• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      By fayazahmad

      March 25, 2026
      0
      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ
      0
      SHARES
      60
      VIEWS
      Share on FacebookShare on TwitterShare on whatsappShare on telegramShare on Mail

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ ​

      ಮುದ್ದೇಬಿಹಾಳ: ಹಸಿರು ಕ್ರಾಂತಿಯ ಹರಿಕಾರ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 119ನೇ ಜಯಂತ್ಯುತ್ಸವವನ್ನು ಏಪ್ರಿಲ್ 5 ರಂದು ತಾಲ್ಲೂಕು ಆಡಳಿತದ ವತಿಯಿಂದ ಅತ್ಯಂತ ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು. ​ಬುಧವಾರ ಪಟ್ಟಣದ ತಾಲ್ಲೂಕು ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ​ವರದಿ ಸಲ್ಲಿಸಲು ಅಧಿಕಾರಿಗಳಿಗೆ ಸೂಚನೆ ​ತಾಲ್ಲೂಕಿನ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳು, ಗ್ರಾಮ ಪಂಚಾಯತಿಗಳು, ಅಂಗನವಾಡಿ ಕೇಂದ್ರಗಳು, ಶಾಲೆ-ಕಾಲೇಜುಗಳು ಹಾಗೂ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಿಸಬೇಕು. ಜಯಂತಿ ಆಚರಣೆ ಮಾಡಿದ ಬಗ್ಗೆ ಸಂಬಂಧಪಟ್ಟ ಇಲಾಖಾಧಿಕಾರಿಗಳು ಪರಿಶೀಲಿಸಿ ವರದಿಯನ್ನು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು ಎಂದು ತಹಶೀಲ್ದಾರ ಕೀರ್ತಿ ಚಾಲಕ ಅವರ ಆದೇಶ ಮೇರಿಗೆ ಶಿರಸ್ತೆದಾರ ಎಂ ಎ ಬಾಗೇವಾಡಿ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ​ವಿಜೃಂಭಣೆಯ ಮೆರವಣಿಗೆ ​ಜಯಂತಿಯಂದು ಆಲಮಟ್ಟಿ ರಸ್ತೆಯಲ್ಲಿರುವ ಡಾ. ಬಾಬು ಜಗಜೀವನ ರಾಮ್ ವೃತ್ತದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಂತರ ಜಗಜ್ಯೋತಿ ಬಸವೇಶ್ವರ ವೃತ್ತದಿಂದ ಪ್ರಮುಖ ರಸ್ತೆಗಳ ಮೂಲಕ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ. ದ್ಯಾಮವ್ವನ ಕಟ್ಟೆ, ವಾಲ್ಮೀಕಿ ವೃತ್ತ, ಅಂಬೇಡ್ಕರ್ ವೃತ್ತ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಮೂಲಕ ಸಾಗಿ ತಹಶೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಜರುಗಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಸಂತಿ ಮಠ ವಿವರಿಸಿದರು. ​ಬಸ್ ನಿಲ್ದಾಣದ ಸ್ವಚ್ಛತೆಗೆ ಮುಖಂಡರ ಆಗ್ರಹ ​ಸಭೆಯಲ್ಲಿ ಮಾತನಾಡಿದ ದಲಿತ ಮುಖಂಡ ಮಂಜುನಾಥ ಕುಂದರಗಿ, “ಆಲಮಟ್ಟಿ ರಸ್ತೆಯಲ್ಲಿರುವ ಬಾಬು ಜಗಜೀವನ ರಾಮ್ ಹೆಸರಿನ ಬಸ್ ನಿಲ್ದಾಣದ ಮುಂದೆ ಕಸದ ತ್ಯಾಜ್ಯಗಳು ತುಂಬಿದ್ದು, ಇದು ಮಹಾನ್ ನಾಯಕರಿಗೆ ತೋರುತ್ತಿರುವ ಅಗೌರವವಾಗಿದೆ. ಕೂಡಲೇ ಆ ಪ್ರದೇಶವನ್ನು ಸ್ವಚ್ಛಗೊಳಿಸಿ ಗಾರ್ಡನ್ ನಿರ್ಮಿಸಬೇಕು,” ಎಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ, ತಕ್ಷಣವೇ ಬಸ್ ನಿಲ್ದಾಣದ ಸ್ವಚ್ಛತೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ​ಅಧಿಕಾರಿಗಳ ಗೈರುಹಾಜರಿ: ತೀವ್ರ ಆಕ್ರೋಶ ​ಇತ್ತೀಚೆಗೆ ನಡೆದ ಸಮಗಾರ ಹರಳಯ್ಯ ಜಯಂತಿಯನ್ನು ಅಬಕಾರಿ ಇಲಾಖೆಯಲ್ಲಿ ಆಚರಿಸದ ಬಗ್ಗೆ ಮುಖಂಡ ಭಗವಂತ ಕಬಾಡೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜಯಂತಿ ಕಾರ್ಯಕ್ರಮಗಳಿಗೆ ಗೈರಾಗುವ ಹಾಗೂ ನಿಯಮ ಪಾಲಿಸದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಲು ಆಯುಕ್ತರಿಗೆ ಪತ್ರ ಬರೆಯಬೇಕೆಂದು ಮುಖಂಡರಾದ ತಿಪ್ಪಣ್ಣ ದೊಡ್ಡಮನಿ, ಮಂಜುನಾಥಸ್ವಾಮಿ ಕುಂದರಗಿ ಆಗ್ರಹಿಸಿದ್ದಾರೆ. ಈ ಸಭೆಯಲ್ಲಿ ಬಾಲಚಂದ್ರ ಹುಲ್ಲೂರ ಆನಂದ ಮುದೂರ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಪರಶುರಾಮ ತಳವಾರ, ತಾಪಂ ಸಹಾಯಕ ನಿರ್ದೇಶಕ (ಪಂ ರಾಜ್ಯ) ಮಲ್ಲಿಕಾರ್ಜುನ ಕೋರಿ, ಡಾ ಶಿವಾನಂದ ಮೇಟಿ ಆರ್ ಎಂ ಹಾದಿಮನಿ, ಎ ಎಸ್ಐ ಎ ಬಿ ಟಕ್ಕಳಕಿ,ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಸಂಜು ನಾಯಕ,ಸಂಗಮೇಶ ವಾಲಿಕಾರ, ಸೇರಿದಂತೆ ಸಭೆಯಲ್ಲಿ ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ದಲಿತ ಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

      Tags: #indi / vijayapur#​Muddebihala Dr. Babu Jagjivan Ram Jayanti on 5th April; Taluk administration decides to celebrate in grand style#Public News#State News#Today News#Voice Of Janata#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.