• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಸಚಿವ ಎಂ.ಬಿ. ಪಾಟೀಲ ಘೋಷಣೆ ಪತ್ರಕರ್ತರ ಆರೋಗ್ಯ ಹಿತರಕ್ಷಣೆಗೆ ಠೇವಣಿ

      Voiceofjanata.in

      July 20, 2025
      0
      ಸಚಿವ ಎಂ.ಬಿ. ಪಾಟೀಲ ಘೋಷಣೆ ಪತ್ರಕರ್ತರ ಆರೋಗ್ಯ ಹಿತರಕ್ಷಣೆಗೆ ಠೇವಣಿ
      0
      SHARES
      43
      VIEWS
      Share on FacebookShare on TwitterShare on whatsappShare on telegramShare on Mail

      ಸಚಿವ ಎಂ.ಬಿ. ಪಾಟೀಲ ಘೋಷಣೆ ಪತ್ರಕರ್ತರ ಆರೋಗ್ಯ ಹಿತರಕ್ಷಣೆಗೆ ಠೇವಣಿ

      ವಿಜಯಪುರ : ಪತ್ರಕರ್ತರ ಸಕಲ ಸಮಸ್ಯೆ ನಿವಾರಣೆಗಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅದಕ್ಕೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಪ್ರಾಮಾಣಿಕವಗಿ ಪ್ರಯತ್ನ ಮಾಡುವ ಜೊತೆಗೆ ಪತ್ರಕರ್ತರ ಆರೋಗ್ಯ ರಕ್ಷಣೆಗಾಗಿ ಐದು ಲಕ್ಷ ರೂ.ಗಳ ಠೇವಣಿ ಇರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಘೋಷಿಸಿದರು.
      ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

      ಈ ವೇಳೆ ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರು ಪತ್ರಕರ್ತರ ಆರೋಗ್ಯಕ್ಕಾಗಿ ಠೇವಣಿ ಇರಿಸಿ ಎಂಬ ಮನವಿಗೆ ವೇದಿಕೆಯಲ್ಲಿಯೇ ಸ್ಪಂದಿಸಿ ಸಚಿವ ಪಾಟೀಲ ಠೇವಣಿ ಇರಿಸುವ ಭರವಸೆ ನೀಡಿದರು.

      ನಂತರ ಸಂದೇಶ ಮುಂದುವರೆಸಿದ ಸಚಿವ ಪಾಟೀಲರು, ಸ್ವಾತಂತ್ರ್ಯಪೂರ್ವದಲ್ಲಿ, ಸ್ವಾತಂತ್ರ್ಯ ಚಳವಳಿಯಲ್ಲಿ ಹಾಗೂ ಸ್ವಾತಂತ್ರ್ಯ ನಂತರದಲ್ಲಿ ಪತ್ರಿಕೋದ್ಯಮ ನಾಲ್ಕನೇಯ ಸ್ತಂಭವಾಗಿ ಮಹತ್ವದ ಪಾತ್ರ ವಹಿಸುತ್ತಲೇ ಬಂದಿದೆ ಎಂದರು.
      ಈಗ ಡಿಜಿಟಿಲ್ ಮಿಡಿಯಾ ಕಾಲ, ಮೊಬೈಲ್ ಪರದೆಯಲ್ಲಿಯೇ ಅಂತಾರಾಷ್ಟ್ರೀಯ ಪತ್ರಿಕೆ, ಟಿವಿ ವೀಕ್ಷಿಸಬಹುದು, ಉಳಿದ ದೇಶಗಳಲ್ಲಿ ಮುದ್ರಣ ಮಾಧ್ಯಮಗಳು ಸಂಪೂರ್ಣ ಕ್ಷೀಣಿಸಿವೆ,
      ಕೃತಕ ಬುದ್ಧಿಮತ್ತೆ ಪತ್ರಿಕೋದ್ಯಮಕ್ಕೂ ಸಹ ಪರಿಣಾಮ ಬೀರಿದೆ, ಈ ಎಲ್ಲ ಸವಾಲುಗಳನ್ನು ಎದುರಿಸಬೇಕಿದೆ ಎಂದರು.
      ಪತ್ರಕರ್ತರಿಗೆ, ರಾಜಕಾರಣಿ, ಪೊಲೀಸರಿಗೆ ರವಿವಾರ ಇಲ್ಲವೇ ಇಲ್ಲ, ಅಷ್ಟೊಂದು ಕಾರ್ಯ ಒತ್ತಡ ಈ ಕ್ಷೇತ್ರಗಳ ಮೇಲಿವೆ ಎಂದರು.

