ಲಿಂಗಸೂಗೂರು: ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಐತಿಹಾಸಿಕ ಮುದಗಲ್ ಪಟ್ಟಣದ ಕೋಟೆ ಸ್ವಚ್ಛತಾ ಅಭಿಯಾನಕ್ಕೆ ಅಡ್ವಾನ್ಸ್ ಟೆಕ್ನಾಲಜಿ ಕಂಪ್ಯೂಟರ್ ಎಜುಕೇಶನ್ ಸೆಂಟರ್ ನ ಸಂಸ್ಥಾಪಕರಾದ ಮಹಮ್ಮದ ಆಸೀಫ್ ಅವರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಕೋಟೆ ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾಗಿ ಶ್ರಮದಾನ ಮಾಡಿದರು.
ಈ ಕೋಟೆ ಸ್ವಚ್ಛತಾ ಅಭಿಯಾನಕ್ಕೆ ಸ್ಥಳೀಯ ಅಡ್ವಾನ್ಸ್ ಟೆಕ್ನಾಲಜಿ ಕಂಪ್ಯೂಟರ್ ಎಜುಕೇಶನ್ ವಿದ್ಯಾರ್ಥಿಗಳೊಂದಿಗೆ ಪುರಸಭೆ ಸದಸ್ಯ ಮಹೆಬೂಬ್ ಕಡ್ಡಿಪುಡಿ ಕೋಟೆ ಸ್ವಚ್ಛತಾ ಕಾರ್ಯದಲ್ಲಿ ಮುಳ್ಳು ಗಿಡಗಳನ್ನು ಕಡಿದು ಭಾಗವಹಿಸಿದ್ದು ವಿಶೇಷವಾಗಿತ್ತು. ನಂತರ ಶ್ರಮದಾನ ಮಾಡಿದ ತಂಡದ ನೇತೃತ್ವ ವಹಿಸಿದ ಮಹಮ್ಮದ ಆಸೀಫ ಅವರಿಗೆ ಅಶೋಕಗೌಡ ಪಾಟೀಲ್, ಗುರುಬಸ್ಸಪ್ಪ ಸಜ್ಜನ್ ಹಾಗು ಕರವೇ ಅಧ್ಯಕ್ಷ ಎಸ್.ಎ.ನಯೀಮ್ ಅವರು ಸನ್ಮಾನಿಸಿ ಧನ್ಯವಾದಗಳನ್ನು ಹೇಳಿದರು. ಈ ಸಂದರ್ಭದಲ್ಲಿ ಶಾನೂರ, ಸಾಬಿರ್ ಪಾಷಾ, ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.