ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳಿಸದೇ ಗ್ರಾಮದಲ್ಲಿರುವ ಸರ್ಕಾರಿ ಶಾಲೆಗಳಿಗೆ ಸೇರಿಸಲು ಕರೆ.
ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಸಾಧ್ಯ.
ಕವಡಿಮಟ್ಟಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಲ್ಲಿ ಜನ ಸಂಪರ್ಕ ಸಭೆ.
ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ :ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಕಳಿಸದೇ ಗ್ರಾಮದಲ್ಲಿರುವ ಸರ್ಕಾರಿ ಶಾಲೆಗಳಿಗೆ ಸೇರಿಸಬೇಕು. ಇದರಿಂದ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಲು ಸಾಧ್ಯ. ಸರ್ಕಾರಿ ಶಾಲೆಯ ಶಿಕ್ಷಕರು ಅರ್ಹತಾ ಪರೀಕ್ಷೆ ಮೂಲಕ ಆಯ್ಕೆಗೊಂಡು ಹುದ್ದೆಗೆ ಬಂದಿರುತ್ತಾರೆ ಎಂದು ಕಿವಿಮಾತು ಹೇಳಿದರು.ಶಾಸಕ ಹಾಗೂ ಅಧ್ಯಕ್ಷ ಕೆಎಸ್ಡಿಎಲ್ .ನಾಡಗೌಡ(ಅಪ್ಪಾಜಿ) ಹೇಳಿದರು.
ತಾಲೂಕಿನ ಕವಡಿಮಟ್ಟಿ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳಾದ ಕವಡಿಮಟ್ಟಿ ಜಲಪೂರ, ಸರೂರು, ಸರೂರು ತಾಂಡಾ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರಿ ಶಾಲಾ ಶಿಕ್ಷಕರಿಗಿಂತಲೂ ಖಾಸಗಿ ಶಾಲಾ ಶಿಕ್ಷಕರಲ್ಲಿ ಖಾಸಗಿ ಶಾಲೆಗಳ ವೈಭವಿಕರಣವಲ್ಲದೇ ಗುಣಮಟ್ಟ ಶಿಕ್ಷಣ ಕಾಣಲು ಸಾಧ್ಯವಿಲ್ಲ. ಸೌಲಭ್ಯಗಳನ್ನು ಪಡೆದುಕೊಳ್ಳಲು ಬರುವುದಿಲ್ಲ. ಗ್ರಾಮೀಣ ಭಾಗದ ಬಡವರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಆನೇಕ ಸರಕಾರದ ಯೋಜನೆಗಳನ್ನು ಜಾರಿ ಮಾಡಿದೆ. ಎಲ್ಲರುಮಕ್ಕಳನ್ನು ಖಾಸಗಿ ಶಾಲೆಗಳ ಅವಲಂಬಿಸದೇ ಸರ್ಕಾರಿ ಶಾಲೆಗೆ ಸೇರಿಸಲು ಮುಂದಾಗಬೇಕು. ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ರೈತರ ಹೊಲಗಳಿಗೆ ಸಂಪರ್ಕ ರಸ್ತೆ ನಿರ್ಮಿಸುವ ಮೂಲಕ ಅನುಕೂಲ ಮಾಡಿಕೊಡಲು ಕಂದಾಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದುರು.
ಅಂಗನವಾಡಿ ಕೇಂದ್ರವು ಸಂಪೂರ್ಣ ಶಿಥಿಲಗೊಂಡಿದ್ದ
ಹೊಸದಾಗಿ ನಿರ್ಮಿಸಿ ಕೊಡಬೇಕು ಎಂದು ಕವಡಿಮಟ್ಟ ಗ್ರಾಮಸ್ಥರು ಮನವಿ ಮಾಡಿದರು. ಈ ವೇಳೆ ಸಿಡಿಪಿಒ ಶಿವಮೂರ್ತಿ ಕುಂಬಾರ ಮಾತನಾಡಿ, ಕ್ಷೇತ್ರ ದಲ್ಲಿ ಈಗಾಗಲೇ ಸಮಸ್ಯೆಯ ಸುಳಿಯಲ್ಲಿರುವ 33 ಅಂಗವಾಡಿ ಕೆಂದ್ರಗಳನ್ನು ನಿರ್ಮಿಸಲು ಪ್ರತಿ ಅಂಗನವಾಡಿಗೆ 18 ಲಕ್ಷ ನಿಗದಿ ಮಾಡಿ ಸರ್ಕಾರ ತಿರ್ಮಾನಿಸಿದೆ. ಶೀಘ್ರವೇ ಕ್ರಮಕೈಗೊಳ್ಳಲಾಗುವುದು ಎಂದರು.
