ಗ್ರಾಮ ಲೆಕ್ಕಾಧಿಕಾರಿ ಸಿದ್ಧರಾಮ ಕುಂಬಾರರಿಗೆ ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ ಪ್ರಧಾನ
ಕಲಬುರಗಿ: ಅಫಜಲಪುರ ತಾಲೂಕಿನ ದೇ. ಕಲ್ಲೂರು ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಸಿದ್ಧರಾಮ ಕುಂಬಾರ ಅವರಿಗೆ ಅವರ ಪ್ರಾಮಾಣಿಕ, ನಿಸ್ವಾರ್ಥ ಹಾಗೂ ಜನಪರ ಸೇವೆಯನ್ನು ಗುರುತಿಸಿ ಪ್ರತಿಷ್ಠಿತ ‘ಜಿಲ್ಲಾ ಮಟ್ಟದ ಸೇವಾ ವಿಭೂಷಣ ಪ್ರಶಸ್ತಿ’ ಪ್ರದಾನ ಮಾಡಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಸ್ಕೃತಿ ಮತ್ತು ಸಾಹಿತ್ಯ ಪರಿಷತ್ತಿನ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಲಾದ ಜಿಲ್ಲಾ ಘಟಕದ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಶಸ್ತಿಯೊಂದಿಗೆ ನೆನಪಿನ ಕಾಣಿಕೆಯನ್ನು ನೀಡಿ ಸನ್ಮಾನಿಸಲಾಯಿತು.
ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಸಲ್ಲಿಸುತ್ತಿರುವ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ. ಜುಲೈ 26, 2026ರಂದು ನಡೆದ ಸಮಾರಂಭದಲ್ಲಿ ಪರಿಷತ್ತಿನ ಪದಾಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದು ಸಿದ್ಧರಾಮ ಕುಂಬಾರ ಅವರನ್ನು ಅಭಿನಂದಿಸಿ ಶುಭ ಹಾರೈಸಿದರು.
ಅನಿಸಿಕೆ:1
ಜಿಲ್ಲಾ ಮಟ್ಟದ ‘ಸೇವಾ ವಿಭೂಷಣ ಪ್ರಶಸ್ತಿ’ ದೊರೆತಿರುವುದು ನನಗೆ ತುಂಬಾ ಸಂತಸ ತಂದಿದೆ. ಈ ಗೌರವಕ್ಕೆ ಪಾತ್ರನಾಗಲು ಸಹಕರಿಸಿದ ತಾಲೂಕ ತಹಶೀಲ್ದಾರ ಸರ್ ಅವರಿಗೂ ಮತ್ತು ನನ್ನ ಗ್ರಾಮದ ಹಿರಿಯರು, ಸಹೋದ್ಯೋಗಿಗಳು, ಕುಟುಂಬಸ್ಥರು ಹಾಗೂ ಹಿಂಚಗೇರಾ ಗ್ರಾಮಸ್ಥರಿಗೆ ಹೃತ್ಪೂರ್ವಕ ಧನ್ಯವಾದಗಳು. ಮುಂದೆಯೂ ಪ್ರಾಮಾಣಿಕವಾಗಿ ಜನಸೇವೆ ಮಾಡುತ್ತೇನೆ.”
ಸಿದ್ಧರಾಮ ಕುಂಬಾರ,( ಗ್ರಾಮ ಲೆಕ್ಕಾಧಿಕಾರಿ ದೇಸಾಯಿ ಕಲ್ಲೂರು ತಾ.ಅಫಜಲಪುರ)
ಸಿದ್ಧರಾಮ ಕುಂಬಾರ ಅವರಿಗೆ ಜಿಲ್ಲಾ ಮಟ್ಟದ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ಅವರ ಬಾಲ್ಯಾದ ಶಿಕ್ಷಕ ವೃಂದ ಹಾಗೂ ವಿಶೇಷವಾಗಿ ಶಿಕ್ಷಕಿ ಶ್ರೀಮತಿ ಅರ್ಚನ ಜೈನ ಸಂತಸ ವ್ಯಕ್ತಪಡಿಸಿದ್ದಾರೆ
ಅಲ್ಲದೇ ಸ್ವಗ್ರಾಮ ಹಿಂಚಗೇರಾಕ್ಕೆ ಹೆಮ್ಮೆಯ ವಿಷಯವಾಗಿದೆ. ಗ್ರಾಮದ ಪ್ರಮುಖರು, ಸ್ನೇಹಿತರು, ಅಭಿಮಾನಿಗಳು ಹಾಗೂ ಕುಟುಂಬಸ್ಥರು ಅಭಿನಂದನೆ ಸಲ್ಲಿಸಿ, ಅವರ ಸಾಧನೆ ಇನ್ನಷ್ಟು ಜನಸೇವೆಗೆ ಪ್ರೇರಣೆಯಾಗಲಿ ಎಂದು ಶುಭ ಹಾರೈಸಿದ್ದಾರೆ.


















