ವಿಜಯಪುರದಲ್ಲಿ ಸ್ವಾಮೀಜಿಗಳ ಜೊತೆ ಪೋಲೀಸರ
ವರ್ತನೆ ಖಂಡನಾರ್ಹ- ಕೇಶವ ಪ್ರಸಾದ್
ಬೆಂಗಳೂರು: ವಿಜಯಪುರ ಸರಕಾರಿ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಗುರುವಾರ 106 ದಿನ ಹಾಗೂ ಅಹೋರಾತ್ರಿ ಧರಣಿಗೆ 17 ದಿನವಾಗಿದೆ. ಈ ಹೋರಾಟ ಶಾಂತ ರೀತಿಯಲ್ಲಿ ನಡೆಯುತ್ತಿದ್ದು ಈ ಹೋರಾಟಕ್ಕೆ ಜೆಲ್ಲೆಯಾದ್ಯಂತ ಪಕ್ಷಾತೀತ, ಜಾತ್ಯಾತೀತ ಬೆಂಬಲ ವ್ಯಕ್ತವಾಗಿದೆ. ಜನವರಿ 9 ರಂದು ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಗಮನ ಸೆಳೆಯಲು ಹೋರಾಟದ ತೀವ್ರತೆ ಹೆಚ್ಚಿದೆ. ಇದೇ ಕಾರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಪ್ರತಿಭಟನಾಕಾರರು ಧರಣಿಗೆ ಮುಂದಾಗಿದ್ದಾರೆ. ಈ ಸಂದರ್ಭಲ್ಲಿ ಹುಣಿಶ್ಯಾಳ ಗ್ರಾಮದ ಶ್ರೀ ಸಂಗನಬಸವ ಸ್ವಾಮೀಜಿ ಅವರ ಮೈಮೇಲಿನ ಬಟ್ಟೆ ಹಿಡಿದು ಎಳೆದೊಯ್ಯಲು ಯತ್ನಿಸಿದ್ದು ಪೆÇೀಲೀಸರ ಅತಿರೇಕದ ವರ್ತನೆ ಎಂದು ವಿಧಾನಪರಿಷತ್ ಸದಸ್ಯ ಕೇಶವ ಪ್ರಸಾದ್ ಅವರು ಖಂಡಿಸಿದ್ದಾರೆ.
ಪ್ರತಿಭಟನಾÀಕಾರರ ಮನವೊಲಿಸಿ ಹೋರಾಟ ನಿಯಂತ್ರಿಸದೇ ಏಕಾಏಕಿ ಹೋರಾಟಗಾರರ ಮೇಲೆ ಬಲ ಪ್ರಯೋಗ ಮಾಡಿರುವುದು ತೀವ್ರ ಕಳವಳದ ಸಂಗತಿ. ಪೂಜ್ಯ ಸ್ವಾಮೀಜಿಗಳ ಜೊತೆ ಪೆÇಲೀಸರ ಈ ವರ್ತನೆ ಖಂಡನಾರ್ಹ ಎಂದು ಅವರು ತಿಳಿಸಿದ್ದಾರೆ.
ನಿನ್ನೆ ರಾತ್ರಿ ಪೂಜ್ಯ ಸ್ವಾಮೀಜಿಗಳನ್ನು ಹಾಗೂ ಹೋರಾಟಗಾರರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುವುದು ನ್ಯಾಯಸಮ್ಮತವಲ್ಲ. ಪ್ರತಿಭಟನೆ ಜನರ ಮೂಲಭೂತ ಹಕ್ಕು. ಈ ಹೋರಾಟಗಾರರು ಆಸ್ತಿ ನಷ್ಟಮಾಡಿ, ಬೆಂಕಿ ಹಚ್ಚಿ, ಕಲ್ಲು ತೂರಿ ಪ್ರತಿಭಟನೆ ಮಾಡುತ್ತಿರಲಿಲ್ಲ, ಇಂಥಹ ಸಂದರ್ಭದಲ್ಲಿ ಜಿಲ್ಲಾ ಪೆÇೀಲೀಸರು ತೀವ್ರ ಕ್ರಮಕ್ಕೆ ಮುಂದಾಗಿರುವುದು ಖಂಡನಾರ್ಹ ಎಂದಿದ್ದಾರೆ.
ಈ ಅಚಾತುರ್ಯ ಘಟನೆಗೆ ಕಾರಣರಾದ ಸಂಬಂಧಿಸಿದ ಪೆÇಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು ತಮ್ಮ ಹಠ ಬಿಟ್ಟು ಪ್ರತಿಭಟನಾಕಾರರ ಜೊತೆ ಮಾತನಾಡಿ, ಅವರು ಸರಕಾರಿ ವೈದ್ಯಕೀಯ ಕಾಲೇಜನ್ನು ಖಂಡಿತ ಮಾಡುವೆ ಎಂದು ನೀಡಿರುವ ಆಶ್ವಾಸನೆಯನ್ನು ಪುನರುಚ್ಚರಿಸಿ ಪರಿಸ್ಥಿತಿ ಶಾಂತಗೊಳಿಸಲಿ ಎಂದು ಆಗ್ರಹಿಸುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


