      ಡಾ.ಫ.ಗು. ಹಳಕಟ್ಟಿ ಅವರು ಆರಂಭಿಸಿದ ನವ ಕರ್ನಾಟಕ ಪತ್ರಿಕೆ ಕರ್ನಾಟಕ ಏಕೀಕರಣಕ್ಕೆ ಬಹುದೊಡ್ಡ ಕೊಡುಗೆ ನೀಡಿತು, ಆ ಮೂಲಕ ವಿಜಯಪುರ ಜಿಲ್ಲೆ ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆ ಅನನ್ಯ, ಸಂಯುಕ್ತ ಕರ್ನಾಟಕದ ಅನನ್ಯ ಚೇತನ ಮೊಹರೆ ಹನುಮಂತರಾಯರು, ವಿ.ಬಿ. ನಾಯಕರು, ಟಿ.ಕೆ. ನಾಯಕರು ಹೀಗೆ ಅನೇಕ ಪತ್ರಕರ್ತರು ಪತ್ರಿಕೋದ್ಯಮಕ್ಕೆ ಕೊಡುಗೆ ನೀಡಿದ್ದಾರೆ ಎಂದರು.

      ವೈಜ್ಞಾನಿಕ, ಸಂಶೋಧನಾತ್ಮಕ ಬರಹಗಳು ಮೂಡಿಬರಲಿ

      ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಮಾತನಾಡಿ, ವೈಜ್ಞಾನಿಕ ಹಾಗೂ ಸಂಶೋಧನಾತ್ಮಕ ಬರವಣಿಗೆಗಳು ಇಲ್ಲದೇ ಇರುವುದರಿಂದ‌ ಸಮಾಜಕ್ಕೆ ಅನೇಕ ರೀತಿಯ ಹಿನ್ನಡೆಯಾಗಿದೆ, ಈ ನಿಟ್ಟಿನಲ್ಲಿ ಸಂಶೋಧನಾತ್ಮಕ, ವೈಜ್ಞಾನಿಕ ನೆಲೆಗಟ್ಟಿನ ವಿಚಾರಗಳು ಪ್ರಸಾರಗೊಳ್ಳಬೇಕಿದೆ ಎಂದರು.

      ದೃಶ್ಯ ಮಾಧ್ಯಮಗಳಿಗೆ ಬ್ರೇಕಿಂಗ್ ನ್ಯೂಸ್ ಪ್ರಥಮಾದ್ಯತೆಯಾಗಿ ಪ್ರಗತಿ ಎರಡನೇಯ ಆದ್ಯತೆಯಾಗಿದೆ, ಆದರೆ ಪತ್ರಿಕೆಗಳಿಗೆ ಪ್ರಗತಿ ವಿಷಯವೇ ಅಗ್ರವಾಗಿರುವುದು ಸಂತೋಷದ ಸಂಗತಿ ಎಂದರು.

      ಡಾ.ಫ.ಗು. ಹಳಕಟ್ಟಿ, ಮೊಹರೆ ಹನುಮಂತರಾಯರು ಪತ್ರಿಕಾ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ಪತ್ರಕರ್ತರ ಮೇಲಿದೆ ಎಂದರು.

