ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ
ವಿಜಯಪುರ,ಜ.28 :ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಅವರಿಂದ 2024 ಹಾಗೂ 2025ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ ನೀಡಲು ಮಕ್ಕಳ ಸಾಹಿತಿಗಳಿಂದ ಪುಸ್ತಕಗಳನ್ನು ಆಹ್ವಾನಿಸಿದೆ.
2024 ಹಾಗೂ 2025ನೇ ಸಾಲಿನ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ (ಪಠ್ಯಾಧಾರಿತ ಬಿಟ್ಟು) ಮಕ್ಕಳ ಕಾದಂಬರಿ, ವೈಜ್ಞಾನಿಕ ಲೇಖನಗಳ ಸಂಕಲನ, ಅನುವಾದಿತ ಕೃತಿ (ಯಾವುದೇ ಪ್ರಕಾರದ ಮಕ್ಕಳ ಸಾಹಿತ್ಯ) ಮಕ್ಕಳ ಸಾಹಿತ್ಯ ವಿಮರ್ಶಾ ಕೃತಿ ಹೀಗೆ ಏಳು ಪ್ರಕಾರದ ಮಕ್ಕಳ ಸಾಹಿತ್ಯ ಕೃತಿಗಳನ್ನು ಪ್ರಶಸ್ತಿಗಾಗಿ ಆಹ್ವಾನಿಸಲಾಗಿದೆ.
ಪ್ರಕಟಗೊಂಡ ಪುಸ್ತಕಗಳನ್ನು ಯಾವ ಸಾಲಿಗೆ ಪರಿಗಣಿಸಬೇಕೆಂಬುದರ ಬಗ್ಗೆ ಸ್ಪಷ್ಠವಾಗಿ ನಮೂದಿಸಬೇಕು. ಪ್ರಶಸ್ತಿಗಾಗಿ ಪರಿಗಣಿಸಲು-ಮೌಲ್ಯಮಾಪನಗೊಳಿಸಲು ಪ್ರತಿಯೊಂದು ಕೃತಿಯ 4 ಪ್ರತಿಗಳನ್ನು ಹಾಗೂ ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ದಿನಾಂಕ : 20-02-2026ರೊಳಗಾಗಿ ಯೋಜನಾಧಿಕಾರಿಗಳು, ಚಂದ್ರಿಕಾ ಲೇಔಟ್ ಹಿಂಭಾಗ, ಕೆ.ಎಚ್.ಬಿ. ಕಾಲೋನಿ, ಲಕಮನಹಳ್ಳಿ ಧಾರವಾಡ-580004 ದೂ:0836-2465490 ವಿಳಾಸಕ್ಕೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: 8050392209, 7204396275, 9448981944 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



