ಜಲಪೂರ ಮಾರ್ಗದ ಮೂಲಕ ರಾತ್ರಿ ಬಸ್ ಸೇವೆ ಪ್ರಾರಂಭಿಸಬೇಕು. ಕೆಲ ಹೊಗಳಲ್ಲಿ ಸವಳು ಜವಳಿನ ಸಮಸ್ಯೆಯಿಂದ ಉತ್ತಮ ಫಸಲು ಬರುತ್ತಿಲ್ಲ. ಈ ಕೂಡಲೇ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಜಲಪೂರ ಗ್ರಾಮಸ್ಥರು ಬೇಡಿಕೆ ಇಟ್ಟರು. ಬೇಡಿಕೆಗೆ ಸ್ಪಂಧಿಸಿದ ಶಾಸಕರು, ಕೆರೆ ಅಭಿವೃದ್ಧಿಗಾಗಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ, ಹೊಲಗಳ ಸವಳು ಜವಳ ಬಗ್ಗೆ ಹೆಚ್ಚಿನ ನಿಗಾವಹಿಸಿ ಕ್ರಮ
ಗ್ರಾಮ ಪಂಚಾಯತ, ಕವಡಿಮಟ್ಟ ಜನ ಸಂಪರ್ಕ ಸಭೆ ಕೈಗೊಳ್ಳುವಂತೆ ಕೆಬಿಜೆಎನ್ ಎಲ್ ಅಧಿಕಾರಿಗಳಿಗೆ ಸೂಚಿಸುತ್ತೇನೆ. ಹಾಗೂ ರಸ್ತೆ ನಿರ್ಮಿಸಲು ಕ್ರೀಯಾಯೋಜನೆ ತಯಾರಿಸಿ ರಸ್ತೆ ಮಾಡಲಾಗುವುದು, ಬಸ್ ಸೇವೆ ಒದಗಿಸುವಂತೆ ಕೆಎಸ್ಆರ್ಟಿಸಿ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಭರವಸೆ ನೀಡಿದರು.
ಗ್ರಾಮದಲ್ಲಿ ಸರ್ಕಾರಿ ಜಾಗವಿದ್ದು ಮನೆ ಕಟ್ಟಿಕೊ ಳ್ಳಲು ಸಾಧ್ಯವಾಗುತ್ತಿಲ್ಲ, ಸರ್ಕಾರದ ಸೌಲಭ್ಯಗಳು ಕೂಡ ಸಿಗುತ್ತಿಲ್ಲ. ಇದರಿಂದಾಗಿ ಕಡಬಡವರಿಗೆ ಮನೆ ಇಲ್ಲದಂತಾಗಿದೆ ಎಂದು ಕವಡಿಮಟ್ಟಿ ಗ್ರಾಮಸ್ಥರು ಆರೋಪಿಸಿದರು. ಜತೆಗೆ ಕವಡಿಮಟ್ಟಿ ಗ್ರಾಮಪಂಚಾ ಯಿತಿ ವ್ಯಾಪ್ತಿಯಲ್ಲಿ ಸುಮಾರು 32 ಎಕರೆಯಷ್ಟು ಸರ್ಕಾರಿ ಜಾಗೆ ಇದ್ದು, ಸುಮಾರು 4 ಎಕರೆಯಷ್ಟು ಜಮೀ ನಿನಲ್ಲಿ ಆಶ್ರಯ ಯೋಜನೆಯಡಿ ಮನೆ ನಿರ್ಮಿಸಿ ನಿರಾಶ್ರಿತರಿಗೆ ಹಂಚಿಕೆ ಮಾಡಲು ವಿಶೇಷ ಅನುದಾನದ ಅವಶ್ಯಕತೆ ಇದೆ ಎಂದು ಪಿಡಿಒ ಪಿ. ಎಸ್. ಕಸನಕ್ತಿ ಶಾಸಕರಿಗೆ ತಿಳಿಸಿದರು. ಇದಕ್ಕೆ ಪಂಚಾಯಿತಿಯಲ್ಲಿ ಸಮಾನ್ಯ ಸಭೆಯಲ್ಲಿ ಚರ್ಚಿಸಿ ಠರಾವು ಮಾಡಿ ನನಗೆ ಕೊಡಿ ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರದಿಂದ ಅನುದಾನ ತಂದು ಮನೆ ನಿರ್ಮಿಸಿ ಕೊಡಲಾಗುವುದು ಎಂದು ಭರವಸೆ ನೀಡಿದರು.
