ಅಗರಖೇಡದಲ್ಲಿ ಗ್ರಾಮದಲ್ಲಿ ಕಲಿಕಾ ಹಬ್ಬ ..!
ಇಂಡಿ: ಯಾವ ವಿದ್ಯಾರ್ಥಿ ಕಲಿಕೆಯಲ್ಲಿ ಹಿಂದುಳಿದಿದ್ದಾನೆ. ಅಂತಹ ಮಕ್ಕಳಿಗೆ ಸರ್ಕಾರವು ಇತ್ತೀಚಿಗೆ ಬುನಾದಿ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ನಿಕಟ ಪೂರ್ವ ಬಿ.ಆರ್.ಪಿ ಆರ್.ವಿ. ಪಾಟೀಲ ಹೇಳಿದರು.
ಅವರು ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ, ಸಿ.ಆರ್.ಸಿ ಕೇಂದ್ರ ಅಗರಖೇಡ ಹಾಗೂ ಎಂ.ಪಿ.ಎಸ್ ಗುಬ್ಬೆವಾಡ ಶಾಲೆಯ ಸಹಯೋಗದಲ್ಲಿ ಅಗರಖೇಡದಲ್ಲಿ ಹಮ್ಮಿಕೊಂಡಿದ್ದ ೨೦೨೫-೨೬ ನೇ ಸಾಲಿನ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಕಲಿಕೆ ಉತ್ತೇಜಿಸಲು ಕಲಿಕಾ ಹಬ್ಬ ಕಾರ್ಯಕ್ರಮವನ್ನು ಕಳೆದ ಎರಡು ವರ್ಷಗಳಿಂದ ಕ್ಲಸ್ಟರ್ ಮಟ್ಟದಲ್ಲಿ ಆಚರಣೆ ಮಾಡುತ್ತಿದೆ. ಇದು ಕಲಿಕೆಯಲ್ಲಿ ಹಿಂದುಳಿದ ಮಕ್ಕಳ ಕಲಿಕೆಯನ್ನು ಉತ್ತೇಜಿಸಲು ಪ್ರಯೋಜನಕಾರಿಯಾಗಿದೆ ಎಂದರು.
ಇದರಿAದ ೧ ರಿಂದ ೫ ನೇ ತರಗತಿಯ ವಿದ್ಯಾರ್ಥಿಗಳ ಕಲಿಕೆಯ ಪ್ರಗತಿಯನ್ನು ಹೆಚ್ಚಿಸಲು ಇದು ಸಹಾಯಕಾರಿಯಾಗಿದೆ. ಮಕ್ಕಳಲ್ಲಿ ಸೃಜನಾತ್ಮಕ ಚಟುವಟಿಕೆಗಳನ್ನು ಬೆಳೆಸಲು ಪ್ರೇರೇಪಿಸಬಹುದಾಗಿದೆ ಎಂದರು.
ಸಮೂಹ ಸಂಪನ್ಮೂಲ ವ್ಯಕ್ತಿ ಎಂ.ಎಸ್. ಚವ್ಹಾಣ ಪ್ರಸ್ತಾವಿಕವಾಗಿ ಮಾತನಾಡಿ, ಸರ್ಕಾರ ಮಕ್ಕಳ ಮನದಲ್ಲಿ ಹುದುಗಿರುವ ಪ್ರತಿಭೆಯನ್ನು ಪ್ರದರ್ಶಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದು ಎಲ್ಲರಿಗೂ ಅವಶ್ಯವಾದರೆ, ಕಲಿಕೆಯಲ್ಲಿ ಹಿಂದುಳಿದಿರುವ ಮಕ್ಕಳ ಕಲಿಕೆಯನ್ನು ಉತ್ತೇಜಿಸಲು ಕಲಿಕಾ ಹಬ್ಬವು ಬಹುಪ್ರಯೋಜನಕಾರಿಯಾಗಿದೆ ಎಂದರು.
ಕ್ಲಸ್ಟರ್ ಹಿರಿಯ ಶಿಕ್ಷಕ ಎಸ್.ಬಿ. ಅವಜಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಗುಬ್ಬೆವಾಡ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಎಂ. ಬಿ. ಹಾವಳಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ನಿವೃತ್ತ ಉಪನ್ಯಾಸಕ ಎ.ಎಸ. ಕರಜಗಿ ಉಪನ್ಯಾಸ ನೀಡಿದರು. ಎಂ. ಐ. ಉಮರಾಣಿ, ಎಸ್. ಬಿ.ರಾವಜಿ, ಪಿ.ಬಿ. ಕಟಕದೊಂಡ, ಎಸ್.ಬಿ. ಸಾಲೊಟಗಿ, ಡಿ.ಎಸ್. ಲಚ್ಯಾಣ, ಕೆ.ಎಸ್. ಬೋಳಸೂರ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಅಗರಖೇಡ ಎಚ್.ಪಿ.ಎಸ್ ಶಾಲೆಯ ಶಿಕ್ಷಕ ಎಸ್.ಎಂ. ಬಿರಾದಾರ ಅವರು ಜ್ಞಾನಜ್ಯೋತಿ ರಾಜ್ಯ ಪ್ರಶಸ್ತಿ ಹಾಗೂ ಎಂ.ಪಿ ಎಸ್ ಗುಬ್ಬೆವಾಡ ಶಾಲೆಯ ಶಿಕ್ಷಕ ಬಿ.ವಿ. ಹಿರೇಮಠ ಶಿಕ್ಷಣ ರತ್ನ ರಾಜ್ಯ ಪ್ರಶಸ್ತಿ ಪಡೆದ ಪ್ರಯುಕ್ತ ಸಿ.ಆರ್.ಪಿ ಎಂ.ಎಸ್. ಚವ್ಹಾಣ ಹಾಗೂ ಪ್ರಭಾರಿ ಮುಖ್ಯ ಶಿಕ್ಷಕ ಎಂ. ಬಿ. ಹಾವಳಗಿ ಅವರಿಗೆ ಸನ್ಮಾನಿಸಿ ಗೌರವಿಸಿದರು
ಇಂಡಿ: ಅಗರಖೇಡದಲ್ಲಿ ಹಮ್ಮಿಕೊಂಡಿದ್ದ ೨೦೨೫-೨೬ ನೇ ಸಾಲಿನ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿದರು.



















