• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

      Voiceofjanata.in

      July 28, 2025
      0
      ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ
      0
      SHARES
      84
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮ ಅಡಳಿತಾಧಿಕಾರಿಗಳು

      ಜನಸ್ನೇಹಿಯಾಗಿ, ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಬೇಕು: ಶಾಸಕ ನಾಡಗೌಡ

      ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ತಂತ್ರಜ್ಞಾನ ಇಂದಿನ ದಿನಗಳಲ್ಲಿ ಸಾಕಷ್ಟು ಮುಂದುವರಿದಿದೆ. ಇದನ್ನು ಸರಿಯಾಗಿ ಬಳಸಿಕೊಂಡು ಕೆಲಸ ಮಾಡುವ ಮೂಲಕ ಗ್ರಾಮ ಅಡಳಿತಾಧಿಕಾರಿಗಳು
      ಜನಸ್ನೇಹಿಯಾಗಿ, ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಿಕೊಡುವ ಮೂಲಕ ಸರ್ಕಾರದ ಉದ್ದೇಶ ಈಡೇರಿಸಬೇಕು ಎಂದು ಶಾಸಕ, ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ ಹೇಳಿದರು.
      ತಾಲೂಕಾಡಳಿತ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸರ್ಕಾರದಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಪೂರೈಕೆಯಾಗಿರುವ ಲ್ಯಾಪ್‌ಟಾಪ್‌ಗಳನ್ನು ಸಾಂಕೇತಿಕವಾಗಿ ವಿತರಿಸುವ ಮತ್ತು ವರ್ಗಾವಣೆಗೊಂಡಿರುವ ತಪಶೀಲ್ದಾರ್ ಬಲರಾಮ ಕಟ್ಟಿಮನಿ ಅವರನ್ನು ಬೀಳ್ಕೊಡುವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
      ಕಂದಾಯ ಇಲಾಖೆಯ ಎಲ್ಲ ದಾಖಲೆಗಳನ್ನು ಗಣಕೀಕರಣ ಮಾಡುವ ವ್ಯವಸ್ಥೆ ಯಶಸ್ವಿಯಾಗಿದೆ. ಆದರೂ ಇನ್ನೂ ಕೆಲವು ಸಮಸ್ಯೆಗಳಿವೆ. ಅವುಗಳನ್ನು ಶೀಘ್ರ ಬಗೆಹರಿಸಿ ಸಂಪೂರ್ಣ ವ್ಯವಸ್ಥೆಯನ್ನೇ ಮಾಡಲು ಸರ್ಕಾರ ಕಾರ್ಯೋನ್ಮುಖವಾಗಿದೆ. ಅಧಿಕಾರಿಗಳು ಸಮಸ್ಯೆಗೆ ಶೀಘ್ರ ಪರಿಹಾರ ಕಂಡು ಹಿಡಿದು ಜನಸೇವೆಗೆ ಹೆಚ್ಚಿನ ಒತ್ತು ನೀಡುವುದನ್ನು ಎಂದರು.
      ಗಣಕೀಕರಣ ಅಧಿಕಾರಿಗಳಿಂದ ಆಗಬೇಕಿರುವ ಕೆಲಸಕ್ಕಾಗಿ ಜನರು ರಾಜಕಾರಣಿಗಳ ಹತ್ತಿರ ಬರುತ್ತಿದ್ದಾರೆ ಶಾಸಕ, ಸಂಸದ ಯಾರೇ ಆಗಿರಲಿ ಜನಪ್ರತಿನಿಧಿಯಾದವರು ಶಾಸನಗಳನ್ನು ರಚಿಸುವ ಕೆಲಸ ಮಾಡುತ್ತಾರೆ. ಜನರು ಶಾಸಕರ ಹತ್ತಿರ ತಮ್ಮ ಕೆಲಸಕ್ಕಾಗಿ ಅಧಿಕಾರಿಗಳಿಗೆ ಹೇಳುವಂತೆ ಬರುವುದು ಸರಿಯಲ್ಲ ಸಂಬಂಧಿಸಿದ ಅಧಿಕಾರಿಗಳನ್ನೇ ನೇರವಾಗಿ ಸಂಪರ್ಕಿಸಿ ಕೆಲಸ ಮಾಡಿಸಿಕೊಳ್ಳುವುದು ಸರಿಯಾದ ಮಾರ್ಗ ಎಂದರು.
