ಹೊಳಿಯವರಿಗೆ ಗೌರವ ಸನ್ಮಾನ
ವಿಜಯಪುರ: ಜಿಲ್ಲಾ ಆಸ್ಪತ್ರೆಯನ್ನು ರಾಜ್ಯದಲ್ಲಿಯೇ ಮಾದರಿ ಆಸ್ಪತ್ರೆಯನ್ನಾಗಿ ಪರಿವರ್ತಿಸುತ್ತಿರುವ ಹಾಗೂ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವಲ್ಲಿ ಪ್ರಾಮಾಣಿಕ ಕಾರ್ಯ ಮಾಡುತ್ತಿರುವ ಜಿಲ್ಲಾ ಶಸ್ತ್ರ ಚಿಕಿತ್ಸೆಕ ಡಾ. ಶಿವಾನಂದ ಮಾಸ್ತಿಹೊಳಿ ಅವರಿಗೆ ವಿಜಯಪುರ ನಗರದ ಸಮೃದ್ಧಿ ಮಹಿಳಾ ಸಂಸ್ಥೆಯ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.
ವಿಜಯಪುರ ಜಿಲ್ಲಾ ಆಸ್ಪತ್ರೆಯು ಕಾಯಕಲ್ಪ ಒಳಗೊಂಡAತೆ ಹತ್ತಾರು ಪ್ರಶಸ್ತಿ ಪಡೆದುಕೊಂಡಿದೆ ಆಸ್ಪತ್ರೆಯ ಮುಖ್ಯಸ್ಥರಾದ ಡಾ. ಶಿವಾನಂದ ಮಾಸ್ತಿಹೊಳಿ ಅವರು ಹಾಗೂ ಅವರ ಎಲ್ಲ ಸಿಬ್ಬಂದಿ ವರ್ಗ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವುದರೊಂದಿಗೆ ರೋಗಿಗಳಿಗೆ ಪೂರಕ ಪರಿಸರ ನಿರ್ಮಾಣ ಮಾಡುವ ಕಾರ್ಯ ಮಾಡುತ್ತಿದ್ದಾರೆ ಎಂದು ಹಲವಾರು ಜನ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.
ಸನ್ಮಾನ ಸ್ವೀಕರಿಸಿ ಮಾತನಾಡಿದ, ಜಿಲ್ಲಾ ಶಸ್ತ್ರ ಚಿಕಿತ್ಸೆಕ ಡಾಕ್ಟರ್ ಶಿವಾನಂದ ಮಾಸ್ತಿಹೊಳಿ ಸ್ವಯಂ ಸೇವಾ ಸಂಸ್ಥೆಗಳು ಯಾವುದೇ ಫಲಾಪೇಕ್ಷೆ ಇಲ್ಲದೆ ಸಾಮಾಜಿಕ ಕಾರ್ಯ ಮಾಡುತ್ತಾರೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾವುದಾದರೂ ಶಿಬಿರಗಳನ್ನು ಹಮ್ಮಿಕೊಂಡರೆ ನಮ್ಮ ಸಿಬ್ಬಂದಿಗಳನ್ನು ನಿಯೋಜನೆ ಮಾಡುತ್ತೇವೆ ಹಾಗೂ ಜಿಲ್ಲಾ ಆಸ್ಪತ್ರೆಯ ಅಭಿವೃದ್ಧಿಗೆ ಜಿಲ್ಲೆಯ ಸಂಘಟ ಸಂಘ ಸಂಸ್ಥೆಗಳ ಸಹಕಾರ ಅತಿ ಅವಶ್ಯಕವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮೃದ್ಧಿ ಸಂಸ್ಥೆಯ ಅಧ್ಯಕ್ಷರಾದ ಸುಕನ್ಯಾ ಹೇರಲಗಿ ಸೇರಿದಂತೆ ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯ ಹಿರಿಯ ಆಪ್ತ ಸಮಾಲೋಚಕರಾದ ರವಿ ಕಿತ್ತೂರ, ಶ್ರೀಮತಿ ಆರತಿ ಹಳ್ಳಿ, ಗೀತಾ ಹನುಮಂತರಾವ್, ಶುಶ್ರೂಷಾ ಅಧಿಕಾರಿ ಸುರೇಂದ್ರ ಮಾನಕರ, ಆಸ್ಪತ್ರೆಯ ಮೇಲ್ವಿಚಾರಕರಾದ ವೀಣಾ ಕುಲಕರ್ಣಿ, ಶ್ರೀಮತಿ ಬಾಳಮ್ಮ ಕೋಟ್ಯಾಳ ಇತರರು ಉಪಸ್ಥಿತರಿದ್ದರು.
ವಂದನೆಗಳೊAದಿಗೆ,