      ಶಿವನ ಮೂರನೇಯ ಕಣ್ಣಿನಂತೆ ಪತ್ರಕರ್ತರು ಸಹ ಸಮಾಜದ ನಾಲ್ಕನೇಯ ಕಣ್ಣು ಇದ್ದಂತೆ, ಸಮಾಜದ ಸಮಸ್ಯೆಗಳ ನಿವಾರಣೆಗಾಗಿ ಪತ್ರಕರ್ತರು ಕಣ್ಣು ತೆರೆಯಬೇಕು ಎಂದರು.
      ರಾಜ್ಯ ಸರ್ಕಾರ ಪತ್ರಕರ್ತರ ಹಿತರಕ್ಷಣೆಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು, ಪತ್ರಕರ್ತರ ಆರೋಗ್ಯ ರಕ್ಷಣೆಗಾಗಿ ಠೇವಣಿ ಇರಿಸುವ ಕಾರ್ಯಕ್ಕೆ ನಾನು ಕೈ ಜೋಡಿಸುವೆ ಎಂದು ಐದು ಲಕ್ಷ ರೂ.ಗಳ ಠೇವಣಿ ಇರಿಸುವುದಾಗಿ ಘೋಷಿಸಿದರು.

      ಇಬ್ಬರು ಸಚಿವರಿಂದ ವಿಜಯಪುರ ಜಿಲ್ಲಾ ಪತ್ರಕರ್ತರ ಸಂಘಕ್ಕೆ ತಲಾ ಐದು ಲಕ್ಷ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಹಣ ನೀಡುವುದಾಗಿ ಘೋಷಿಸಿದ್ದಾರೆ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ .ಬಿ ಪಾಟೀಲ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ್ ಪಾಟೀಲವರು ಜಿಲ್ಲೆಯ ಪತ್ರಕರ್ತರಿಗೆ ತಮ್ಮ ವೈಯಕ್ತಿಕವಾಗಿ ತಲಾ 5 ಲಕ್ಷ ಹಣವನ್ನು ಬ್ಯಾಂಕಿನಲ್ಲಿ ಎಫ್ ಡಿ ಮಾಡಿ ಆ ಹಣದಲ್ಲಿ ಬರುವ ಆದಾಯದಲ್ಲಿ ಜಿಲ್ಲೆಯ ಪತ್ರಕರ್ತರ ಸಮಸ್ಯೆಯನ್ನು ಪರಿಹರಿಸಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

      ಮಾನ್ಯತೆ ಇಲ್ಲದ ಪತ್ರಕರ್ತರಿಗೂ ಮಾಧ್ಯಮ ಸಂಜೀವಿನಿ

      ಮಾನ್ಯತೆ ಇಲ್ಲದ ಪತ್ರಕರ್ತರಿಗೂ ಮಾಧ್ಯಮ ಸಂಜೀವಿನಿ ವಿಸ್ತರಿಸಿ ಎಂದು ಕಾನಿಪ ರಾಜ್ಯಾಧ್ಯಕ್ಷ ಶಿವಾನಂದ ಮನವಿ ಮಾಡಿಕೊಂಡರು.

      ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಆಶಯ ನುಡಿಗಳನ್ನಾಡಿದ ಅವರು, ಪತ್ರಕರ್ತರ ಆರೋಗ್ಯ ರಕ್ಷಣೆ ಅಭಯ ತುಂಬುವಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಂಜೀವಿನಿ ಯೋಜನೆ ವರದಾನವಾಗಿದೆ, ಮಾನ್ಯತೆ ಪಡೆದ ಪತ್ರಕರ್ತರಿಗೆ ಈ ಯೋಜನೆ ಜಾರಿಯಾಗಿದ್ದು, ಮಾನ್ಯತೆ ಇಲ್ಲದವರು ಸಹ ಈ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು ಅವರಿಗೂ ಈ ಯೋಜನೆ ವಿಸ್ತರಿಸಿ ಎಂದರು.

      ಜ್ಞಾನಸ್ಥ, ನ್ಯಾಯಾಧೀಶ ಸ್ಥಾನದಲ್ಲಿ ನಿಂತು ಸಮಾಜದ ನಂಬಿಕೆಯನ್ನು ಪತ್ರಕರ್ತ ಉಳಿಸಬೇಕಿದೆ, ಆದರೆ ಇತ್ತೀಚಿನ ದಿನಗಳಲ್ಲಿ ನಾನು ಪತ್ರಕರ್ತ ಎಂದು ಹೇಳುವವರ ಸಂಖ್ಯೆ ಅಧಿಕವಾಗಿದೆ, ಸುಳ್ಳು, ಜೊಳ್ಳು ಕ್ರಿಮಿನಲ್, ಬ್ಲಾಕ್ ಮೇಲ್ ಮಾಡುವ ನಕಲಿ ಪತ್ರಕರ್ತರ ಹಾವಳಿ ಸಹ ಅಧಿಕವಾಗಿದ್ದು, ಇದಕ್ಕೆ ಕಡಿವಾಣ ಹಾಕಿ ನೈಜ ಪತ್ರಕರ್ತರನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಸಹ ಸಂಘದ ಮೇಲಿದೆ ಎಂದರು.

