ಕರ್ನಾಟಕ ಭೀಮ್ ಸೇನೆ ಸಂಘಟನೆ ವಿಜಯಪುರ ಜಿಲ್ಲಾ ಯುವ ಘಟಕ ಅಧ್ಯಕ್ಷರಾಗಿ ಪರಶುರಾಮ ಚಲವಾದಿ ಆಯ್ಕೆ
ವರದಿ: ಬಸವರಾಜ ಕುಂಬಾರ ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: ಕರ್ನಾಟಕ ಭೀಮ್ ಸೇನೆ ಸಂಘಟನೆಯಲ್ಲಿ ಸತತವಾಗಿ 3 ವರ್ಷದಿಂದ ಜಿಲ್ಲಾ ಕಾರ್ಯಧ್ಯಕ್ಷರಾಗಿ ತಮ್ಮ ಸಂಘಟನೆಯಲ್ಲಿ ಕಾರ್ಯವೈಖರಿ ನಡಸಿದ್ದಾರೆ.
ಅದ್ಕಕೆ ವಿಜಯಪುರ ಜಿಲ್ಲೆಯಲ್ಲಿ ಇನ್ನು ಹೆಚ್ಚು ಚಟುವಟಿಕೆಗಳು ಮತ್ತು ಸಂಘಟನೆ ಬಲಪಡಿಸುವ ನಿಟ್ಟಿನಲ್ಲಿ ನೊಂದವರ ಧ್ವನಿಯಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ ತತ್ವ ಸಿದ್ದಾಂತಗಳನ್ನು ಪಾಲನೆ ಮಾಡಬೇಕೆಂದು ಮುದ್ದೇಬಿಹಾಳ ತಾಲೂಕಿನ ಹಿರೇಮುರಾಳ ಗ್ರಾಮದ ಪರಶುರಾಮ ಚಲವಾದಿರವರನ್ನು ಕರ್ನಾಟಕ ಭೀಮ್ ಸೇನೆ ವಿಜಯಪುರ ಜಿಲ್ಲಾ ಯುವ ಘಟಕ ಅಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷೆ ಹಾಗೂ ಸಂಸ್ಥಾಪಕರಾದ ಶಂಕರ್ ರಾಮಲಿಂಗಯ್ಯ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.