13ಕೋಟಿ ರೂ.ವೆಚ್ಚ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಹಂಚಿಕೆ ಹಿರೇಮುರಾಳ-ಕೇಸಾಪುರ ಹುನಕುಂಟಿ ರಸ್ತೆಗೆ ಕಾಮಗಾರಿಗೆ ಚಾಲನೆ
ರಾಜ್ಯದ ಪ್ರಗತಿಪಥ ಯೋಜನೆಯಡಿಯಲ್ಲಿ 30 ಕಿ.ಮೀ ರಸ್ತೆ ಅಭಿವೃದ್ಧಿಗೆ 21.50 ಕೋಟಿ ಹಣ ಕೊಡುವುದಾಗಿ ತಿಳಿಸಿದ್ದು ಪ್ರಸ್ತಾವನೆ.
ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ : ತಾಲ್ಲೂಕಿನ ಕೇಸಾಪುರ ಕ್ರಾಸ್ನಲ್ಲಿ ಭಾನುವಾರ ಲೋಕೋಪಯೋಗಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಹಿರೇಮುರಾಳ-ಹುನಕುಂಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಕೆ.ಎಸ್. ಡಿ.ನಿಗದ ಅಧ್ಯಕ್ಷ ಹಾಗೂ ಶಾಸಕ ಸಿ. ಎಸ್. ನಾಡಗೌಡ (ಅಪ್ಪಾಜಿ) ಅವರ ಮಾತನಾಡಿ, ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷದಲ್ಲಿ 2.20 ಲಕ್ಷ ಕೋಟಿ ರೂ.ಬಿಲ್ ಬಾಕಿ ಇಟ್ಟು ಹೋಗಿದ್ದು ಅದನ್ನು ಪಾವತಿಸುವ ಹೊಣೆಯನ್ನು ಕಾಂಗ್ರೆಸ್ ಸರ್ಕಾರದ ಮೇಲಿರಿಸಿ ಹಣಕಾಸಿನ ಅಶಿಸ್ತನ್ನು ತೋರಿಸಿದ್ದಕ್ಕೆ ಎರಡು ವರ್ಷ ಅಭಿವೃದ್ಧಿಗೆ ಅಲ್ಪ ಹಿನ್ನಡೆಯುಂಟಾಗಿದ್ದು ನಿಜ. ಆದರೆ ಈಗ ಅಭಿವೃದ್ಧಿ ಕೆಲಸಗಳಿಗೆ ಸರ್ಕಾರ
ಅನುದಾನ ಹಂಚಿಕೆ ಮಾಡುತ್ತಿದೆ ಎಂದರು.
ಸಾಲಿನ 2025-26ನೆ ವರ್ಷದ ಆಯವ್ಯಯದಲ್ಲಿ ತಾಲ್ಲೂಕಿನ ನಾಲತವಾಡ-ಆಲೂರ, ಯರಗಲ್-ಕಮಲದಿನ್ನಿ, ಇಂಗಳಗೇರಿ-ಕೂಚಬಾಳ,ಹಡಗಲಿ-ಅಮರಗೋಳ,ದಿಂಡವಾರ ಮೂಕಿಹಾಳ ನಾಲತವಾಡ, ಮೂಕಿಹಾಳ ದಿಂದ ಹಡಗಿನಾಳ ತಾಳಿಕೋಟಿ ರಸ್ತೆ ಶಾಲೆಯ,ಅಂಗನವಾಡಿ ಕಟ್ಟಡ ವಿವಿಧ ಗ್ರಾಮೀಣ ರಸ್ತೆಗಳು ಸೇರಿದಂತೆ ಹೊಲಮನೆಗಳಿಗೆ ತಿರುಗಾಡುವ ರಸ್ತೆಗಳನ್ನು ಅಭಿವೃದ್ಧಿ ಮಾಡುವ ಬೇಡಿಕೆಪ್ರಗತಿಪರ ಇದ್ದು ಆದ್ಯತೆ ಮೇರೆಗೆ ಅಭಿವೃದ್ಧಿಗೊಳಿಸಲಾಗುತ್ತದೆ ಎಂದು ಹೇಳಿದರು.
ರಾಜ್ಯದ ಪ್ರಗತಿಪಥ ಯೋಜನೆಯಡಿಯಲ್ಲಿ 30 ಕಿ.ಮೀ ರಸ್ತೆ ಅಭಿವೃದ್ಧಿಗೆ 21.50 ಕೋಟಿ ಹಣ ಕೊಡುವುದಾಗಿ ತಿಳಿಸಿದ್ದು ಪ್ರಸ್ತಾವನೆ ಸಲ್ಲಿಸುವುದಾಗಿ ತಿಳಿಸಿದರು. ಬಿಜೆಪಿ ಪಕ್ಷದ
ವಿರೋಧ ಪಕ್ಷದವರ ಸುಳ್ಳು ಹೇಳಿಕೆಗಳನ್ನು ಜನರು ದಾರಿ ತಪ್ಪಿಸುತ್ತಿದ್ದಾರೆ ಎಂದರು.
