ಮಾದಪ್ಪನ ಸನ್ನಿಧಿಯಲ್ಲಿಯೂ ಗಾಂಜಾ ಘಾಟು..!
ಹನೂರು : ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳವಾದ ಮಹದೇಶ್ವರ ಬೆಟ್ಟದ ಮುಡಿಶೆಡ್ ಸಮೀಪದ ಹಣ್ಣುಕಾಯಿ ಮಾರಾಟ ಕೇಂದ್ರದ ಬಳಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಅಭಿಷೇಕ್ (23), ಹಾವೇರಿಯ ಆದರ್ಶ (22) ಹಾಗೂ ಮೈಸೂರಿನ ಉದಯಕುಮಾರ್ (22) ಬಂಧಿತ ಆರೋಪಿಗಳು. ಮಲೆ ಮಹದೇಶ್ವರ ಬೆಟ್ಟದಲ್ಲಿ ಗಾಂಜಾ ಮಾರಾಟ ಮಾಡಲು ಯತಿಸುತ್ತಿದ್ದ ಮೂವರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ವರದಿ : ಚೇತನ್ ಕುಮಾರ್ ಎಲ್,
ತಾಲ್ಲೂಕು ಹನೂರು, ಚಾಮರಾಜನಗರ ಜಿಲ್ಲೆ,