ಇಂದು ಹುಲ್ಲೂರಿನ SND ಶಾಲೆಯಲ್ಲಿ ‘ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ’ ಹಾಗೂ ವಿದ್ಯಾರ್ಥಿ ವೇತನ ಪ್ರದಾನ ಸಮಾರಂಭ
ಮುದ್ದೇಬಿಹಾಳ: ತಾಲ್ಲೂಕಿನ ಹುಲ್ಲೂರು ಗ್ರಾಮದ ಚನ್ನಬಸವ ಶ್ರೀ ಎಜ್ಯುಕೇಶನ್ ರೂರಲ್ ಕಲ್ಚರಲ್ ಸೊಸೈಟಿಯ ಎಸ್. ಎನ್. ಡಿ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ಮಾರ್ಚ್ 15ರಂದು ರವಿವಾರ ಸಂಜೆ 3:00 ಗಂಟೆಗೆ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ “ಚನ್ನಬಸವ ಶ್ರೀ ರಾಜ್ಯ ಪ್ರಶಸ್ತಿ” ಹಾಗೂ “ಚನ್ನಬಸವ ಸ್ಕಾಲರ್ಶಿಪ್” ಪ್ರದಾನ ಮಾಡಲಾಗುವುದು.
ಯಲ್ಲಲಿಂಗ ಮಠದ ಪರಮ ಪೂಜ್ಯ ಶ್ರೀ ಮಲ್ಲಲಿಂಗ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಜರುಗಲಿದ್ದು, ಸಂಸ್ಥೆಯ ಗೌರವಾಧ್ಯಕ್ಷರಾದ ಎಸ್. ಬಿ. ಚಲವಾದಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುದ್ದೇಬಿಹಾಳದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ (BEO) ಬಸವರಾಜ ಸಾವಳಗಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ ಆರ್. ಬಿ. ದಮ್ಮೂರಮಠ, ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಬಿ. ಎಚ್. ಮುದ್ದೂರ ಹಾಗೂ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಅರವಿಂದ ಹೂಗಾರ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಅಕ್ಷರ ದಾಸೋಹ ಅಧಿಕಾರಿಗಳಾದ ಎಮ್. ಎಮ್. ಬೆಳಗಲ್, ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶ
ಎನ್. ಎಸ್. ತುರಡಗಿ ಹಾಗೂ ಶಿಕ್ಷಣ ಸಂಯೋಜಕರಾದ ಶ್ರೀ ಸುರೇಶ ಹಿರೇಮಠ ಅವರು ಅತಿಥಿಗಳಾಗಿ ಉಪಸ್ಥಿತರಿರುವರು.
ಸಂಸ್ಥೆಯ ಅಧ್ಯಕ್ಷರಾದ ಎಮ್. ಎಸ್. ಕೊಪ್ಪ ಹಾಗೂ ಮುಖ್ಯ ಗುರುಮಾತೆಯರಾದ ಶ್ರೀಮತಿ ರೇಖಾ ಎಮ್. ಎಸ್. ಅವರು ಕಾರ್ಯಕ್ರಮಕ್ಕೆ ಎಲ್ಲರಿಗೂ ಆತ್ಮೀಯ ಸ್ವಾಗತ ಕೋರಿದ್ದಾರೆ. ಶಾಲಾ ಶಿಕ್ಷಕ ಸಮೂಹ, ಮಕ್ಕಳು ಹಾಗೂ ಸಿಬ್ಬಂದಿ ವರ್ಗದವರು ಈ ಶೈಕ್ಷಣಿಕ ಹಬ್ಬಕ್ಕೆ ಸಾಕ್ಷಿಯಾಗಲಿದ್ದಾರೆ.