• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಅನ್ನ-ಆಹಾರ, ಧರ್ಮದ ವಿಚಾರದಲ್ಲಿ ʼಶಕಲಕ ಸರ್ಕಸ್ʼ ಮಾಡುವ ಬಿಜೆಪಿಗೆ ನೈತಿಕತೆ ಇದೆಯಾ-ಕುಮಾರಸ್ವಾಮಿ:

      April 3, 2022
      0
      ಅನ್ನ-ಆಹಾರ, ಧರ್ಮದ ವಿಚಾರದಲ್ಲಿ ʼಶಕಲಕ ಸರ್ಕಸ್ʼ ಮಾಡುವ ಬಿಜೆಪಿಗೆ ನೈತಿಕತೆ ಇದೆಯಾ-ಕುಮಾರಸ್ವಾಮಿ:
      0
      SHARES
      970
      VIEWS
      Share on FacebookShare on TwitterShare on whatsappShare on telegramShare on Mail

      VOJ ನ್ಯೂಸ್ ಡೆಸ್ಕ್ : ರಾಜ್ಯದಲ್ಲಿ ಬಿಜೆಪಿ ಸರಕಾರ ಮತಕ್ಕಾಗಿ, ಕುರ್ಚಿಗಾಗಿ ಮಾಡುತ್ತಿರುವ ಸದಾರಮೆ ನಾಟಕ ಜಗಜ್ಜಾಹೀರಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಜೆಪಿ ಸರಕಾರದ ವಿರುದ್ಧ ಕಿಡಿಕಾರಿದ್ದಾರೆ. ಟ್ವಿಟರ್ ಮೂಲಕ ರಾಜ್ಯ ಬಿಜೆಪಿ ಸರಕಾರವನ್ನು ತರಾಟೆಗೆ ತೆಗೆದುಕೊಂಡದ್ದಾರೆ ಹೆಚ್ ಡಿ ಕುಮಾರಸ್ವಾಮಿ.

      ತಮ್ಮ ಟ್ವಟ್ಟರ್ ಖಾತೆಯಲ್ಲಿ ಸ್ವಯಂಘೋಷಿತ ದೇಶಭಕ್ತ ಬಿಜೆಪಿ ಪಕ್ಷವೇ. ಕುರ್ಚಿಗಾಗಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿಮ್ಮ ಯಾವ ಮುಖಂಡರ ಮನೆ ಬಾಗಿಲಿಗೂ ಬರಲಿಲ್ಲ. ಅಧಿಕಾರಕ್ಕಾಗಿ ಅವರ ಮನೆ ಬಾಗಿಲಿಗೇ ಬಂದರು ನಿಮ್ಮವರು! ನೆನಪಿರಲಿ. ಅಧಿಕಾರಕ್ಕಾಗಿ ಯಡಿಯೂರಪ್ಪನವರೇ ಬಿಜೆಪಿ ಬಿಡಲು ಸಿದ್ಧರಿದ್ದರು. ಮಂತ್ರಿಯಾದರೆ ಸಾಕಪ್ಪಾ ಎಂದು ಕುಮಾರಣ್ಣನ ಮನೆ ಕದತಟ್ಟಿದ್ದರು. ಆದರೆ, ತಾಯಿಯಂಥ ಪಕ್ಷ ಬಿಡಬೇಡಿ ಎಂದು ಸಲಹೆ ನೀಡಿದ್ದರು ಹೆಚ್ಡಿಕೆ. ಅವರಿಗೆ ಪಕ್ಷ ಬಿಡಿ ಎಂದಿದ್ದರೆ ಆವತ್ತೇ ಕರ್ನಾಟಕದಲ್ಲಿ ಬಿಜೆಪಿ ಸಮಾಧಿ ಆಗುತ್ತಿತ್ತು. ಬಿಜೆಪಿಯನ್ನು ಉಳಿಸಿದವರೇ ಕುಮಾರಸ್ವಾಮಿ ಎಂದು ಗುಡುಗಿದ್ದಾರೆ.

