ಅಕ್ಷರ ದಾಸೋಹ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪ ಸಾಬೀತಾದ ಹಿನ್ನಲೆಯಲ್ಲಿ ಮುಖ್ಯ ಶಿಕ್ಷಕನನ್ನು ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೊಮ್ಮನಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ ಮುಖ್ಯ ಶಿಕ್ಷಕ ಶರಣಪ್ಪ ದೊಡ್ಡಪ್ಪ ಬಿದನೂರನ್ನು ಅಮಾನತ್ತುಗೊಳಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಂ. ಹರನಾಳ ಆದೇಶ ಹೊರಡಿಸಿದ್ದಾರೆ. ಅಂದಾಜು 44,900 ರೂ. ಮೌಲ್ಯದ ಆಹಾರ ಸಾಮಗ್ರಿಗಳನ್ನು ಬೇರೆ ಕಡೆಗೆ ಸಾಗಿಸುತ್ತಿರುವುದು ಸಾಬೀತಾದ ಹಿನ್ನಲೆಯಲ್ಲಿ ಮುಖ್ಯ ಶಿಕ್ಷಕ ಶರಣಪ್ಪ ದೊಡ್ಡಪ್ಪ ಬಿದನೂರನನ್ನು ಅಮಾನತ್ತು ಮಾಡಲಾಗಿದೆ.