ಶಾಲೆಯಲ್ಲಿ ಕಾನೂನು ಅರಿವು ಮೂಡಿಸುವ ನಾಟಕ ಪ್ರದರ್ಶನ
ಇಂಡಿ: ಮಕ್ಕಳಿಗೆ ಸಂವಿಧಾನ ಬದ್ಧವಾಗಿ ದೊರೆಯಬೇಕಾದ ಸೌಲಭ್ಯಗಳನ್ನು ಕೊಡಿಸಿ, ಸಾಧನೆ ಮಾಡಲು ಅವಕಾಶ ಮಾಡಿಕೊಡುವ ಮೂಲಕ ಮಕ್ಕಳ ಹಕ್ಕುಗಳನ್ನು ಸಂರಕ್ಷಣೆ ಮಾಡಲು ನಾಗರಿಕ ಸಮಾಜದ ಪ್ರತಿಯೊಬ್ಬರು ಮುಂದಾಗಬೇಕು ಎಂದು ಯುವ ಮುಖಂಡ ಪರಶುರಾಮ ಹೊಸಮನಿ ಹೇಳಿದರು.
ಅವರು ಮಂಗಳವಾರ ತಾಲೂಕಿನ ಹಿರೇರೂಗಿ
ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ ವಿಜಯಪುರ, ತಾಲೂಕು ಪಂಚಾಯತ ಕಾರ್ಯಾಲಯ ಇಂಡಿ, ಸಪ್ತಗಿರಿ
ಫೌಂಡೇಶನ್ ವಿಜಯಪುರ ಹಾಗೂ ಗ್ರಾಮ
ಪಂಚಾಯಿತಿ ಹಿರೇರೂಗಿ ಇವರ ಸಂಯುಕ್ತ
ಆಶ್ರಯದಲ್ಲಿ ಹಮ್ಮಿಕೊಂಡ ಡಾ.ಬಿ ಆರ್ ಅಂಬೇಡ್ಕರ್
ಅವರ ಜೀವನ ಮತ್ತು ವಿಚಾರಧಾರೆಯ ಕಾನೂನು
ಅರಿವು ಮೂಡಿಸುವ ನಾಟಕ ಪ್ರದರ್ಶನ ಕಾರ್ಯಕ್ರಮಕ್ಕೆ ತಮಟೆ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಶಿಕ್ಷಕ ಸಂತೋಷ ಬಂಡೆ ಮಾತನಾಡಿ,ಡಾ. ಬಿ ಆರ್
ಅಂಬೇಡ್ಕರ್ ಅವರ ಜೀವನಾದರ್ಶಗಳನ್ನು
ಮಕ್ಕಳು ಬಾಲ್ಯದಿಂದಲೇ ಮೈಗೂಡಿಸಿಕೊಳ್ಳಬೇಕು. ತಮ್ಮ ಜೀವನದಲ್ಲಿ ಹಲವು ಕಷ್ಟ ಸವಾಲುಗಳನ್ನು ಅನುಭವಿಸಿದ ಅವರು ಸಂವಿಧಾನ ಮೂಲಕ ಸಾಮಾಜಿಕ ನ್ಯಾಯ ಒದಗಿಸಿದ ಮಹಾನ್ ಮಾನವತಾವಾದಿಯಾಗಿದ್ದಾರೆ. ತಮ್ಮ ಜೀವಿತದುದ್ದಕ್ಕೂ ಶಿಕ್ಷಣಕ್ಕೆ ಮೊದಲಾದ್ಯತೆ ನೀಡಿದ ಅಂಬೇಡ್ಕರರು ನಮಗೆಲ್ಲ ಆದರ್ಶಪ್ರಾಯರು ಎಂದು ಹೇಳಿದರು.
ಯುವ ಮುಖಂಡ ಸಂತೋಷ ಕೋಟಗೊಂಡ,
ಮುಖ್ಯ ಶಿಕ್ಷಕರಾದ ಅನಿಲ ಪತಂಗಿ, ವಿ ವೈ ಪತ್ತಾರ, ಎ
ಎಂ ಬೆದ್ರೇಕರ ಹಾಗೂ ಶಿಕ್ಷಕರಾದ ಎಸ್ ಆರ್
ಚಾಳೇಕರ, ಎಸ್ ಎಂ ಪಂಚಮುಖಿ, ಎಸ್ ಎಸ್ ಅರಬ, ಎಸ್ ಡಿ ಬಿರಾದಾರ, ಎಸ್ ಬಿ ಕುಲಕರ್ಣಿ, ಎಸ್ ಪಿ ಪೂಜಾರಿ, ಜೆ ಎಂ ಪತಂಗಿ, ಸಾವಿತ್ರಿ ಸಂಗಮದ,ಎನ್ ಬಿ ಚೌಧರಿ, ಜೆ ಸಿ ಗುಣಕಿ, ಎಸ್ ಎನ್ ಡಂಗಿ, ಶಾಂತೇಶ ಹಳಗುಣಕಿ, ಸುರೇಶ ದೊಡ್ಯಾಳಕರ, ಎಫ್ ಎ ಹೊರ್ತಿ,ಎಸ್ ವ್ಹಿ ಬೆನೂರ ಮತ್ತು ಪಂಚಾಯತ್ ಸಿಬ್ಬಂದಿ ಬಸವರಾಜ ತಳಕೇರಿ, ಸಪ್ತಗಿರಿ ಫೌಂಡೇಶನ್ ಅಧ್ಯಕ್ಷ ಸುನೀಲ ರೆಡ್ಡಿ ಸೇರಿದಂತೆ ಎಲ್ಲ ಶಿಕ್ಷಕರು ಹಾಗೂ ಮಕ್ಕಳು,
ಪಾಲಕರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಕಲಾವಿದರು ಡಾ.ಬಿ.ಆರ್.
ಅಂಬೇಡ್ಕರ್ ಅವರ ಜೀವನ ಮತ್ತು ವಿಚಾರಧಾರೆಯ
ಕಾನೂನು ಅರಿವು ಮೂಡಿಸುವ ನಾಟಕ ಪ್ರದರ್ಶನ
ಮಾಡಿದರು.
ಇಂಡಿ: ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ಜೀವನ ಮತ್ತು ವಿಚಾರಧಾರೆಯ ಕಾನೂನು ಅರಿವು ಮೂಡಿಸುವ ನಾಟಕ ಪ್ರದರ್ಶನ ಮಾಡಲಾಯಿತು.