      9 ದಿನ ಸಿಎಂ ಆಗಿದ್ದ ಯಡಿಯೂರಪ್ಪಗೆ ಬೆಂಬಲ ಕೊಟ್ಟಿದ್ದು ಇದೇ ಕುಮಾರಸ್ವಾಮಿ. ಆಗ ನಿಮ್ಮ ಹೈಕಮಾಂಡ್, ʼಅಗ್ರಿಮೆಂಟ್ ಹೈ ಡ್ರಾಮಾʼ ಆಡಿ ಯಡಿಯೂರಪ್ಪ ಬೆನ್ನಿಗೆ ತಿವಿದದ್ದು ಗೊತ್ತಿಲ್ಲವಾ? ಕೊನೆಗೆ ಅಗ್ರಿಮೆಂಟನ್ನೇ ಹೈಜಾಕ್ ಮಾಡಿ ವಚನಭ್ರಷ್ಟರಾಗಿದ್ದು ನೀವು. ಅದನ್ನು ಕುಮಾರಸ್ವಾಮಿ ತಲೆಗೆ ಕಟ್ಟಿದಿರಿ. ಸತ್ಯ ಮರೆತರೆ ಹೇಗೆ ? ಕೃತಜ್ಞತೆ ಎನ್ನುವುದು ನಿಮಗೆ ಆಗದ ಪದ. ಯಾರು ಶಕ್ತಿ ತುಂಬುತ್ತಾರೋ ಅವರ ಕತ್ತು ಕುಯ್ಯುವುದು ನಿಮ್ಮ ಜಾಯಮಾನ. 2006ರಲ್ಲಿ ಸರಕಾರ ರಚನೆಯಾದ ಎರಡೇ ತಿಂಗಳಿಗೆ ಕುಮಾರಸ್ವಾಮಿ ವಿರುದ್ಧ ಸಲ್ಲದ ಸುಳ್ಳು ಆರೋಪ ಮಾಡಿ ಬೆನ್ನಿಗಿರಿದದ್ದು ಯಾರು? ಬಿಜೆಪಿಯ ʼಬ್ರೂಟಸ್ ಪಾಲಿಟಿಕ್ಸ್ʼ ಅಲ್ಲವೇ ಅದು?

      ಉಪ ಸಭಾಪತಿ ವಿಷಯಕ್ಕೆ ಬಂದರೆ, ಈ ಸ್ಥಾನಕ್ಕೂ ಕುಮಾರಣ್ಣಗೂ ಸಂಬಂಧವೇ ಇಲ್ಲ. ಆ ಪದವಿ ಆಕಾಂಕ್ಷಿ ಆಗಿದ್ದವರು ಮೂಲತಃ ಜನತಾ ಪರಿವಾರದವರು. ಅವರನ್ನು ಕಾಂಗ್ರೆಸ್ ನಂಬಿಸಿ, ವಂಚಿಸಿತ್ತು. ಅವರಿಗೆ ಜೆಡಿಎಸ್ ಪಕ್ಷ ಆಶ್ರಯ ಕೊಟ್ಟು ಶಕ್ತಿ ತುಂಬಿತು. ಇದರಲ್ಲಿ ಸರ್ಕಸ್ ಪ್ರಶ್ನೆ ಎಲ್ಲಿಂದ ಬಂತು? ಕನ್ನಡದ ನೆಲ-ಜಲ, ನಾಡು-ನುಡಿಗಾಗಿ ಕುಮಾರಸ್ವಾಮಿ ಸರ್ಕಸ್ ಮಾಡುತ್ತಾರೆ, ಸರಿ. ಆದರೆ; ಅನ್ನ-ಆಹಾರ, ಧರ್ಮದ ವಿಚಾರದಲ್ಲೂ ʼಶಕಲಕ ಸರ್ಕಸ್ʼ ಮಾಡುವ ಬಿಜೆಪಿಗೆ ನೈತಿಕತೆ ಎಂಬುದು ಇದೆಯಾ? ಮತಕ್ಕಾಗಿ, ಕುರ್ಚಿಗಾಗಿ ನಿಮ್ಮ ʼಸದಾರಮೆ ನಾಟಕʼ ಜಗಜ್ಜಾಹೀರು. ಕ್ಷಣಕ್ಕೊಂದು ಬಣ್ಣ ಬದಲಿಸುವ ಬಿಜೆಪಿ ಒಂದು ʼರಾಜಕೀಯ ಊಸರವಳ್ಳಿ ಎಂದು ಕಿಡಿಕಾರಿದರು.