      ಇಂದು ಎಲ್ಲ ಅರ್ಜಿಗಳನ್ನು ಆನ್‌ ಲೈನ್ ಮೂಲಕವೇ – ಹಾಕುವ ವ್ಯವಸ್ಥೆ ಜಾರಿಯಲ್ಲಿದೆ. ತಂತ್ರಜ್ಞಾನ ಬಳಸಿಕೊಂಡು ವ್ಯವಸ್ಥೆಯಲ್ಲಿ ಅಧಿಕಾರಿಗಳು ಶ್ರಮಿಸಬೇಕು. ಜನರಿಗೆ ಹತ್ತಿರವಾಗಿ ಕೆಲಸ ಮಾಡಬೇಕು. ಸಾರ್ವಜನಿಕರು ಕೂಡಾ ಆನ್ ಲೈನ್ ಅರ್ಜಿಯ ವ್ಯವಸ್ಥೆಯನ್ನು ಅರಿತುಕೊಂಡು ಮೊದಲು ಅರ್ಜಿ ಸಲ್ಲಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಇದನ್ನು ಬಿಟ್ಟು ಜನರು ಪತ್ರ ಕೊಡ್ರಿ ಎಂದು ಮುಂಜಾನೆಯಿಂದ ಸಂಜೆವರೆಗೂ ನನ್ನ ಮನೆಗೆ ಬಂದು ಕೂಡುತ್ತಾರೆ. ಜನರು ಕಾನೂನುಗಳನ್ನು ಸರಿಯಾಗಿ ಅರ್ಥೈಸಿಕೊಂಡು ಅದರಂತೆ ನಡೆದುಕೊಳ್ಳಬೇಕು ಎಂದರು.
      ಬೇರೆಡೆ ವರ್ಗವಾಗಿರುವ ಇಲ್ಲಿನ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಜನರಿಗೆ ಸ್ಪಂದಿಸುವ ಅವರ ಮನೋಭಾವ ಮೆಚ್ಚುವಂಥದ್ದು ಮುಂದೆ ಬರುವ ತಹಶೀಲ್ದಾರ್ ಅವರು ಕೂಡಾ ಜನರಿಗೆ ಹತ್ತಿರವಾಗಿ ಕೆಲಸ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
      ಇದೇ ಸಂದರ್ಭ ಕಟ್ಟಿಮನಿ ಅವರನ್ನು ಬೀಳ್ಕೊಡುವ ಹಿನ್ನೆಲೆ ನಡೆದ ಸಮಾರಂಭದಲ್ಲಿ ತಾಳಿಕೋಟೆ ತಹಶೀಲ್ದಾರ್ ವಿನಯಾ ಹೂಗಾರ, ಮುದ್ದೇಬಿಹಾಳ ಪ್ರಭಾರ ವಹಿಸಿಕೊಂಡ ನಿಡಗುಂದಿ ತಹಶೀಲ್ದಾರ್ ಎ.ಡಿ.ಅಮರಾವಡಗಿ, ಕಂದಾಯ ನಿರೀಕ್ಷಕ ವೆಂಕಟೇಶ ಅಂಬಿಗೇರ ಇನ್ನಿತರರು ಕಟ್ಟಿಮನಿ ಅವರ ಕಾರ್ಯವೈಖರಿಗೆ ಮೆಚ್ಚುಗೆ ಸೂಚಿಸಿ ಮಾತನಾಡಿದರು.
      ಸನ್ಮಾನ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಕಟ್ಟಿಮನಿ, 22 ತಿಂಗಳು ಇಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ತೃಪ್ತಿ ಇದೆ. ಯಾವುದೋ ಕಾರಣಕ್ಕಾಗಿ ಕೆಲಸದ ವಿಷಯದಲ್ಲಿ ಸಿಬ್ಬಂದಿ ಮೇಲೆ ಹರಿಹಾಯ್ದಿದ್ದರೂ ಅದನ್ನು ವೈಯುಕ್ತಿಕವಾಗಿ ಭಾವಿಸಬಾರದು. ಸಿಬ್ಬಂದಿ ಸರಿಯಾಗಿ ಕೆಲಸ ಮಾಡಿದರೆ ಮಾತ್ರ ಅಧಿಕಾರಿಗಳೂ ಸರಿಯಾಗಿ ಕೆಲಸ ಮಾಡುತ್ತಾರೆ ಅನ್ನೋದನ್ನು ಅರಿತುಕೊಳ್ಳಬೇಕು. ಬರುವಂಥ ದಿನಗಳಲ್ಲಿ ಆಡಳಿತ ಡಿಜಿಟಲೈಸ್ ಆಗಲಿದ್ದು ಎಲ್ಲರೂ ಅದಕ್ಕೆ  ಹೊಂದಿಕೊಂಡು ಕೆಲಸ ಮಾಡಬೇಕು ಎಂದರು.
      ಪ್ರಭಾರ ಅಧಿಕಾರ ವಹಿಸಿಕೊಂಡ ನಿಡಗುಂದಿ ತಹಶೀಲ್ದಾರ್ ಎ.ಡಿ.ಅಮರಾವದಗಿ ಮಾತನಾಡಿ, ಸರ್ಕಾರಿ ನೌಕರರಿಗೆ ವರ್ಗಾವಣೆ ಸಹಜ ಪ್ರಕ್ರಿಯೆ, ಕಟ್ಟಿಮನಿ ಅವರ ಬಗ್ಗೆ ಸಿಬ್ಬಂದಿ ಇಟ್ಟುಕೊಂಡಿರುವ ಅಭಿಮಾನ ಮೆಚ್ಚುವಂಥದ್ದು ಕಂದಾಯ ಇಲಾಖೆಯ ಎಲ್ಲ ಸಿಬ್ಬಂದಿ ಸರ್ಕಾರದ ಕೆಲಸಗಳನ್ನು ಸಾರ್ವಜನಿಕರಿಗೆ ವಿಳಂಬ ಇಲ್ಲದೆ ಮಾಡಿಕೊಡುವ ಪದ್ಧತಿ ಪಾಲಿಸಿದರೆ ಆಡಳಿತ ಸುಲಭವಾಗುತ್ತದೆ ಎಂದರು.
