ಇಂಡಿ : ಕಳ್ಳರೆಂದು ಭಾವಿಸಿ ಕಾರ್ಮಿಕರ ಮೇಲೆ ಹಲ್ಲೆ ಗ್ರಾಮಸ್ಥರು ಹಲ್ಲೆಗೈದಿರುವ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹೊಸಮನಿ ಹಟ್ಟಿಯಲ್ಲಿ ನಡೆದಿದೆ. ಕೆಲಸಕ್ಕೆ ಬಂದಿದ್ದ ತಮಿಳುನಾಡಿನ ಕಾರ್ಮಿಕರ ಮೇಲೆ ಹಲ್ಲೆ ಮಾಡಲಾಗಿದೆ. ಅಲ್ಲದೇ, ಕಳ್ಳತನ ಮಾಡಲು ಬಂದಿದ್ದಾರೆಂದು ಹಲ್ಲೆ ಮಾಡಿದ ವೇಳೆಯಲ್ಲಿ ಹತ್ತು ಜನ ಕಾರ್ಮಿಕರು ಪರಾರಿಯಾಗಿದ್ದಾರೆ. ಇನ್ನು ಇಬ್ಬರು ಕಾರ್ಮಿಕರ ಕೈಕಾಲು ಕಟ್ಟಿ ಹಲ್ಲೆ ಮಾಡಿದ್ದಾರೆ. ಇಂಡಿ ಪಟ್ಟಣ ಪೊಲೀಸರಿಗೆ ಒಪ್ಪಿಸಿದ್ದಾರೆ. ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.