ಬಸನಗೌಡ ಪಾಟೀಲ ಅವರ 65 ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಶಾಲೆ ಮಕ್ಕಳಿಗೆ ನೊಟ್ ಬುಕ್ ಪೆನ್ನ್ ವಿತರಣೆ ಮಾಡುವ ಮೂಲಕ ಆಚರಣೆ.
ಹುಟ್ಟು ಹಬ್ಬದ ಪ್ರಯುಕ್ತ ಶಾಲಾ ಮಕ್ಕಳಿಗೆ ಪುಸ್ತಕ ಪೆನ್ನು ವಿತರಣೆ
ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: ತಾಲ್ಲೂಕಿನ ಹಿರೇಮುರಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಾಜ ಸೇವಕ, ಜೆಡಿಎಸ್ ಹಿರಿಯ ಮುಖಂಡ ಬಸನಗೌಡ ಬಿ ಪಾಟೀಲ(ಮುರಾಳ) ಅವರು 65 ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ತಮ್ಮ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಸರಕಾರಿ ಶಾಲಾ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ಪೆನ್ನು ಗಳನ್ನು ವಿತರಿಸುವುದರ ಮೂಲಕ ಹುಟ್ಟು ಹಬ್ಬವನ್ನು ಆಚರಿಸಿಕೊಂಡರು.
ಈ ಸಂದರ್ಭದಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಚ್ ಎನ್ ಭೋವಿ ಹಾಗೂ ಊರಿನ ಹಿರಿಯರಾದ ನಾಗರಬೆಟ್ಟ, ಕಾರ್ಯಕ್ರಮವನ್ನು ಉದ್ದೇಶಿಸಿ ಎಸ್ ಎಸ್ ಸಜ್ಜನ್ ರವರು ಪ್ರಸ್ತಾವಿಕ ನುಡಿಗಳನ್ನು ನುಡಿದರು,
ಶಾಲೆಯ ದೈಹಿಕ ಶಿಕ್ಷಕರಾದ ಎಸ್ ಜಿ ಪಾಟೀಲ, ಗುರುಗಳು ಸ್ವಾಗತಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಶಾಲೆಯಮುಖ್ಯ ಗುರುಮಾತೆಯರಾದ ಶ್ರೀಮತಿ ಎನ್ ಎಂ ಕಣಕಾಲವಿದ್ಯೆಯ ಮಹತ್ವವನ್ನು ತಿಳಿಸಿಕೊಡುತ್ತಾ ನೋಟ್ ಪುಸ್ತಕಗಳನ್ನು ವಿತರಿಸಿದ ಧಾನಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದರು ತದನಂತರ ಮಾತನಾಡಿದರು. ಎಚ್ ಎನ್ ಭೋವಿ ಗುರುಗಳು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಕಾರ್ಯಕ್ರಮವನ್ನು ಮಹಾಂತೇಶ ಪಾಟೀಲ ನಿರೂಪಿಸಿದರು. ಶಾಲೆಯ ಶಿಕ್ಷಕಿಯರಾದ ಶ್ರೀಮತಿ ಆಯ್ ಆಯ್ ಮುರುಡಿ ,ಶ್ರೀಮತಿ ಡಿ ವಾಯ್ ಮದರಿ, ಶ್ರೀಮತಿ ಸಿ ಕೆ ರಾಠೋಡ್, ಶ್ರೀಮತಿ ಎಸ್ ಎಸ್ ಪ್ಯಾಟಿ, ಸರಕಾರಿ ಶಾಲಾ ಮಕ್ಕಳು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.