      ಇದೇ ವೇಳೆ ತಹಶೀಲ್ದಾರ್ ಬಲರಾಮ ಕಟ್ಟಿಮನಿ ಅವರನ್ನು ಗ್ರಾಮ ಆಡಳಿತಾಧಿಕಾರಿಗಳು, ಕಂದಾಯ ಇಲಾಖೆ ಸಿಬ್ಬಂದಿ ಸನ್ಮಾನಿಸಿ ಬೀಳ್ಕೊಟ್ಟರು. ಪ್ರಭಾರ ವಹಿಸಿಕೊಂಡ ತಹಶಿಲ್ದಾರ ಎ.ಡಿ.ಅಮರಾವದಗಿ ಅವರನ್ನು ಸನ್ಮಾನಿಸಿ ಸ್ವಾಗತಿಸಿಕೊಂಡರು.
      ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,  ಆಡಳಿತಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಜೂಲಗುಡ್ಡ ತಾಲೂಕಾಧ್ಯಕ್ಷ ಮನೋಜ್ ರಾಠೋಡ, ಪ್ರಧಾನ ಕಾರ್ಯದರ್ಶಿ ರಿಯಾಜ್ ನಾಯೋಡಿ, ಕಂದಾಯ ನೌಕರರ ಸಂಘದ ತಾಲೂಕಾಧ್ಯಕ್ಷ ಶ್ರೀನಿವಾಸ ಹುನಗುಂದ, ಉಪ ತಹಶೀಲ್ದಾರ್ ಗಳಾದ ಆರ್.ಬಿ.ಬಾಗೇವಾಡಿ, ಎನ್.ಬಿ.ದೊರೆ, ಶಕುಂತಲಾ ಸಜ್ಜನ, ಮಹೇಶ ಗೋನಾಳ, ಕಂದಾಯ ನಿರೀಕ್ಷಕರಾದ ಡಿ.ಎಸ್.ತಳವಾರ, ಬಸನಗೌಡ ಪಾಟೀಲ, ಗ್ರಾಮ ಆಡಳಿತಾಧಿಕಾರಿಗಳು, ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳು‌ ಸೇರಿದಂತೆ ಉಪಸ್ಥಿತರಿದ್ದರು.
      ಶಾಸಕರಾದ ನಾವು ಫಲಿಸಿಟೇಟರ್ಸ್ ( ಅನುಕೂಲಕಲ್ಪಿಸಿಕೊಡುವವರು) ಅಲ್ಲ ಕೆಲಸ ಆಗಬೇಕಾದ ಇಲಾಖೆಗೆ ಜನರು ಹೋಗಿ ಕೆಲಸ ಮಾಡಿಸಿಕೊಳ್ಳಬೇಕು. ಆದರೆ ರಾಜಕೀಯವಾಗಿ ಹೇಳಿಸಿಕೆಲಸ ಮಾಡಿಸಿಕೊಳ್ಳುವುದು ಸರಿಯಲ್ಲ ಇದು ಕೆಲಸ ಮಾಡುವ ಅಧಿಕಾರಿಗಳಿಗೂ ನೋವು, ಬೇಸರ ಉಂಟು ಮಾಡುತ್ತದೆ. ಜನರು ಮೊದಲು ಅಧಿಕಾರಿ ಸಂಪರ್ಕಿಸಿ ಕೆಲಸ ಮಾಡಿಕೊಡದಿದ್ದರೆ ಆನಂತರ ನಮ್ಮ ಹತ್ತಿರ ಬರಬೇಕು.
      ಸಿ.ಎಸ್.ನಾಡಗೌಡ, ಶಾಸಕರು ಮುದ್ದೇಬಿಹಾಳ
      Tags: #indi / vijayapur#LAPTOP FROM LAPTOP to Village Administration#Public News#State News#Today News#Voice Of Janata#Voiceofjanata.in#ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      ತಳವಾರ ಸಮಾಜದ ಉತ್ತಮ ಭವಿಷ್ಯಕ್ಕಾಗಿ ಜನಗಣತಿಯಲ್ಲಿ ಪಾಲ್ಗೊಳ್ಳಿ..! ರೇವಣ್ಣ

      April 16, 2026
      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      ಗುತ್ತೇದಾರ್ ವಿರುದ್ಧ ಪ್ರಕಾಶ ಜಮಾದಾರ ವಾಗ್ದಾಳಿ

      April 15, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.