ವಿಜಯಪುರದಲ್ಲಿ ಸೆ.10ರಿಂದ ಅಗ್ನಿವೀರ ನೇಮಕಾತಿ ರ್ಯಾಲಿ
ಸುಗಮ ನಿರ್ವಹಣೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ
ವಿಜಯಪುರ, ಆ.12 : ನಗರದ ಡಾ. ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 10 ರಿಂದ 23ರವರೆಗೆ ಭಾರತೀಯ ಸೇನೆಯ ಅಗ್ನಿವೀರ ನೇಮಕಾತಿ ರ್ಯಾಲಿ ನಡೆಯಲಿದ್ದು, ನೇಮಕಾತಿ ರ್ಯಾಲಿಯನ್ನು ಶಿಸ್ತುಬದ್ಧ ಹಾಗೂ ಪಾರದರ್ಶಕವಾಗಿ ನಡೆಸಲು ಜಿಲ್ಲಾಡಳಿತದ ವಿವಿಧ ಇಲಾಖೆಗಳು ಸಮನ್ವಯತೆಯಿಂದ ಪೂರ್ಣ ಪ್ರಮಾಣದ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳೂರಿನ ಸೇನಾ ನೇಮಕಾತಿ ಕಚೇರಿಯ ಅಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ರ್ಯಾಲಿಯು ಪ್ರತಿದಿನ ಬೆಳಗಿನ ಜಾವ 3 ಗಂಟೆಯಿAದ ಆರಂಭವಾಗಲಿದ್ದು, ಕ್ರೀಡಾಂಗಣದ ಸಿಂಥೆಟಿಕ್ ಟ್ರಾö್ಯಕ್, ಒಳಾಂಗಣ ಬ್ಯಾಡ್ಮಿಂಟನ್ ಹಾಗೂ ಬಾಸ್ಕೆಟ್ಬಾಲ್ ಕೋರ್ಟ್ಗಳಲ್ಲಿ ದೈಹಿಕ ಪರೀಕ್ಷೆ, ವೈದ್ಯಕೀಯ ತಪಾಸಣೆ ಹಾಗೂ ದಾಖಲೆಗಳ ಪರಿಶೀಲನೆ ನಡೆಯಲಿದೆ.
ಬಸ್ ಮತ್ತು ರೈಲ್ವೆ ನಿಲ್ದಾಣಗಳು ಕ್ರೀಡಾಂಗಣ ಹತ್ತಿರದಲ್ಲಿರುವುದರಿಂದ ಅಭ್ಯರ್ಥಿಗಳ ಅನುಕೂಲಕ್ಕಾಗಿ ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸಲು ಸೂಚಿಸಲಾಯಿತು. ಮೈದಾನದಲ್ಲಿ ಜಲನಿರೋಧಕ ಟೆಂಟ್ಗಳು, ಕುರ್ಚಿ-ಟೇಬಲ್, ಕುಡಿಯುವ ನೀರು ಹಾಗೂ ಬಯೋ ಟಾಯ್ಲೆಟ್ಗಳನ್ನು ಒದಗಿಸಲಾಗುತ್ತಿದೆ.
ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ವತಿಯಿಂದ ಅಭ್ಯರ್ಥಿಗಳು ಸೇರಿದಂತೆ ರ್ಯಾಲಿ ನಿರ್ವಹಣೆಗೆ ಆಗಮಿಸುವ ಸೇನಾಧಿಕಾರಿ, ಸಿಬ್ಬಂದಿಗೆ ವಸತಿ ವ್ಯವಸ್ಥೆ ಕಲ್ಪಿಸ¯ಲು ಸೂಚಿಸಲಾಯಿತು.
ದಾಖಲೆಗಳ ತ್ವರಿತ ಪರಿಶೀಲನೆಗಾಗಿ ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ಕಂದಾಯ, ಕ್ರೀಡೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿಶೇಷ ತಂಡವನ್ನು ನಿಯೋಜಿಸಲಾಗಿದ್ದು,ಸ್ಥಳದಲ್ಲೇ ಪರಿಶೀಲಿ¸ಲು ಅಗತ್ಯ ಅಧಿಕಾರಿ, ಸಿಬ್ಬಂದಿ ನಿಯೋಜಿಸಲು ಸುಚನೆ ನೀಡಲಾಯಿತು.
ಸಂಚಾರ ದಟ್ಟಣೆ ನಿಯಂತ್ರಿಸಲು ಸೂಕ್ತ ಪಾರ್ಕಿಂಗ್ ಹಾಗೂ ಬ್ಯಾರಿಕೇಡ್ ವ್ಯವಸ್ಥೆ,ಅಭ್ಯರ್ಥಿಗಳೊಂದಿಗೆ ಪಾಲಕರೂ ಆಗಮಿಸುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಬಿಗಿ ಬಂದೋಬಸ್ತ್ ಹಾಗೂ ಸಿಸಿಟಿವಿ ಕಣ್ಗಾವಲು ಇರಲಿದೆ. ವಿದ್ಯುತ್, ಇಂಟರ್ನೆಟ್, ಅಂಬುಲೆನ್ಸ್, ಅಗ್ನಿಶಾಮಕ ಹಾಗೂ ಕುಡಿಯುವ ನೀರಿನ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸೂಚಿಸಲಾಯಿತು.
ಅಧಿಕಾರಿಗಳು ಕರ್ತವ್ಯ ಚಾರ್ಟ್ ಸಿದ್ಧಪಡಿಸಿಕೊಂಡು, ವಾಟ್ಸಾಪ್ ಗ್ರೂಪ್ ಮೂಲಕ ಅಗತ್ಯ ವಿವರಗಳನ್ನು ಹಂಚಿಕೊಳ್ಳುವುದರ ಜೊತೆಗೆ ಸೈಣ್ಯಾಧಿಕಾರಿಗಳೊಂದಿಗೆ ನಿರಂತರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ತಿಳಿಸಿದರು.
ಮಂಗಳೂರು ಆರ್ಮಿ ರಿಕ್ರೂಟ್ಮೆಂಟ್ನ ನಿರ್ದೇಶಕರಾದ ಕರ್ನಲ್ ಜಿ. ಸೋಮು ಮಹಾರಾಜನ ಅವರು ಜಿಲ್ಲಾಡಳಿತದಿಂದ ಅಗತ್ಯ ಸಹಕಾರ ಕೋರಿದರು.
ಸಭೆಯಲ್ಲಿ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಲ್ಲನಗೌಡ ಬಿರಾದಾರ, ಎನ್ಐಸಿ ಅಧಿಕಾರಿ ಶಿವಾನಂದ ಗೂಗವಾಡ, ಆಹಾರ ಇಲಾಖೆಯ ಉಪನಿರ್ದೇಶಕ ವಿನಯಕುಮಾರ ಪಾಟೀಲ, ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಶಿವಾನಂದ ಮಾಸ್ತಿಹೊಳಿ, ತಹಶೀಲ್ದಾರ ಪ್ರಶಾಂತ ಚನಗೊಂಡ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರಾಜಶೇಖರ ಧೈವಾಡಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

