      ಕುಮಾರಸ್ವಾಮಿ ಜೀವನ ತೆರೆದ ಪುಸ್ತಕ. ಇದ್ದದ್ದನ್ನು ಕಡ್ಡಿತುಂಡು ಮಾಡಿದಂತೆ ಹೇಳುವ ಎದೆಗಾರಿಕೆ ಅವರಿಗಷ್ಟೇ ಇದೆ ಎಂಬುದು 6.5 ಕೋಟಿ ಜನರಿಗೆ ಗೊತ್ತು. ಅಧಿಕಾರಕ್ಕೆ ಅಂಟಿಕೊಂಡ ಕುಟುಂಬ ಅವರದ್ದಲ್ಲ. ಬೆಂಬಲ ಕೊಡುತ್ತೇವೆ ಎಂದು ವಾಜಪೇಯಿ ನೀಡಿದ ಆಫರನ್ನೇ ತಿರಸ್ಕರಿಸಿ, ಪ್ರಧಾನಿ ಪದವಿ ತೊರೆದ ನಾಯಕರು ದೇವೇಗೌಡರು ಎಂಬುದು ಗೊತ್ತಿಲ್ಲವೇ? ಕುಮಾರಸ್ವಾಮಿ ಅವರೇನೋ ಲಕ್ಕಿಡಿಪ್ ಸಿಎಮ್ಮು ಎಂಬುದೇನೋ ಸರಿ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಬೇಕಾದರೆ ಎಲ್ಲಿದ್ದಿರಿ ನೀವು? ಕುರ್ಚಿ ಹಿಡಿಯಲು ಈ ಲಕ್ಕಿಡಿಪ್ ಸಿಎಂ ಕಾಲೇ ಹಿಡಿಯಬೇಕಾಯಿತು. ಅದನ್ನು ಮರೆತರೆ ಹೇಗೆ? ಸತ್ಯಕ್ಕೆ ಸಮಾಧಿ ಕಟ್ಟುವುದು ಎಂದರೆ ಬಿಜೆಪಿಗೆ ಸುಲಭದ ಕೆಲಸ.

      ಅಧಿಕಾರ ಬಂದಾಗ ಗೌಡರ ಕುಟುಂಬ ಬೊಕ್ಕಸ ಲೂಟಿ ಮಾಡಲಿಲ್ಲ. 2 ಅವಧಿಯಲ್ಲಿ ಬಿಜೆಪಿ ಸರಕಾರ ನಡೆಸಿದ ಭ್ರಷ್ಟಲೀಲೆಗಳು ಅನೇಕ? ಭ್ರಷ್ಟಸುಳಿಗೆ ಸಿಲುಕಿ ಸಿಎಂ ಜೈಲಿಗೆ ಹೋದ ಇತಿಹಾಸ ನಿಮ್ಮದು. ಸಾಲುಸಾಲು ಜೈಲುಪಕ್ಷಿಗಳು ನಿಮ್ಮವರೇ. ನಿಮ್ಮ ಶಾಸಕರೇ ಸಿಎಂ ವಿರುದ್ಧ ಭ್ರಷ್ಟ ಆರೋಪ ಮಾಡಿದಾಗ, ಅವರನ್ನು ಮನೆಗೆ ಕಳಿಸಿದ ʼಹೀನ ಚರಿತ್ರೆʼ ನಿಮ್ಮದು. ಈಗಷ್ಟೇ ರಾಜ್ಯದಾದ್ಯಂತ ಮಾರ್ದನಿಸುತ್ತಿರುವ 40% ಕಮೀಷನ್ ಕಥೆ ಏನು? ಪ್ರಧಾನಮಂತ್ರಿಗಳಿಗೇ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಬರೆದ ಪತ್ರ, ಬೆಳಗಾವಿ ಗುತ್ತಿಗೆದಾರರೊಬ್ಬರು ಬರೆದ ಪತ್ರ, ಸಚಿವರ ಮೇಲೆ ನೇರ ಪರ್ಸಂಟೇಜ್ ಆರೋಪ.. ಇದೆಲ್ಲ ಬಿಜೆಪಿಯ ಭ್ರಷ್ಟಕಾಂಡಗಳು. ಇದು ನಿಮ್ಮವರ ಜಾತಕ.

