ಶಕ್ತಿ ಯೋಜನೆ ಎಫೆಕ್ಟ್; ವಿದ್ಯಾರ್ಥಿಗಳ ಪರದಾಟ..!
ಬಸ್ ತಡೆದು ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು..!
ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ ವಿದ್ಯಾರ್ಥಿಗಳು..!
ಇಂಡಿ : ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಶಕ್ತಿ ಯೋಜನೆಯೂ ಒಂದು. ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಶಕ್ತಿ ಯೋಜನೆ ಜಾರಿ ಹಿನ್ನೆಲೆ ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಸಿಗದೆ ಇರುವುದಕ್ಕೆ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ತಡವಲಗಾ ಗ್ರಾಮದ ಜೋಡುಗುಡಿ ಹೆದ್ದಾರಿ ಬಳಿ ವಿದ್ಯಾರ್ಥಿಗಳು ಬಸ್ ತಡೆದು ಪ್ರತಿಭಟಸಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇಂಡಿ ಮಾರ್ಗವಾಗಿ ವಿಜಯಪುರ, ವಿಜಯಪುರ ಮಾರ್ಗವಾಗಿ ಇಂಡಿಗೆ ಬರುವ ಎಲ್ಲಾ ಬಸ್ಸುಗಳು ತಡವಲಗಾ ಮಾರ್ಗವಾಗಿ ಹೋಗಬೇಕು. ಅಲ್ಲದೇ, ಬಸ್ಗಳು ಜೋಡಗುಡಿ ಹತ್ತಿರ ನಿಲುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಸುದ್ದಿ ತಿಳಿಯುತ್ತಿದಂತೆ ಸ್ಥಳಕ್ಕೆ ಇಂಡಿ ಸಿಪಿಐ ಮಾದೇವಪ್ಪ ಶಿರಹಟ್ಟಿ ಹಾಗೂ ಹೊರ್ತಿ ಪಿ ಎಸ್ ಐ ಚಂದ್ರಶೇಖರ ತೇಲಿ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ, ಪ್ರತಿಭಟನೆ ನಿರತ ವಿದ್ಯಾರ್ಥಿಗಳ ಮನವೊಲಿಕೆಗೆ ಮುಂದಾದರು. ಆದರೆ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಇಂಡಿ KSRTC ಮ್ಯಾನೇಜರ್ ಬರುವವರಿಗೆ ಪ್ರತಿಭಟನೆ ನಿಲ್ಲುವುದಿಲ್ಲ ಎಂದು ಪಟ್ಟು ಹಿಡಿದರು. ನಂತರ ಸ್ಥಳಕ್ಕೆ ಭೇಟಿ ನೀಡಿದ ಇಂಡಿಯ KSRTC ಮ್ಯಾನೇಜರ್ ವಾಗೇಶ್ ಎಸ್ ಬಿ ವಿದ್ಯಾರ್ಥಿಗಳಿಗೆ ಮನವೊಲಿಸಿ ಬಸ್ಗಳು ತಡವಲಗಾ ಮಾರ್ಗವಾಗಿ ಸಂಚರಿಸಲು ಸೂಚನೆ ನೀಡಿದ ಮೇಲೆ ಪ್ರತಿಭಟನೆ ಹಿಂಪಡೆದರು.