ಜ-2 ರಂದು ಕಬ್ಬಿನ ಬೆಳೆ ಕ್ಷೇತ್ರೋತ್ಸವ ಹಾಗೂ ವಿಚಾರ ಸಂಕೀರ್ಣ
ಇಂಡಿ: ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಶ್ರೀಮಂತ ಇಂಡಿ ಅವರ ತೋಟದಲ್ಲಿ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆ ನಿ, ಮರಗೂರ ಹಾಗೂ ಶಾಂತೇಶ್ವರ ವಿವಿಧೋದ್ದೇಶಗಳ ಸಹಕಾರ ಸಂಘ ನಿಯಮಿತ ಹೋರ್ತಿ, ಕೃಷಿ ಇಲಾಖೆ ವಿಜಯಪುರ ಹಾಗೂ ಕೃಷಿ ವಿಜ್ಞಾನ ಕೇಂದ್ರ ಇಂಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಬ್ಬಿನ ಬೆಳೆ ಕ್ಷೇತ್ರೋತ್ಸವ ಹಾಗೂ ವಿಚಾರ ಸಂಕೀರ್ಣ ಕಾರ್ಯಕ್ರಮವನ್ನು ಜನವರಿ 2 ಶುಕ್ರವಾರ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ್ ವಹಿಸಲಿದ್ದು, ಕಾರ್ಯಕ್ರಮದಲ್ಲಿ ನಾಗಠಾಣ ಶಾಸಕ ವಿಠಲ ಕಟಕಧೋಂಡ, ಸಿಂದಗಿ ಶಾಸಕ ಅಶೋಕ ಮನಗೂಳಿ, ದೇವರಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ ಉಪಸ್ಥಿತಿ ಇರಲಿದ್ದು, ಮುಖ್ಯ ಅತಿಥಿಗಳಾಗಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿ ಡಾಕ್ಟರ್ ಪಿ.ಎಲ್. ಪಾಟೀಲ, ಜಿಲ್ಲಾಧಿಕಾರಿ ಕೆ. ಆನಂದ, ಕಬ್ಬು ಅಭಿವೃದ್ಧಿ ಸಂಶೋಧನಾ ಕೇಂದ್ರ ಬೆಳಗಾವಿಯ ನಿರ್ದೇಶಕ ರಾಜಗೋಪಾಲ, ಕೃಷಿ ವಿಶ್ವವಿದ್ಯಾಲಯ ಧಾರವಾಡದ ಆಡಳಿತ ಮಂಡಳಿ ಸದಸ್ಯ ಶ್ರೀಮತಿ ಪಾರ್ವತಿ ಕುರ್ಲೆ, ಅತಿಥಿಗಳಾಗಿ ಶಿವನಗೌಡ ಪಾಟೀಲ, ಎಂ.ಎಂ. ಜಮಾದಾರ, ಎಸ್.ವಿ. ಜಗ್ಗಣ್ಣವರ, ಗುರುನಾಥ ಬಗಲಿ, ಬಸವರಾಜ ನಿಂಬರಗಿ ನಾರಾಯಣ ಸಾಳುಂಕೆ, ಭಾಗವಹಿಸಲಿದ್ದು, ಖುಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ಶಿವಶಂಕರ ಮೂರ್ತಿ ಅವರಿಂದ ರೈತರೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದೆ.
ಹೆಚ್ಚಿನ ರೈತರು ಪಾಲ್ಗೊಂಡು ಕಬ್ಬು ಬೆಳೆಯ ಬಗ್ಗೆ ಮಾಹಿತಿ ಪಡೆದುಕೊಂಡು ವಿಚಾರ ಸಂಕೀರ್ಣ ಹಾಗೂ ಕಬ್ಬು ಬೆಳೆ ಕ್ಷೇತ್ರೋತ್ಸವ ಯಶಸ್ವಿಗೊಳಿಸುವಂತೆ ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆ ತಿಳಿಸಿದೆ.


















