಂಘ ಸಂಸ್ಥೆಗಳ ಮುಖಂಡರು, ಗ್ರಾಪಂಗಳ ಸದಸ್ಯರು ಸೇರಿ ಹಲವರು ಪಾಲ್ಗೊಂಡು ನವದಂಪತಿಗಳಿಗೆ ಶುಭ ಹಾರೈಸಿದರು.
      ಕಿರಣ್, ಶ್ರೀಶ್ರದ್ಧಾ ಅವರೊಂದಿಗೆ ಹಿಂದುಳಿದ ಸಮಾಜಗಳ ೪೬ ವಧು ವರರು ಮಾಂಗಲ್ಯ ಧರಿಸಿ ಸತಿಪತಿಗಳಾಗುವ ಮೂಲಕ ನವದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇವರೆಲ್ಲರಿಗೂ ಮದರಿ ಅವರಿಂದ ಎರಡು ಜೊತೆ ತಾಳಿ, ಕಾಲುಂಗುರ, ಬಟ್ಟೆ ಸೇರಿ ಮದುವೆಯ ಎಲ್ಲ ಸಾಮಗ್ರಿಗಳನ್ನು ಉಚಿತವಾಗಿ ಒದಗಿಸಲಾಗಿತ್ತು.
      ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ನೀಲಕಂಠಪ್ಪ ಮದರಿ, ಮಲ್ಲಮ್ಮ ಮದರಿ, ಮಲ್ಲಿಕಾರ್ಜುನ ಮದರಿ, ಶ್ರೀದೇವಿ ಮದರಿ, ಬೀರಪ್ಪ ಮದರಿ, ಯಲ್ಲಮ್ಮ ಮದರಿ, ಅಮರೇಶ ಮದರಿ, ರಿತಮ್ಮ ಮದರಿ, ಪಲ್ಲವಿ, ಅಶ್ವಿನಿ, ನಿಖಿತಾ, ಸೌಮ್ಯಾ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ.ಬಿರಾದಾರ, ರವಿ ಜಗಲಿ, ಸಂಸ್ಥೆಯ ಆಡಳಿತಾಧಿಕಾರಿ ಬಿ.ಜಿ.ಬಿರಾದಾರ, ಲೆಕ್ಕಾಧಿಕಾರಿ ಬಸವರಾಜ ಬಿಜ್ಜೂರ, ಚಂದ್ರು ಜೋಗಿನ್, ಪುರಸಭೆ ಮಾಜಿ ಸದಸ್ಯ ಸಂತೋಷ ನಾಯ್ಕೋಡಿ, ಅಭ್ಯುದಯ ಶಾಲೆ, ಕಾಲೇಜುಗಳ ಸಿಬ್ಬಂದಿ ವರ್ಗ, ಮದರಿಯವರ ಸ್ನೇಹಿತರು, ಗುತ್ತಿಗೆದಾರರು ಸೇರಿ ಹಲವರು ಸಾಮೂಹಿಕ ವಿವಾಹಕ್ಕೆ ಆಗಮಿಸಿದ್ದ ನಲವತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.
      ಅಂದಾಜು ಮೂರು ಎಕರೆ ಜಮೀನಿನಲ್ಲಿ ಹಾಕಿದ್ದ ತಿರುಪತಿಯ ಶ್ರೀ ಬಾಲಾಜಿ ಮಂದಿರ ಮಾದರಿಯ ಕಲ್ಯಾಣ ಮಂಟಪ, ಸಾಮೂಹಿಕ ವಿವಾಹದ ಸಮಾನಾಂತರ ಉತ್ತರಮುಖಿ ವೇದಿಕೆ, ತಿರುಪತಿ ಲಾಡು, ಹಲ್ವಾ ಒಳಗೊಂಡಿದ್ದ ಭೂರಿ ಭೋಜನ, ವಿಐಪಿ ಮತ್ತು ಜನಸಾಮಾನ್ಯರಿಗೆ ಊಟದ ಪ್ರತ್ಯೇಕ ಕೌಂಟರ್‌ಗಳು, ಶ್ರೀಶೈಲ ಹೂಗಾರ ನೇತೃತ್ವದ ಕಲಾಸಿಂಚನ ಮೆಲೋಡಿಸ್ ತಂಡದ ಜನಪದ ಶೈಲಿಯ ರಸಮಂಜರಿ, ಅಚ್ಚುಕಟ್ಟಾದ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಜನದಟ್ಟಣೆ ನಿಯಂತ್ರಿಸಲು ಭದ್ರತೆಗೆ ನಿಯೋಜಿಸಿದ್ದ ಮಹಾರಾಷ್ಟ್ರದ ಪುರುಷ, ಮಹಿಳಾ ಬೌನ್ಸರ್‌ಗಳ ತಂಡ ವಿಶೇಷವಾಗಿ ಗಮನ ಸೆಳೆದವು.
      Tags: #indi / vijayapur#Muddebiha | 46 couples in a mass wedding ..!#State News#Today News#Voice Of Janata#Voiceofjanata.in#ಮುದ್ದೇಬಿಹಾಳ | ಸಾಮೂಹಿಕ ವಿವಾಹದಲ್ಲಿ 46 ಜೋಡಿಗಳು..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.