      ಪತ್ರಿಕಾ ವೃತ್ತೀಯ ಮೌಲ್ಯಗಳ ಶ್ರೇಯಾಂಕದಲ್ಲಿ ನಾವು ೧೫೧ ಸ್ಥಾನದಲ್ಲಿರುವುದು ಕಳವಳಕಾರಿಯಾದ ಸಂಗತಿ, ಏತನ್ಮಧ್ಯೆ ಇಂದಿನ ಪತ್ರಿಕೋದ್ಯಮ ಹೇಳಿಕೆ,ಪ್ರತಿ ಹೇಳಿಕೆಯ ಸ್ಟೆಟಮೆಂಟ್ ಓರಿಯಂಟೇಷನ್ ಸೀಮಿತವಾಗುತ್ತಿರುವುದು ಸಹ ನೋವಿನ ಸಂಗತಿ, ಪತ್ರಕರ್ತ ತಾನು ತನ್ನ ಜವಾಬ್ದಾರಿಯನ್ನು ನಿಭಾಯಿಸುತ್ತಿರುವ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ, ಮಹಾತ್ಮಾ ಗಾಂಧೀಜಿ, ಡಾ.ಅಂಬೇಡ್ಕರ್ ಸತ್ಯಕ್ಕಾಗಿ ಪತ್ರಿಕೋದ್ಯಮವನ್ನು ಮೀಸಲಾಗಿರಿಸಿದ್ದರು ಎಂದರು. ಯಾವ ಸುದ್ದಿ ಕೊಡಬೇಕು, ಯಾವ ಸುದ್ದಿ ಕೊಡಬಾರದು ಎಂದು ಹೃದಯದಲ್ಲಿ ನ್ಯಾಯಾಧೀಶರಾಗಿ ಅದನ್ನು ಸಮರ್ಥವಾಗಿ ನಿರ್ಣಯಿಸಬೇಕು ಎಂದರು.

      ಪತ್ರಕರ್ತರ ವೃತ್ತಿ ಧಾವಂತಪೂರ್ಣ, ಈ ಧಾವಂತದ ನಡುವೆಯೂ ವೃತ್ತಿ ಬದ್ಧತೆಯನ್ನು ನಿಭಾಯಿಸಿ ಮುನ್ನಡೆಯಬೇಕಿದೆ ಎಂದರು‌.

      ಗ್ರಾಮೀಣ ಪತ್ರಕರ್ತರು ಸರ್ಕಾರದ ಗಮನ ಸೆಳೆಯಲಿ

      ಗ್ರಾಮೀಣ ಪತ್ರಕರ್ತರ ಸವಾಲುಗಳ ಕುರಿತು ಉಪನ್ಯಾಸ ಮಂಡಿಸಿದ ಹಿರಿಯ ಪತ್ರಕರ್ತ ಗೋಪಾಲ ನಾಯಕ ‌ಮಾತನಾಡಿ, ಗ್ರಾಮೀಣ ಭಾಗದಲ್ಲೂ ಸಹ ಪತ್ರಿಕೋದ್ಯಮ ವಿಶಾಲವಾಗಿ ವ್ಯಾಪಿಸಿದೆ, ಗ್ರಾಮೀಣ ಪತ್ರಕರ್ತರು ತಮ್ಮ ಭಾಗದ ದೇವಾಲಯ, ಅಪೂರ್ವ ಸ್ಮಾರಕಗಳ ಇತಿಹಾಸವನ್ನು ಸಂಶೋಧಿಸಿ ಪ್ರಕಟಿಸಿ ಅವುಗಳನ್ನು ಪ್ರವಾಸೋದ್ಯಮ ಕ್ಷೇತ್ರಗಳನ್ನಾಗಿ ಬೆಳೆಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳುವ ಜೊತೆಗೆ ತಮ್ಮ ಗ್ರಾಮಕ್ಕೆ ಯಾವ ಕೈಗಾರಿಕೆ ಬರಬೇಕು, ಯಾವ ಯೋಜನೆ ಬರಬೇಕು ಎಂಬ ಬಗ್ಗೆ ಬೆಳಕು ಚೆಲ್ಲಿ ಸರ್ಕಾರದ ಗಮನ ಸೆಳೆಯಬೇಕು ಎಂದು ಕರೆ ನೀಡಿದರು‌‌.