      2 ಸಲ ರಚಿಸಿದ ಸರಕಾರಕ್ಕೆ ಹಣ ಎಲ್ಲಿನದು? ಜನರತೆರಿಗೆ ಹಣವನ್ನು ಕೊಳ್ಳೆ ಹೊಡೆದದ್ದು ಅಲ್ಲವೇ? ಶಾಸಕರನ್ನು ಬಜಾರಿನಲ್ಲಿ ಬಿಕರಿ ವಸ್ತುಗಳಂತೆ ಖರೀದಿ ಮಾಡಿದ ಬಿಜೆಪಿಯ ʼಅಪರೇಷನ್ ಕಮಲʼ ನಿಮ್ಮ ಅನೈತಿಕತೆಯ ಪರಾಕಾಷ್ಠೆ. ದೆಹಲಿಯಲ್ಲಿ ಸಂಸತ್ ಭವನಕ್ಕೆ ನಮಸ್ಕಾರ, ಬೆಂಗಳೂರಿನಲ್ಲಿ ಶಾಸಕರ ವ್ಯಾಪಾರ!! ಇದಾ ಹಿಂದುತ್ವ? ಇದಾ ಪ್ರಜಾಪ್ರಭುತ್ವ? ಎಂದರು. ಬಿಜೆಪಿ ಬಣ್ಣ ಬಿಚ್ಚಿಡುತ್ತಾ ಹೋದರೆ, ಮನುಕುಲದ ಈವರೆಗಿನ ಕ್ರೂರ-ಪೈಶಾಚಿಕ ಇತಿಹಾಸ ಮೀರಿಸುತ್ತದೆ. ಅಧಿಕಾರಕ್ಕಾಗಿ ನಡೆಸಿದ ʼನರಹಂತಕ ರಾಜಕಾರಣʼವು ಸಮಸ್ತ ಭಾರತೀಯರಿಗೆಲ್ಲ ಗೊತ್ತಿದೆ. ಮತಕ್ಕಾಗಿ ಡ್ರಾಮಾ ಯಾರದ್ದು ಎನ್ನುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕಾ? ನಿತ್ಯವೂ ನಿಮ್ಮ ನಾಟಕಗಳ ಹೊಸ ಅಂಕಗಳು ಬಿಚ್ಚಿಕೊಳ್ಳುತ್ತಲೇ ಇವೆಯಲ್ಲ! ನಿಮ್ಮ ಬಾಲಂಗೋಚಿಗಳ ಗುತ್ತಿಗೆಯಲ್ಲ ಹಿಂದುತ್ವ. ಮುಗ್ಧ ಜನರಿಗೆ ಧರ್ಮದ ಹೆಸರಿನಲ್ಲಿ ವಿಷವುಣಿಸುತ್ತಿರುವ ನಿಮ್ಮದು ಹಿಂದುತ್ವವೇ? ಮಾನವ ವಿಕಾಸವನ್ನೇ ಮರೆತು ಮನುಜಕುಲಕ್ಕೇ ʼಮರಣಶಾಸನʼ ಬರೆಯುತ್ತಿರುವ ರಾಜಕಾರಣ ನಿಮ್ಮದು. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂದರೆ ಇದೇನಾ? ಅದು, ಸಬ್ ಕಾ ವಿನಾಶ್ ಮತ್ತು ಸಬ್ ಕಾ ಸರ್ವ ನಾಶ್.

      ಹಿಂದುತ್ವ ಎಂದರೆ ದಿವ್ಯ ಪರಂಪರೆ, ಶ್ರೇಷ್ಠ ನಂಬಿಕೆ, ಪಾವನ ಶ್ರದ್ಧೆ. ಎಲ್ಲರನ್ನೂ ಒಳಗೊಳ್ಳುವ ಪರಮೋತ್ಕೃಷ್ಟ ಆದರ್ಶ. ʼನಿಮ್ಮ ಹಿಂದುತ್ವʼ ಇದಕ್ಕೆ ತದ್ವಿರುದ್ಧ. ಗಾಂಧೀಜಿಯನ್ನು ಕೊಂದವರು, ಬ್ರಿಟೀಷರಿಗೆ ಪರಿಚಾರಿಕೆ ಮಾಡಿದವರು, ಶೂದ್ರರನ್ನು ಹೊಸಕಿ ಹಾಕಿದವರು ಈಗ ಹಿಂದುತ್ವದ ಜಪ ಮಾತನಾಡುತ್ತಿರುವುದು ಈ ಶತಮಾನದ ಬಹುದೊಡ್ಡ ಜೋಕ್ ಎಂದು ಗುಡುಗಿದ್ದಾರೆ.

      Tags: #bjp circus party#hd kumaraswami tweet#vote banking drama
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      ಅಕ್ರಮ ಮರಳು ಸಾಗಾಣಿಕೆ ಟ್ರ್ಯಾಕ್ಟರ್ ಜಪ್ತಿ

      April 23, 2026
      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾದ ಉಚಿತ ಸಾಮೂಹಿಕ ವಿವಾಹ

      April 23, 2026
      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      ಎಸ್ ಆಯ್ ಮೇತ್ರಿ ಸರಕಾರಿ ಪ್ರೌಢಶಾಲೆ, ನಾಗಠಾಣ ಶಾಲೆಗೆ ಶೇ 92.43 ಫಲಿತಾಂಶ 

      April 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.