ಕೋಟೆನಾಡಿನಲ್ಲಿ ಭೀಕರ್ ಅಫಘಾತ್..! ಮೂವರ್ ದುರ್ಮರಣ
ಚಿತ್ರದುರ್ಗ: ಅಜ್ಜಿಯ ಶವ ಕೊಂಡೊಯ್ಯುವಾಗ ಕಾರಿನ ಟೈಯರ್ ಬ್ಲಾಸ್ಟ್ ಪಲ್ಟಿಯಾಗಿರುವ ಪರಿಣಾಮ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಚಿತ್ರದುರ್ಗದ ಮೊಳಕಾಲ್ಮೂರು ತಾಲ್ಲೂಕಿನ ರಾಂಪುರ ಬಳಿ ನಡೆದಿದೆ. ಮೃತರೆಲ್ಲರೂ ರಾಯಚೂರು ಸಿರುಗುಪ್ಪ ಮೂಲದವರಾದ ಸುರೇಶ್ (40) , ಮಲ್ಲಿ (25), ಭೂಮಿಕ (9) ಮೃತ ದುರ್ದೈವಿಗಳು. ಇನ್ನು ನಾಗಮ್ಮ (31), ತಾಯಮ್ಮ (56), ಧನರಾಜ್ (39) ಹಾಗೂ ಚಾಲಕ ಶಿವು (26) ಗಂಭೀರ ಗಾಯಗೊಂಡಿದ್ದಾರೆ. ರಾಂಪುರ ಬಳಿಯ ಗ್ರ್ಯಾಂಡ್ ಪೋರ್ಡ್ ಹೋಟೆಲ್ ಬಳಿ ಈ ದುರ್ಘಟನೆ ಆಗಿದೆ. ಬೆಂಗಳೂರಿನಿಂದ ಅಜ್ಜಿಯ ಶವ ಸಿರುಗುಪ್ಪಗೆ ಕೊಂಡೊಯ್ಯುತ್ತಿದ್ದರು. ಘಟನೆಯಲ್ಲಿ 3 ಮಂದಿಯ ಸ್ಥಿತಿ ಗಂಭೀರವಾಗಿದೆ. ರಾಂಪುರ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಪಿಎಸ್ಐ ಪರಶುರಾಮ್ ಲಮಾಣಿ ಭೇಟಿ, ಪರಿಶೀಲನೆ ನಡೆಸಿದರು. ರಾಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.