• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಕ್ರಮ -ಸಚಿವ ಡಾ.ಎಂ.ಬಿ.ಪಾಟೀಲ

      ಮಮದಾಪುರ-ದೂಡಿಹಾಳ-ರಾಷ್ಟ್ರೀಯ ಹೆದ್ದಾರಿ 218ಕ್ಕೆ ಕೂಡುವ ಜಿಲ್ಲಾ ಮುಖ್ಯ ರಸ್ತೆಗೆ ಭೂಮಿಪೂಜೆ

      September 10, 2024
      0
      ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಕ್ರಮ -ಸಚಿವ ಡಾ.ಎಂ.ಬಿ.ಪಾಟೀಲ
      0
      SHARES
      160
      VIEWS
      Share on FacebookShare on TwitterShare on whatsappShare on telegramShare on Mail

      ಮಮದಾಪುರ-ದೂಡಿಹಾಳ-ರಾಷ್ಟ್ರೀಯ ಹೆದ್ದಾರಿ 218ಕ್ಕೆ ಕೂಡುವ ಜಿಲ್ಲಾ ಮುಖ್ಯ ರಸ್ತೆಗೆ ಭೂಮಿಪೂಜೆ

       

      ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಕ್ರಮ -ಸಚಿವ ಡಾ.ಎಂ.ಬಿ.ಪಾಟೀಲ

      ವಿಜಯಪುರ :ಬಬಲೇಶ್ವರ ಮತಕ್ಷೇತ್ರ ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿಸುವ ಪಣ ತೊಟ್ಟು ಮತಕ್ಷೇತ್ರದಾದ್ಯಂತ ರಸ್ತೆ, ವಿದ್ಯುತ್, ನೀರಾವರಿ ಸೇರಿದಂತೆ ಎಲ್ಲ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡು ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.

      ಬಬಲೇಶ್ವರ ತಾಲೂಕಿನ ಮಮದಾಪುರ-ದೂಡಿಹಾಳ ಮುಖಾಂತರ ರಾಷ್ಟ್ರೀಯ ಹೆದ್ದಾರಿ-218ಕ್ಕೆ ಕೂಡುವ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ದಿ ಕಾಮಗಾರಿ ರವಿವಾರ ಮಮದಾಪುರದಲ್ಲಿ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿ, ಶೇಗುಣಸಿಯಿಂದ ಮಮದಾಪುರವರೆಗೆ ಸುಮಾರು 9.5 ಕಿ.ಮೀ. ರಸ್ತೆಯನ್ನು 15 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಮುಂದುವರೆದ ಭಾಗವಾಗಿ ಮಮದಾಪುರದಿಂದ 218ರವರೆಗೆ 11.6 ಕಿ.ಮೀ. ರಸ್ತೆಯ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಬಬಲೇಶ್ವರ ಮತಕ್ಷೇತ್ರದಲ್ಲಿಯೇ ಮಮದಾಪುರ ಹೋಬಳಿಗೆ ಅತಿ ಹೆಚ್ಚಿನ ಅನುದಾನ ಒದಗಿಸುವ ಮೂಲಕ ಅಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
      ಬಹುÀದಶಕಗಳ ಕನಸಾಗಿದ್ದ ಮಮದಾಪುರ ಕೆರೆ ತುಂಬುವುದು, ಕಳೆದ 2013 ರಿಂದ 2018ರ ಅವಧಿಯಲ್ಲಿ ನಾನು ಜಲಸಂಪನ್ಮೂಲ ಸಚಿವನಾದ ಮೇಲೆ ಮಮದಾಪುರ ಕೆರೆ ಹೂಳು ತೆಗೆದು, ಮನಸ್ಸಿದ್ದರೆ ಮಾರ್ಗ ಎಂಬ ಧೋರಣೆಯೊಂದಿಗೆ ಸಿದ್ದೇಶ್ವರ ಶ್ರೀಗಳ ಪ್ರೇರಣೆಯೊಂದಿಗೆ ಅಸಾಧ್ಯವಾದುದನ್ನು ಸಾಧ್ಯವನ್ನಾಗಿಸಲಾಗಿದೆ ಎಂದು ಹೇಳಿದರು.

