ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ
ಇಂಡಿ : ಶಿಕ್ಷಕಿ, ಸಾಹಿತಿ ಪಾರ್ವತಿ ಬಸವರಾಜ ಸೊನ್ನದ (ತಳವಾರ)- ಅವರನ್ನು “ರಾಜ್ಯ ಮಟ್ಟದ ಬಸವ ಚೇತನ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ ಎಂದು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪುರ ನಗರದ ಕಂದಗಲ್ ಹನುಮಮಂತರಾಯ ರಂಗಮಂದಿರದಲ್ಲಿ ಅಮ್ಮ ಫೌಂಡೇಶನ್ ವತಿಯಿಂದ ಜುಲೈ 06 ರಂದು ಜರುಗಲಿರುವ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವದಲ್ಲಿ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಹಲವು ವರ್ಷಗಳಿಂದ ಸಾಹಿತ್ಯ -ಕ್ಷೇತ್ರಗಳಲ್ಲಿ ತಮ್ಮದೆ ಆದ ನಿಸ್ವಾರ್ಥ ಸೇವೆ ಸಲ್ಲಿಸಿ, ಎಲೆಮರೆ ಕಾಯಿಯಂತೆ ಸಮಾಜಮುಖಿಯಾಗಿರುವ ತಮಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲು ಹೆಮ್ಮೆ ಎನಿಸುತ್ತಿದೆ. ನಾಡಿನ ಶ್ರೇಷ್ಠ ಸಾಹಿತಿಗಳು, ಜನಪ್ರತಿನಿಧಿಗಳು, ಅಧಿಕಾರಿಗಳು ಬಸವ ಚಿಂತಕರ ಸಮ್ಮುಖದಲ್ಲಿ ಕಾರ್ಯಕ್ರಮ ಜರುಗಲಿದೆ. ತಾವು ತಮ್ಮ ಹಿತೈಸಿ ಬಳಗದೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಶಸ್ತಿ ಸ್ವೀಕರಿಸಲು ಕೋರುತ್ತೇವೆ ಎಂದು ಅಮ್ಮ ಫೌಂಡೇಶನ್ ವತಿಯಿಂದ ತಿಳಿಸಿದ್ದಾರೆ.