ಜಲಧಾರೆಯಲ್ಲಿ ಹೆಚ್ಚುವರಿ ನೀರು ಸಂಗ್ರಹ ಘಟಕ ನಿರ್ಮಿಸಲು ಮುಂದಾಗಿದ್ದು, ಬೇಗ ಸ್ಥಾಪಿಸಿ ಸಾರ್ವಜನಿಕ ರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು. ಗ್ರಾಮದಲ್ಲಿ ನೈರ್ಮಲ್ಯ, ಕೊಳಚೆ ನಿರ್ಮೂಲನೆಗಾಗಿ ಸರ್ಕಾರ ಈಗಾಗಲೇ 2024-25ಸಾಲಿನಲ್ಲಿ 1.40 ಕೋಟಿಯಲ್ಲಿನರೇಗಾ ಯೋಜನೆಯಡಿ ಗ್ರೇ ವಾಟರ್ಮ್ಯಾನೇಜಮೆಂಟ್ ಕಾಮಗಾರಿಕೈ ಗೊಳ್ಳಲು ಅನುದಾನಮಂಜೂರಾಗಿದೆ. ಗುತ್ತಿಗೆದಾರರು ಅತಿ ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಿಸಲಿದ್ದಾರೆ.
ಈ ದಿಸೆಯಲ್ಲಿ ಗ್ರಾಮಗಳ ಮುಖ್ಯ ಹಾಗೂ ಸಂಪರ್ಕ ರಸ್ತೆಗಳ ಅಕ್ಕ ಪಕ್ಕದ ಮನೆ ಗಳ ಮಾಲಿಕರು ರಸ್ತೆ ಒತ್ತುವರಿಗೆ ಮಾಡಿಕೊಂಡರೆತೆರ ವುಗೊಳಿಸಲು ಮುಂದಾದರೇ ಸಹಕಾರ ನೀಡಿ. ಇದ ರಿಂದ ಗ್ರಾಮ ಸ್ವಚ್ಛವಾಗಿ ರೋಗ ಮುಕ್ತ ಪರಿಸರ ನಿರ್ಮಿಸಲು ಸಾಧ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ತಾಪಂ ಇಒ ವೆಂಕಟೇಶ ಒಂದಾಲ,ಕೃಷಿ ಅಧಿಕಾರಿ ಸುರೇಶ ಭಾವಿಕಟ್ಟಿ, ಪಶುವೈದ್ಯಾಧಿಕಾರಿ ಎಸ್.ಬಿ.ಮೇಟಿ, ತಾಲೂಕು ಆರೋಗ್ಯಾಧಿಕಾರಿ ಡಾ.ಸತೀಶ ತಿವಾರಿ, ತಾಲೂಕು ಅಕ್ಷರ ದಾಸೋಹದ ಸಹಾಯ ನಿರ್ದೇಶಕ ಎಂ.ಎಂ.ಬೆಳ ಗಲ್ಲ, ಪಿಎಸ್ಐ ಸಂಜಯಕುಮಾರ ತಿಪ್ಪಾರೆಡ್ಡಿ, ಗ್ರಾಪಂ ಅಧ್ಯಕ್ಷೆ ಶಕುಂತಲಾ ಹಂಡರಗಲ್ಲ, ತಾಪಂ ಯೋಜನಾ ನಿರ್ದೇಶಕ ಖೂಬಾಶಿಂಗ್ ಜಾಧವ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಬಸಂತಿ ಮಠ, ಗ್ಯಾರಂಟಿ ಸಮಿತಿ ಸದಸ್ಯ ರಾಮಣ್ಣ ರಾಜನಾಳ,ಗ್ರಾಪಂ ಬಿಲ್ ಕಲೆಕ್ಟರ್ ದಂಡಪ್ಪ ವಾಲಿಕಾರ, ಗ್ರಾ ಪಂ ಸಿಬ್ಬಂದಿಗಳು ಸೇರಿದಂತೆ ಉಪಸ್ಥಿತರಿದ್ದರು.
ಗ್ರಾಮದಲ್ಲಿ ನೈರ್ಮಲ್ಯ, ಕೊಳಚೆ ನಿರ್ಮೂಲನೆಗಾಗಿ
ಸರ್ಕಾರ ಈಗಾಗಲೇ 2024-25 ₹1.40 ಕೋಟಿಯಲ್ಲಿ ನರೇಗಾ ಯೋಜನೆಯಡಿ ಗ್ರೇ ವಾಟರ್ಮ್ಯಾನೇಜಮೆಂಟ್ ಕಾಮಗಾರಿ ಕೈಗೊಳ್ಳಲು ಅನುದಾನ ಮಂಜೂರಾಗಿದೆ. ಗುತ್ತಿಗೆದಾರರು ಅತಿ ಶೀಘ್ರದಲ್ಲಿಯೇ ಕಾಮಗಾರಿ ಪ್ರಾರಂಭಿಸಲಿದ್ದಾರೆ.
ಸಿ.ಎಸ್.ನಾಡಗೌಡ, ಶಾಸಕರು