ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ
ಇಂಡಿ : ನಗರ ಹಾಗೂ ಗ್ರಾಮೀಣ ಭಾಗದಲ್ಲಿ ನಾಯಿಕೊಡೆಗಳಂತೆ ಹೆಮ್ಮರವಾಗಿ ಬೆಳೆದಿರುವ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಹಾವಳಿಗೆ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಮಿತಿಮೀರಿದ ಡೋನೇಶನ್ ಹಾವಳಿ ಕೂಡಲೇ ತಡೆಗಟ್ಟಬೇಕು ಎಂದು ತಹಶಿಲ್ದಾರ ಬಿ.ಎಸ್ ಕಡಕಭಾವಿ ಅವರಿಗೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಇಂಡಿ ತಾಲೂಕು ಘಟಕದ ಪದಾಧಿಕಾರಿಗಳು ಸೋಮವಾರ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ಅನೀಲ ಕೋಳಿ ಮಾತಮಾಡಿ ತಾಲೂಕುನಾದ್ಯಾಂತ ಖಾಸಗಿ ಶಾಲೆಗಳಲ್ಲಿ ಡೋನೇಶನ್ ಹಾವಳಿ ಹೆಚ್ಚಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಖಾಸಗಿ ಶಿಕ್ಷಣ ಸಂಸ್ಥೆಗಳಿದ್ದು, ಒಂದೊಂದು ಶಿಕ್ಷಣ ಸಂಸ್ಥೆಗಳು ಒಂದೊಂದು ರೀತಿಯ ಶಿಕ್ಷಣ ಶುಲ್ಕವನ್ನು ಪಡೆಯುತ್ತಿವೆ. ಎಲ್ಕೆಜಿಯಿಂದ ಎಸ್.ಎಸ್.ಎಲ್.ಸಿ. ವರೆಗೂ ಕನಿಷ್ಠ ₹ 10 ಸಾವಿರದಿಂದ ರಿಂದ ಗರಿಷ್ಠ ₹ 65 ಸಾವಿರ ಶಿಕ್ಷಣ ಶುಲ್ಕು ಪಡೆಯುತ್ತಿವೆ ಮತ್ತು ಪಠ್ಯಪುಸ್ತಕ, ಶಾಲಾಸಮವಸ್ತ್ರ, ಸ್ಕೂಲ್ ಬ್ಯಾಗ್, ಶಾಲಾ ವಾಹನ ಇತರೆ ಶುಲ್ಕ ಸೇರಿದರೆ ಪ್ರತಿವರ್ಷ ₹ 30 ರಿಂದ ₹ 50 ಸಾವಿರ ರೂಪಾಯಿಗಳನ್ನು ವಿದ್ಯಾರ್ಥಿಗಳು ಭರಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯ ನಿಯಮಗಳನ್ನು ಗಾಳಿಗೆ ತೂರಿ ಖಾಸಗಿ ಶಿಕ್ಷಣ ಸಂಸ್ಥೆಯವರು ಬಡ ವಿದ್ಯಾರ್ಥಿಗಳನ್ನು ಸುಲಿಗೆ ಮಾಡುತ್ತಿವೆ. ಈ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಶಿಕ್ಷಣ ಇಲಾಖೆ ಅಧಿಕಾರಿಗಳು ಕಾನೂನು ಕ್ರಮ ಕೈಗೊಳ್ಳದಿರುವುದು ವಿದ್ಯಾರ್ಥಿಗಳ ಪಾಲಕರಿಗೆ ಅನ್ಯಾಯವಾದಂತೆ ಎಂದರು.
ಪ್ರತಿ ಖಾಸಗಿ ಶಿಕ್ಷಣ ಸಂಸ್ಥೆಗಳು ಶಿಕ್ಷಣ ಶುಲ್ಕ ಮತ್ತು ಇತರೆ ಶುಲ್ಕದ ಸಂಪೂರ್ಣ ಮಾಹಿತಿಯನ್ನು ಶಾಲಾ ಆವರಣದ ನಾಮಫಲಕಕ್ಕೆ ಅಥವಾ ಬ್ಯಾನರ್ ಮುಖಾಂತರ ಪ್ರಕಟಿಸಿ ಸಾರ್ವಜನಿಕವಾಗಿ ಮಾಹಿತಿ ನೀಡಬೇಕು. ಈ ಯಾವುದೇ ನಿಯಮಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಪಾಲಿಸುತ್ತಿಲ್ಲ. ಈ ಬಗ್ಗೆ ಇಲಾಖೆಗಳಿಗೆ ಮಾಹಿತಿ ನೀಡಿದರು ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿ ಪ್ರವೇಶ ಪರೀಕ್ಷಾ ಪದ್ಧತಿ ನಿಷೇಧಿಸುವುದು. ಪ್ರವೇಶ ಪಡೆಯುವಾಗ ವಿದ್ಯಾರ್ಥಿಗಳು ಸಾಮಾನ್ಯಜ್ಞಾನ ಪರೀಕ್ಷೆ ಅದರಲ್ಲಿ ಉತ್ತೀರ್ಣರಾದರೆ ದಾಖಲಾತಿ ಮಾಡಿಕೊಳ್ಳುವ ಪದ್ದತಿ ಇದೆ. ಇಂತಹ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಕೂಡಲೇ ತಹಶೀಲ್ದಾರ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಖಾಸಗಿ ಶಿಕ್ಷಣ ಸಂಸ್ಥೆಯವರು, ಪೋಷಕರ, ಜನಪ್ರತಿನಿಧಿಗಳ, ವಿವಿಧ ಸಂಘಟನೆಗಳ ಸಭೆ ಕರೆದು ಡೊನೇಶನ್ ಹಾವಳಿಗೆ ಕಡಿವಾಣ ಹಾಕುವ ಕಾರ್ಯ ನಡೆಯಬೇಕು. ಒಂದು ವೇಳೆ ಪ್ರಮಾಣಿಕ ಪ್ರಯತ್ನ ಮಾಡಬೇಕು ಇಲ್ಲದಿದ್ದರೆ, ಪ್ರಮುಖ ಬೀದಿಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾರ್ತಿಕ ಧರನೆವರ, ನಿತೀನ್ ಅಂಜುಟಗಿ, ಸಂತೋಷ ತಳವಾರ, ಪರಶುರಾಮ ಕರಜಗಿ, ಸಂದೀಪ ಕರಜಗಿ, ಶ್ರೀಧರ ನಾಟೀಕಾರ, ಆಕಾಶ ಕುಂಬಾರ, ರವಿ ಧರನೆವರ, ರಾಹುಲ್ ಹಿಳ್ಳಿ, ಸಂಜೀವ ಅಂಜುಟಗಿ, ಶಶಿ ಹಿರೇಮಠ, ಅಂಬರೀಶ್ ಬಗಲಿ, ಅಂಬರೀಶ್ ಜುಮನಾಳ ಸೇರಿದಂತೆ ಅನೇಕ ಯುವಕರು ಹಾಜರಿದ್ದರು.


















