ಇಂಡಿ : ಆಕಸ್ಮಿಕವಾಗಿ ಲಾರಿಯ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡು ಲಾರಿ ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಝಳಕಿ ರಸ್ತೆಯಲ್ಲಿ ನಡೆದಿದೆ.
ಇನ್ನು ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಪರಿಣಾಮ ಚಾಲಕ ಹಾಗೂ ಕ್ಲಿನರ್ ಲಾರಿಯಿಂದ ಇಳಿದು ಜೀವ ಉಳಿಸಿಕೊಂಡಿದ್ದಾರೆ. ಅಲ್ಲದೇ, ಬಳ್ಳೊಳ್ಳಿ ಪೆಟ್ರೋಲ್ ಪಂಪ್ ಬಳಿಯೇ ಧಗಧಗನೆ ಹೊತ್ತಿ ಉರಿದುಕೊಂಡಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಝಳಕಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.