ಚಡಚಣ : ಅಪರಿಚಿತನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಜಿಗಜೇವಣಿ ಬಳಿಯ ರಸ್ತೆಯಲ್ಲಿ ನಡೆದಿದೆ. ಸುಮಾರು 37 ವಯಸ್ಸಿನ ಅಪರಿಚಿತ ವ್ಯಕ್ತಿನ್ನು ಬರ್ಬರವಾಗಿ ಎರಡು ತುಂಡು ಕತ್ತರಿಸಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ರುಂಡ ಹಾಗೂ ದೇಹವನ್ನು ಬೇರೆ ಬೇರೆಯಾಗಿ ಹತ್ಯೆಗೈದು ಗೋಣಿ ಚೀಲದಲ್ಲಿ ತುಂಬಿ ಎಸೆದು ಎಸ್ಕೇಪ್ ಆಗಿದ್ದಾರೆ. ಹಂತಕರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಚಡಚಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.