ಮುದ್ದೇಬಿಹಾಳ: ಪೋಲಿಯೋ ಸಂಪೂರ್ಣ ನಿರ್ಮೂಲನೆ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಸರ್ಕಾರ ಹಮ್ಮಿಕೊಂಡಿರುವ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಲ್ಲಿ ಪ್ರತಿಯೊಬ್ಬ ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಅಂಗನವಾಡಿ ಕಾರ್ಯಕರ್ತೆ ಇಂದಿರಾ ಕುಂಬಾರ ಹೇಳಿದರು.
ತಾಲೂಕಿನ ಚವನಭಾವಿ ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ–1ರಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಲ್ಲಿ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ,
ಪಲ್ಸ್ ಪೋಲಿಯೋ ಲಸಿಕೆಯು ಮಕ್ಕಳನ್ನು ಪೋಲಿಯೋ ರೋಗದಿಂದ ರಕ್ಷಿಸುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದ್ದು, ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ಪೋಷಕರು ಕಾಳಜಿ ವಹಿಸಬೇಕು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಾದ ಶಾಂತಾ ಈಳಗೇರಿ, ಸಾವಿತ್ರಿ ನಾಲತವಾಡ, ಬಸಮ್ಮ ಸೋಮನಾಳ, ಸಹಾಯಕಿಯರಾದ ಗೌರಮ್ಮ ನಾಲತವಾಡ, ಶ್ಯಾಂಭವಿ ಪಾಟೀಲ, ಕವಿತಾ ಸೋಮನಾಳ ಹಾಗೂ ಆಶಾ ಕಾರ್ಯಕರ್ತೆಯರಾದ ನೀಲಮ್ಮ ಪಾಟೀಲ, ಶಿವಲೀಲಾ ಪತ್ತಾರ, ಸುಮಂಗಲಾ ಹಿರೇಮಠ ಮತ್ತು ಬಸಮ್ಮ ಪಾಟೀಲ ಸೇರಿದಂತೆ ತಾಯಂದಿರು ಮಕ್ಕಳು ಉಪಸ್ಥಿತರಿದ್ದರು.
ಗ್ರಾಮದ ಅನೇಕ ತಾಯಂದಿರು ತಮ್ಮ ಮಕ್ಕಳೊಂದಿಗೆ ಆಗಮಿಸಿ ಲಸಿಕೆ ಹಾಕಿಸುವ ಮೂಲಕ ಅಭಿಯಾನಕ್ಕೆ ಉತ್ತಮ ಬೆಂಬಲ ಸೂಚಿಸಿದರು.