ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಂದ ಕುಂದು-ಕೊರತೆಗಳ ಸಭೆ
ವಿಜಯಪುರ, ಮೇ.15 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೆÇಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಜಯಪುರ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು ಇವರ ಸಹಯೋಗದಲ್ಲಿ ವಿಧವೆಯರ ಕುಂದು ಕೊರತೆ ಸಭೆಯನ್ನು ನಗರದ ಕಂದಗಲ್ ಶ್ರೀ ಹಣಮಂತರಾಯ ರಂಗಮಂದಿರದಲ್ಲಿ ಗುರುವಾರ ಆಯೋಜಿಸಿಲಾಗಿತ್ತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಮಹಿಳೆಯರ ಸಮಸ್ಯೆಯನ್ನು ಅತ್ಯಂತ ಶಾಂತಚಿತ್ತದಿಂದ ಆಲಿಸಿ, ಅವರ ಸಮಸ್ಯೆಗಳಿಗೆ ಪರಿಹಾರಕ್ಕೆ ಸಂಬಂಧಪಟ್ಟವರಿಗೆ ಸೂಚಿಸಿದರು. ಈ ಕುಂದು ಕೊರತೆ ಸಭೆಯಲ್ಲಿ ವಿಜಯಪುರ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಮಹಿಳೆಯರ ಸಮಸ್ಯೆಗಳನ್ನು ಆಲಿಸಲಾಯಿತು.
ಸಮಸ್ಯೆಗಳನ್ನು ಆಲಿಸಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಮಹಿಳೆಯರ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸಂಬಂಧಿಸಿದ ಸರ್ಕಾರಿ ಇಲಾಖೆಗಳಿಗೆ ತಮ್ಮ ಸಮಸ್ಯೆಗಳನ್ನು ಕೊಂಡೊಯ್ದು ತಮ್ಮ ಸಮಸ್ಯೆಗಳಿಗೆ ಪರಿಹರಿಸಲಾಗುವುದು ಎಂದು ಅವರು ಹೇಳಿದರು.
ವಿಜಯಪುರದ ಅನ್ನಪೂರ್ಣ ನಾಗನೂರು ಎಂಬುವವರು ಬದುಕಿಗೆ ಯಾವುದೇ ಸೂರಿಲ್ಲದೇ ತುಂಬ ತೊಂದರೆಯಾಗುತ್ತಿದ್ದು, ಸರ್ಕಾರಿ ಯೋಜನೆಯಡಿ ಯಾವುದಾದರೊಂದು ಮನೆ ಹಾಗೂ ಉದ್ಯೋಗ ಒದಗಿಸುವಂತೆ ಮನವಿ ಮಾಡಿಕೊಂಡ ಹಿನ್ನಲೆಯಲ್ಲಿ ಆಶ್ರಯ ಯೋಜನೆ ಮನೆ ಹಾಗೂ ಉದ್ಯೋಗ ದೊರಕಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ರಬಕವಿ ಬನ್ನಟ್ಟಿಯಿಂದ ಬಂದಿದ್ದ 20 ವರ್ಷದ ರೇಖಾ ತುಂಗಳ ಎಂಬುವವರು ತನಗೆ ಎರಡು ಮಕ್ಕಳ ಹಾಗೂ ವೃದ್ಧ ತಂದೆ ತಾಯಿ ಇದ್ದು, ಜೀವನ ನಿರ್ವಹಣೆಗೆ ಆಧಾರ ಕಲ್ಪಿಸಿಕೊಡುವಂತೆ ಕೋರಿದ ಮನವಿಗೆ ಸ್ಪಂದಿಸಿದ ಅಧ್ಯಕ್ಷರು ಪೋಷಕತ್ವ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆಯೂ ಉದ್ಯೋಗ ದೊರಕಿಸಿ ಕೊಡುವುದಾಗಿ ಭರವಸೆ ನೀಡಿದರು.
