ಇಂಡಿ: ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಮಿಸಿ ಮಾತನಾಡಿದ ನಿವೃತ್ತ ದಕ್ಷ ಆರೋಗ್ಯಾಧಿಕಾರಿ ಡಾ. ರಾಜಶೇಖರ ಕೊಳೆಕರ್ ಅವರು, ವೈದ್ಯ ವೃತ್ತಿಯು ಸಮಾಜ ಸೇವೆಯ ಅತ್ಯುನ್ನತ ರೂಪವಾಗಿದ್ದು, ವೈದ್ಯರು ತಮ್ಮ ಜ್ಞಾನ, ಅನುಭವ ಮತ್ತು ಸೇವಾ ಮನೋಭಾವದ ಮೂಲಕ ಜನರ ಆರೋಗ್ಯ ಕಾಪಾಡುವ ಮಹತ್ತರ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ವೈದ್ಯರ ಪಾತ್ರ ಅಪಾರವಾಗಿದ್ದು, ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಜಾಗೃತಿ ಹೊಂದಿ ವೈದ್ಯರ ಸಲಹೆಗಳನ್ನು ಪಾಲಿಸಬೇಕು ಎಂದು ತಿಳಿಸಿದರು.
ಡಾ. ಶಭಾಷ್ ಬೇಂದ್ರೆಕರ್ ಅವರು ಮಾತನಾಡಿ, ವೈದ್ಯಕೀಯ ಕ್ಷೇತ್ರವು ನಿರಂತರವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಹೊಸ ತಂತ್ರಜ್ಞಾನ ಮತ್ತು ಚಿಕಿತ್ಸಾ ವಿಧಾನಗಳ ಮೂಲಕ ಜನರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ವಿದ್ಯಾರ್ಥಿಗಳು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮುಖ್ಯ ಶಿಕ್ಷಕರಾದ ಜಮಾಲ್ ಬಾಬಾನಗರ, ಅವರು ವೈದ್ಯರ ಸೇವೆಯನ್ನು ಶ್ಲಾಘಿಸಿ, ಸಮಾಜದ ಆರೋಗ್ಯ ರಕ್ಷಣೆಯಲ್ಲಿ ವೈದ್ಯರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು. ವಿಶ್ವ ವೈದ್ಯರ ದಿನಾಚರಣೆಯ ಅಂಗವಾಗಿ ವೈದ್ಯ ಸಮುದಾಯಕ್ಕೆ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ. ವಿಶೇಷ ಅತಿಥಿ ಹಸನ್ ಮುಜಾವರ್ ಹಾಗೂ ಮುಜೀಬ್ ಅಫಜಲ್ಪುರ ಉಪಸ್ಥಿತರಿದ್ದರು. ಯಾಸೀನ ತುರ್ಕಿ, ಕೆ.ಎ. ಬೇಂದ್ರೆಕರ್, ಎಸ. ಎ. ನಾಗೂರ, ಶಹನಾಜ್ ಅರಬ್, ಎಂ.ಎನ್. ದೇವರ್, ಎ.ಎ. ಇಂಡಿಕರ್, ಅತಿಥಿ ಶಿಕ್ಷಕರಾದ ಅಫ್ತಾಬ್ ತುರ್ಕಿ, ಜಾಸ ಮೀನ್ ಅರಬ್ ಹಾಗೂ ಮಿಸ್ಬಾ ನಾಗಠಾಣ ಸೇರಿದಂತೆ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.