      ಕಾರ್ಯಕಾರಿ ಸಮಿತಿ ಸದಸ್ಯ ಅಶೋಕ ಯಡಹಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣ ಭಾಗದ ಪರ್ತಕರ್ತರ ಸಂಚಾರಕ್ಕೆ ಉಚಿತ ಬಸ್ ಪಾಸ್ ವ್ಯವಸ್ಥೆ ಕಲ್ಪಿಸಿರುವ ಸರ್ಕಾರದ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
      ಪತ್ರಕರ್ತರು ಜೀವನ ಮೇಲ್ನೋಟಕ್ಕೆ ಸರಿ ಕಂಡರೂ ಸಹ ಅನೇಕ ತೊಂದರೆಯನ್ನು ಪರ್ತಕರ್ತರು ಎದುರಿಸುತ್ತಿದ್ದಾರೆ ಎಂದರು.

      ಪತ್ರಿಕೋದ್ಯಮ ಇತಿಹಾಸ, ಪತ್ರಕರ್ತರ ತಲ್ಲಣಗಳ ಕುರಿತು ವಿವರಿಸಿದರು.

      ಸಚಿವರಾದ ಡಾ.ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ, ಡಿ.ವೈ.ಎಸ್.ಪಿ. ಬಸವರಾಜ ಯಲಿಗಾರ, ಪಾಲಿಕೆ ಆಯುಕ್ತ‌ ವಿಜಯಕುಮಾರ ಮೆಕ್ಕಳಕಿ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಕಾನಿಪ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ, ಪ್ರಮುಖರಾದ ಭವಾನಿಸಿಂಗ್ ಠಾಕೂರ್, ಕಾನಿಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಕಾನಿಪ ರಾಷ್ಟ್ರೀಯ ಮಂಡಳಿ ಸದಸ್ಯ ಮಹೇಶ ಶೆಟಗಾರ, ಕಾನಿಪ ಪ್ರಮುಖರಾದ ಕೆ.ಕೆ. ಕುಲಕರ್ಣಿ, ಕೌಶಲ್ಯ ಪನಾಳಕರ ಮೊದಲಾದವರು ಉಪಸ್ಥಿತರಿದ್ದರು.

      ಪತ್ರಕರ್ತ ಗುರು ಲೋಕೋರೆ ಪ್ರಾರ್ಥಿಸಿದರು. ಕಾನಿಪ ಜಿಲ್ಲಾಧ್ಯಕ್ಷ ಪ್ರಕಾಶ ಬೆಣ್ಣೂರ ಸ್ವಾಗತಿಸಿದರು. ಹಿರಿಯ ಪತ್ರಕರ್ತ ಇಂದುಶೇಖರ ಮಣ್ಣೂರ ಕಾರ್ಯಕ್ರಮ ನಿರೂಪಿಸಿದರು.

      Tags: #indi / vijayapur#Minister M.B. Patiala Declaration Deposits Journalists' Health Protection#State News#Today News#Voice Of Janata#Voiceofjanata.in#ಸಚಿವ ಎಂ.ಬಿ. ಪಾಟೀಲ ಘೋಷಣೆ ಪತ್ರಕರ್ತರ ಆರೋಗ್ಯ ಹಿತರಕ್ಷಣೆಗೆ ಠೇವಣಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      June 21, 2026
      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      June 21, 2026
      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      June 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.