ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ
ಇಂಡಿ : ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಒತ್ತಾಯಿಸುತ್ತೆವೆ ಎಂದು ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ ಹೇಳಿದರು.
ಗುರುವಾರ ಪಟ್ಟಣದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನರ ಸಾವಿಗೆ ಕಾರಣರಾದ ಕಾಂಗ್ರೆಸ್ ಸರ್ಕಾರ, ತಕ್ಷಣವೇ ಈ ಘಟನೆಯ ನೈತಿಕ ಹೊಣೆ ಹೊತ್ತು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕೆಂದು ಒತ್ತಾಯಿಪಡಿಸುತ್ತೇನೆ.
ಇತ್ತೀಚಿಗೆ ಜಗತ್ತೇ ಮೆತ್ತುವಂಥ ವಿಶ್ವವಿಖ್ಯಾತ ಪ್ರಯಾಗ್ ರಾಜ್ ಕುಂಭಮೇಳದಲ್ಲಿ 60 ಕೋಟಿ ಭಕ್ತರ ಮಹಾ ಸಮಾಗಮದಲ್ಲಿ ಕಾಲ್ತುಳಿತದ ಬಗ್ಗೆ ಸುಖಾ ಸುಮ್ಮನೆ ಮಾತನಾಡಿದ್ದವರು, ಕೇವಲ ಒಂದೇ ಒಂದುಕ್ರೀಡಾಂಗಣ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಹಾಗಾಗಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕೆಂದು ಒತ್ತಾಯಿಸುತ್ತೆನೆ ಎಂದು ಹೇಳಿದರು.