ವಿಜಯಪುರದÀ ಸವಿತಾ ಜಮಾದಾರ ಎಂಬುವವರು ಶ್ರವಣ ದೋಷವಿರುವ ತಮ್ಮ ಮಗನ ಚಿಕಿತ್ಸೆಗೆ ಸಹಾಯ, ಚಡಚಣದ ಬಾಕಿಯೋರ್ವಳು ಮುಂದಿನ ವಿದ್ಯಾಭ್ಯಾಸಕ್ಕೆ ಅಗತ್ಯ ದಾಖಲೆಗಳು ಹಾಗೂ ತನ್ನ ಸಹೋದರಿಗೆ ಹೃದ್ರೋಗದ ಚಿಕಿತ್ಸೆಗೆ ಸಹಾಯ, ಕಲ್ಬುರ್ಗಿಯ ಜಯಶ್ರೀ ಕಲ್ಲೂರ ಅವರ ಮಕ್ಕಳ ಶಿಕ್ಷಣ ಹಾಗೂ ಉದ್ಯೋಗಕ್ಕೆ ಸಹಾಯ, ಬಿಎಡ್, ಡಿಎಡ್ ಶಿಕ್ಷಣ ಹೊಂದಿರುವ ಸಿಂದಗಿಯ ಗುರುಸಿದ್ದಮ್ಮ ಹೊಸಮನಿಯವರು ಮನವಿ ಸಲ್ಲಿಸಿ, ಪತಿ ನಿಧನವಾಗಿದ್ದು, ಮೂರು ಮಕ್ಕಳಿಗೆ ಕಷ್ಟಸಾಧ್ಯವಾಗುತ್ತಿದೆ. ಕುಟುಂಬ ನಿರ್ವಹಣೆಗೆ ಉದ್ಯೋಗ ದೊರಕಿಸಬೇಕು. ಅದರಂತೆ ಹಿಟ್ನಳ್ಳಿಯ ವಿಕಲಚೇತನೆ ಚನ್ನಮ್ಮ ಮೇತ್ರಿ ಎಂಬುವವರು ತಾನು ಬಿಎಡ್, ಎಂ ಎಡ್ ಓದಿದ್ದು, ನನಗೆ ಉದ್ಯೋಗ ದೊರಕಿಸುವಂತೆ ಮನವಿ ಸಲ್ಲಿಸಿದ್ದು, ಸಲ್ಲಿಕೆಯಾದ ಎಲ್ಲ ಬೇಡಿಕೆಗಳಿಗೆ ಸ್ಪಂದಿಸಿ, ಪರಿಹಾರ ಒದಗಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.
ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿತಿದ್ದ ಮಹಿಳೆಯೋರ್ವಳು, ತಮ್ಮ ದೂರು ಸಲ್ಲಿಸಿ, ಪತಿಯ ನಿಧನದ ನಂತರ ಜಮೀನು ಮಾರಿದ್ದ ಮಾಲೀಕನು ಇದೀಗ ಜಮೀನಿನಲ್ಲಿ ಉಳುಮೆ ಮಾಡಲು ತಡೆಯೊಡ್ಡುತ್ತಿದ್ದು, ನನಗೆ ಸಹಾಯ ಒದಗಿಸುವಂತೆ ಕೋರಿ ಬಂದ ಮನವಿ ನಾಗಲಕ್ಷ್ಮಿಯವರು ಸ್ಥಳದಲ್ಲಿದ್ದ ಸಂಬಂದಿಸಿದ್ದ ಅಧಿಕಾರಿಗಳಿಗೆ ಸಮಸ್ಯೆ ಪರಿಹಾರಕ್ಕೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಕೆ.ಕೆ.ಚವ್ಹಾಣ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಪುಂಡಲಿಕ ಮಾನವರ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಸಿ.ಬಿ.ಕುಂಬಾರ, ಜಿಲ್ಲಾ ಪಂಚಾಯತಿಯ ಯೋಜನಾ ನಿರ್ದೇಶರಾದ ರಾಠೋಡ, ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು, ಪೆÇಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.


















