ಇಂಡಿಯಲ್ಲಿ ಶಿಕ್ಷಕರ ದಿನೋತ್ಸವ ಆಯೋಜನೆ..ಎಂದು ಗೊತ್ತಾ..?
ಇಂಡಿ: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ಅವರ ವತಿಯಿಂದ ಭಾರತರತ್ನ ಡಾ.ಎಸ್ ರಾಧಾಕೃಷ್ಣನ್ ಅವರ ಜನ್ಮದಿನೋತ್ಸವದ ಅಂಗವಾಗಿ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ಸಪ್ಟೆಂಬರ್ 6 ಶನಿವಾರದಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಗುರುಭವನದಲ್ಲಿ ಆಯೋಜಿಸಲಾಗಿದೆ.
ಗೋಳಸಾರದ ಪರಮಪೂಜ್ಯ ಸದ್ಗುರು ಅಭಿನವ ಪುಂಡಲಿಂಗ ಮಹಾಶಿವಯೋಗಿಗಳು ದಿವ್ಯ ಸಾನಿಧ್ಯ ವಹಿಸುವರು.ಇಂಡಿ ಮತಕ್ಷೇತ್ರದ ಶಾಸಕರಾದ ಯಶವಂತರಾಯಗೌಡ ವ್ಹಿ ಪಾಟೀಲ ಅವರು ಅಧ್ಯಕ್ಷತೆ ವಹಿಸಿ ಸಮಾರಂಭವನ್ನು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ ಬಿ ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ,ನವದೆಹಲಿ ಕರ್ನಾಟಕ ವಿಶೇಷ ಪ್ರತಿನಿಧಿ-2 ಹಾಗೂ ವಿಧಾನ ಪರಿಷತ್ ಶಾಸಕರಾದ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರು ಮತ್ತು ಮುದ್ಧೇಬಿಹಾಳ ಮತಕ್ಷೇತ್ರದ ಶಾಸಕರಾದ ಅಪ್ಪಾಜಿ ಸಿ ಎಸ್ ನಾಡಗೌಡ, ವಿಜಯಪುರ ಲೋಕಸಭಾ ಸಂಸದರಾದ ರಮೇಶ ಜಿಗಜಿಣಗಿ, ರಾಜ್ಯಸಭೆಯ ಸಂಸದರಾದ ಡಾ.ಸುಧಾ ಮೂರ್ತಿ, ವಿಧಾನ ಪರಿಷತ್ ಶಾಸಕರಾದ ಹಣಮಂತ ರಾ ನಿರಾಣಿ, ವಿಧಾನ ಪರಿಷತ್ ಶಾಸಕರಾದ ಸುನೀಲಗೌಡ ಪಾಟೀಲ, ವಿಧಾನ ಪರಿಷತ್ ಶಾಸಕರಾದ ಪಿ ಎಚ್ ಪೂಜಾರ, ಸಿಂದಗಿ ಮತಕ್ಷೇತ್ರದ ಶಾಸಕರಾದ ಅಶೋಕ ಮನಗೂಳಿ, ಬೆಂಗಳೂರಿನ
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ವಿಜಯಪುರ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಇಲಿಯಾಸ ಬೋರಾಮಣಿ, ಇಂಡಿ ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಇಂಡಿ ತಾಲೂಕ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪ್ರಶಾಂತ ಕಾಳೆ ಅವರು ಆಗಮಿಸುವರು.
ವಿಶೇಷ ಆಹ್ವಾನಿತರಾಗಿ ಇಂಡಿ ಉಪವಿಭಾಗಾಧಿಕಾರಿಗಳು,
ಉಪವಿಭಾಗೀಯ ದಂಡಾಧಿಕಾರಿಗಳಾದ ಅನುರಾಧಾ ವಸ್ತ್ರದ, ವಿಜಯಪುರ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ವೀರಯ್ಯ ವ್ಹಿ ಸಾಲಿಮಠ, ವಿಜಯಪುರದ ಡಯಟ್ ಉಪನಿರ್ದೇಶಕ(ಅಭಿವೃದ್ಧಿ)ರಾದ ಉಮಾದೇವಿ ಸೊನ್ನದ, ಇಂಡಿ ಪೊಲೀಸ್ ಉಪಾಧೀಕ್ಷಕರಾದ ಜಗದೀಶ ಎಚ್ ಎಸ್ ಅವರು ಆಗಮಿಸುವರು. ಅತಿಥಿ ಉಪನ್ಯಾಸಕರಾಗಿ ಜಮಖಂಡಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕನ್ನಡ ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ.ಯಶವಂತ ಕೊಕ್ಕನವರ ಅವರು ಆಗಮಿಸುವರು.
ಈ ಸಮಾರಂಭದಲ್ಲಿ ತಾಲೂಕಿನ ಎಲ್ಲ ಶಿಕ್ಷಕ ಸಂಘಗಳ, ಸರ್ಕಾರಿ ನೌಕರರ ಸಂಘ ಹಾಗೂ ವಿವಿಧ ಶಿಕ್ಷಕರ ಸಂಘಟನೆಗಳ, ಮಹಿಳಾ ಸಂಘಟನೆಗಳ, ಬೋಧಕೇತರ ಸಂಘಟನೆಯ ಅಧ್ಯಕ್ಷರು,ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು, ಶಿಕ್ಷಕರು, ಕಾರ್ಯಾಲಯದ ಸಿಬ್ಬಂದಿಯವರು, ಸಿ ಆರ್ ಪಿ , ಬಿ ಆರ್ ಪಿ , ಇ ಸಿ ಓ , ಬಿಐಆರ್ ಟಿ, ಪಿ ಈ ಓ ರವರು, ಎಸ್ ಡಿ ಎಂ ಸಿ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು , ಅಭಿಮಾನಿಗಳು, ಶಿಕ್ಷಣ ಪ್ರೇಮಿಗಳು, ಪತ್ರಿಕಾ ಮಾಧ್ಯಮದವರು , ಟಿ ವಿ ಮಾಧ್ಯಮದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಇಂಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಸೈಯೀದಾ ಅನೀಸ್ ಎಸ್ ಮುಜಾವರ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀ ಎಸ್ ಆರ್ ನಡುಗಡ್ಡಿ, ನೋಡಲ್ ಅಧಿಕಾರಿಗಳಾದ ಶ್ರೀ ಎ ಓ ಹೂಗಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.