ನಂತರ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ಮಾತನಾಡಿ ಮಧ್ಯವರ್ಜನ ಶಿಬಿರಗಳು ಅನೇಕ ಕುಟುಂಬಗಳಿಗೆ ಹೊಸ ಬದುಕಿನ ಆಶಾಕಿರಣವಾಗಿದ್ದು, ಇಲ್ಲಿ ದೊರಕುವ ಮಾರ್ಗದರ್ಶನವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಶಾಶ್ವತ ಬದಲಾವಣೆ ಸಾಧ್ಯವೆಂದು, ಇಲ್ಲಿ ತಮ್ಮ ಜೀವನ ರೂಪಿಸಿಕೊಂಡು ಮುಂದಿನ ದಿನಗಳಲ್ಲಿ ಉತ್ತಮ ಬದುಕನ್ನು ರೂಪಿಸಿಕೊಳ್ಳಿ ಎಂದರು.
ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮಾಂತಗೌಡ ಬಿರಾದಾರ ಅವರು ಶಿಬಿರದ ಉದ್ದೇಶ ಹಾಗೂ ಕಾರ್ಯ. ಯೋಜನೆಗಳನ್ನು ವಿವರಿಸಿದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಡಾ. ವೀರೇಶ ಪಾಟೀಲ್, ಅವರು ವ್ಯಸನದ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ಯೋಜನಾಧಿಕಾರಿ ಶಿವಾನಂದ ಪಿ. (ಮುದ್ದೇಬಿಹಾಳ) ಪುನರ್ವಸತಿ ಹಾಗೂ ಸಮಾಲೋಚನಾ ಕಾರ್ಯಕ್ರಮಗಳ ಮಹತ್ವವನ್ನು ವಿವರಿಸಿದರು.
ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿ ಡವಳಗಿ ವಲಯದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಈ ಶಿಬಿರವು ಡಿಸೆಂಬರ್ 26, 2025ರಿಂದ ಜನವರಿ 2, 2026ರವರೆಗೆ ಏಳು ದಿನಗಳ ಕಾಲ ನಡೆಯಲಿದೆ. ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿ.ಸಿ. ಟ್ರಸ್ಟ್) ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ ಹಾಗೂ ವಿಜಯಪುರ ಜಿಲ್ಲೆ, ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನಾ ಕೇಂದ್ರ ಉಜಿರೆ ಮತ್ತು ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಸಹಕಾರದಲ್ಲಿ ಶಿಬಿರವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಮಧ್ಯವರ್ಜನ ಶಿಬಿರ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು, ಜನಜಾಗೃತಿ ವೇದಿಕೆಯ ಸದಸ್ಯರು, ವಿವಿಧ ವಲಯಗಳ ಮೇಲ್ವಿಚಾರಕರು ಹಾಗೂ ಗಣ್ಯರು ಉಪಸ್ಥಿತರಿದ್ದರು. ನಿಂಗನಗೌಡ ಪಾಟೀಲ್ (ಡವಳಗಿ ವಲಯ ಮೇಲ್ವಿಚಾರಕರು) ಕಾರ್ಯಕ್ರಮ ನಿರೂಪಿಸಿದರು. ಜಗದೀಶ ಸುರ್ವೆ (ಹುಲ್ಲೂರ ವಲಯ ಮೇಲ್ವಿಚಾರಕರು) ವಂದನಾರ್ಪಣೆ ಸಲ್ಲಿಸಿದರು.
© 2026 VOJNews - Powered By Kalahamsa Infotech Private Limited.