ತಿಕೋಟಾ : ಮಕ್ಕಳ ಕಳ್ಳನೆಂದು ಯುವಕನನ್ನು ಹಿಡಿದು ಕಂಬಕ್ಕೆ ಕಟ್ಟಿ ಗ್ರಾಮಸ್ಥರು ಥಳಿಸಿರುವ ಘಟನೆ ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದಲ್ಲಿ ನಡೆದಿದೆ. ಅಪರಿಚಿತ ಯುವಕನನ್ನು ಹಿಡಿದು ಸ್ಥಳೀಯರು ಥಳಿಸಿ,
ಎಲ್ಲಿಂದ ಬಂದಿದ್ದೀಯಾ? ಎಷ್ಟು ಜನ ಬಂದಿದ್ದೀರಿ ಎಂದು ವಿಚಾರಿಸಿದರು. ಮಕ್ಕಳ ಕದಿಯಲು ಬಂದಿದ್ದೀರಾ ಎಂದು ಯುವಕನಿಗೆ ಹಲ್ಲೆ ಮಾಡಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


