      ಮಮದಾಪುರ ಕೆರೆ ತುಂಬುವುದರಿಂದ ಅಂತರ್ ಜಲ ಮಟ್ಟ ಹೆಚ್ಚಾಗಿ ಈ ಭಾಗದಲ್ಲಿ ಅಭಿವೃದ್ದಿಯಾಗಿ, ರೈತರಿಗೆ ಅನುಕೂಲವಾಗಿದೆ. ಕೆಲವು ದಿನಗಳ ಹಿಂದೆ ಹಿಂದುಸ್ತಾನ ಕೋಕಾ ಕೋಲಾ ಬೆವೆರಜಿಸ್ ಕಂಪನಿ ವತಿಯಿಂದ ಸಿಎಸ್‍ಆರ್ ಅನುದಾನದಲ್ಲಿ ಐತಿಹಾಸಿಕ ಮಮದಾಪುರ ಕೆರೆಯ ಪುನರುಜ್ಜೀವನ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಮಮದಾಪುರದಲ್ಲಿರುವ 1600 ಎಕರೆ ಮೀಸಲು ಅರಣ್ಯ ಪ್ರದೇಶವನ್ನು ಅಭಿವೃದ್ದಿಪಡಿಸಲಾಗುತ್ತಿದೆ. ರಾಷ್ಟ್ರದಲ್ಲಿಯೇ ಅತ್ಯುತ್ತಮವಾದ ಎಲ್ಲ ಸೌಕರ್ಯಗಳನ್ನೊಳಗೊಂಡ ಅರಣ್ಯ ಪ್ರದೇಶ ಅಭಿವೃದ್ದಿಪಡಿಸಿ, ಸಾಯಿನ್ಸ್ ಮ್ಯೂಸಿಯಂ, ಮಕ್ಕಳ ಚಟುವಟಿಕೆಗಾಗಿ ಪ್ರತ್ಯೇಕ ತಾಣ ಸೇರಿದಂತೆ ಸುಂದರವಾದ ಪ್ರವಾಸಿ ತಾಣವನ್ನಾಗಿ ಅಭಿವೃದ್ದಿಪಡಿಸಲಾಗುವುದು. ಈ ಅರಣ್ಯ ಪ್ರದೇಶವನ್ನು ಪ್ರಕೃತಿ-ನಿಸರ್ಗ ಪ್ರೇಮಿ ಸಿದ್ದೇಶ್ವರ ಶ್ರೀಗಳಿಗೆ ಅರ್ಪಣೆ ಮಾಡಲಾಗುತ್ತಿದೆ. ಪ್ರಕೃತಿಯಿಂದ ಬಂದಿದ್ದೇನೆ, ನಿಸರ್ಗದಲ್ಲಿ ವಿಲೀನವಾಗಬೇಕೆಂಬ ಸಿದ್ದೇಶ್ವರ ಶ್ರೀಗಳ ಆಶಕ್ಕನುಗುಣವಾಗಿ ಶ್ರೀಗಳನ್ನು ಪ್ರಕೃತಿಯಲ್ಲಿ ಕಾಣುವ ನಿಟ್ಟಿನಲ್ಲಿ ಸ್ವಚ್ಛ ಸುಂದರ ಪ್ರಕೃತಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.

      ದೇವರೆಗೆನ್ನೂರದಿಂದ ಕೊಡಬಾಗಿ ಕ್ರಾಸ್ 6 ಕಿ.ಮೀ. ರಸ್ತೆಗೆ 9 ಕೋಟಿ ರೂ. ವೆಚ್ಚ ಮಾಡಲಾಗಿದೆ. ಕಂಬಾಗಿ-ಮಮದಾಪುರ 6 ಕಿ.ಮೀ. ರಸ್ತಗೆ 8 ಕೋಟಿ ರೂ. ವೆಚ್ಚ ಮಾಡಲಾಗಿದೆ. ಕೊಡಬಾಗಿ-ಜೈನಾಪುರ ವ್ಹಾಯಾ ಮಂಗಳೂರ 5 ಕಿ.ಮೀ. ಹಳೆ ಜೈನಾಪುರದಿಂದ ಜೈನಾಪುರ 3 ಕಿ.ಮೀ. ರಸ್ತೆ 4.50 ಕೋಟಿ ರೂ. ವೆಚ್ಚ ಮಾಡಲಾಗಿದೆ. ಶೇಗುಣಸಿ-ಮಮದಾಪುರ 9.5 ಕಿ.ಮೀ. ರಸ್ತೆ 15 ಕೋಟಿ ರೂ. ವೆಚ್ಚ ಮಾಡಿ ಅಭಿವೃದ್ದಿ ಪಡಿಸಲಾಗಿದೆ. ಶೇಗುಣಸಿಯಿಂದ ಮದಗುಣಕಿ 5 ಕಿ.ಮೀ. ರಸ್ತೆಗೆ 4 ಕೋಟಿ ರೂ. ವೆಚ್ಚದ ಕಾಮಗಾರಿ ಅನುಮತಿ ದೊರೆತಿದ್ದು, ಬಹುತೇಕ ಎಲ್ಲ ಕಾರ್ಯಗಳನ್ನು ಈ ಭಾಗದಲ್ಲಿ ಮಾಡಿ ಅಭಿವೃದ್ದಿಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.
      ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನೋಟಬುಕ್‍ಗಳನ್ನು ವಿತರಿಸಲಾಯಿತು.

      ಮಮದಾಪುರ ವಿರಕ್ತಮಠದ ಪರಮಪೂಜ್ಯ ಅಭಿನವ ಮುರುಘೇಂದ್ರ ಸ್ವಾಮೀಜಿಗಳು ಸಾನಿಧ್ಯ ವಹಿಸಿದ್ದರು. ಧಾರವಾಡದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ಗ್ರಾಮ ಪಂಚಾಯತ್ ಅಧ್ಯಕ್ಷ ಮಲ್ಲಿಕಾರ್ಜುನ ಗಂಗೂರ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಸಿ.ಬಿ.ಚಿಕ್ಕಲಕಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

      Tags: #Action to make a model polling station in the state - Minister Dr. MB Patil#MB patil minister#Public News#ಮಮದಾಪುರ-ದೂಡಿಹಾಳ-ರಾಷ್ಟ್ರೀಯ ಹೆದ್ದಾರಿ 218ಕ್ಕೆ ಕೂಡುವ ಜಿಲ್ಲಾ ಮುಖ್ಯ ರಸ್ತೆಗೆ ಭೂಮಿಪೂಜೆ#ರಾಜ್ಯದಲ್ಲಿಯೇ ಮಾದರಿ ಮತಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಕ್ರಮ -ಸಚಿವ ಡಾ.ಎಂ.ಬಿ.ಪಾಟೀಲvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.