ಕೇಸಾಪುರದ ಮುಖಂಡ ಎಂ ಎಸ್ ದೇಶಮುಖ, ಕಾಂಗ್ರೆಸ್ ಮುಖಂಡ, ಪ್ರಥಮ ದರ್ಜೆ ಗುತ್ತಿಗೆದಾರ ಸಿ. ಬಿ. ಅಸ್ತಿ,ಗುತ್ತಿಗೆದಾರ ಶ್ರೀಶೈಲ ವಿಭೂತಿ, ಗ್ಯಾರಂಟಿ ಸಮಿತಿ ತಾಲ್ಲೂಕು ಅಧ್ಯಕ್ಷ ಶಿವಶಂಕರಗೌಡ ಹಿರೇಗೌಡರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಲೋಕೋಪಯೋಗಿ ಇಲಾಖೆ ಎಇಇ ಎಸ್ ಜಿ ಶಿವನಗುತ್ತಿ,ಸಹಾಯಕ ಇಂಜಿನಿಯರ್ ಎ ಬಿ ರಡ್ಡಿ, ತಂಗಡಗಿ ಪಿಕೆಪಿಎಸ್ ಅಧ್ಯಕ್ಷ ಶ್ರೀಶೈಲ ಮರೋಳ,ಮುಖಂಡ ರಾಜುಗೌಡ ಕೊಂಗಿ, ಅಪ್ಪು ನಾಡಗೌಡ, ಹಿರೇಮುರಾಳ ಪಿಕೆಪಿಎಸ್ ಅಧ್ಯಕ್ಷ ಮಲ್ಲನಗೌಡ ಪಾಟೀಲ,
ವಡ್ಡರ ಸಮಾಜ ಯುವ ಮುಖಂಡ ಶ್ರೀನಿವಾಸ ಗೌಂಡಿ, ಅಂಬರೀಶ್ ಗೂಳಿ,ಶಾಂತಗೌಡ ನಾಡಗೌಡ, ಮಹಾಂತಯ್ಯ ಹಿರೇಮಠ, ನಾಗಯ್ಯ ಹಾಲಗಂಗಾಧರಮಠ,ಕಲ್ಲಣ ಪ್ಯಾಟಿ, ಮೈಹಿಬೂಬು ಮುಲ್ಲಾ,ಅಯ್ಯಪ್ಪ ಮಲಗಲದಿನ್ನಿ (ನೆರಬೆಂಚಿ), ವಾಯ್ ಎಲ್ ಚಲವಾದಿ, ಗ್ರಾಪಂ ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಸುತ್ತಲಿನ ಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.
ಮುದ್ದೇಬಿಹಾಳ ತಾಲೂಕಿನಲ್ಲಿ ಎರಡು ಪಶು ಚಿಕಿತ್ಸಾಲಯಗಳನ್ನು ಈಗಾಗಲೇ ನಮ್ಮ ಸರ್ಕಾರ ಮಂಜೂರು ಮಾಡಿದ್ದು, ಬಿಜೂರು ಗ್ರಾಮದಲ್ಲಿ ಪಶು ಆಸ್ಪತ್ರೆ ತೆರೆಯಲಾಗಿದೆ. ನಾಗರಬೆಟ್ಟ ಏತ ನೀರಾವರಿ ಕಾಮಗಾರಿ ಬಹುತೇಕ ಸಂಪೂರ್ಣ ಮುಗಿದಿದ್ದು, ಮುಂಬರುವ ದಿನಗಳಲ್ಲಿ ಆದಷ್ಟು ಬೇಗ ಲೋಕಾರ್ಪಣೆಗೊಳಸಲಾಗುವುದು. ಜೊತೆಗೆ ಬೂದಿಹಾಳ ಪೀರಾಪೂರ ಯೋಜನೆಯನ್ನೂ ತೀವ್ರಗತಿಯಲ್ಲಿ ಪ್ರಾರಂಭಿಸುವ ಮೂಲಕ ಆ ಭಾಗದ ರೈತರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುತ್ತದೆ.
ಸಿ ಎಸ್ ನಾಡಗೌಡ ಅಪ್ಪಾಜಿ ಶಾಸಕರು ಮುದ್ದೇಬಿಹಾಳ,