ಸ್ತ್ರೀ ಕುಲಕ್ಕೆ ಗೌರವ ಸಂಕೇತ ಅಕ್ಕ ಮಹಾದೇವಿ : ತಹಶಿಲ್ದಾರ ಮಂಜುಳಾ
ಇಂಡಿ : ಸಹಸ್ರಾರು ವರ್ಷಗಳಿಂದ ಬಂಧನದಲ್ಲಿ ಬಾಳುತ್ತಿದ್ದ ಸ್ತ್ರೀ ಕುಲಕ್ಕೆ ಗೌರವದ ಸ್ಥಾನಮಾನ ತಂದುಕೊಡುವ ಮುಖಾಂತರ ಮಹಿಳೆಯರು ಸಮಾಜದ ಎಲ್ಲ ಸ್ತರಗಳಲ್ಲಿ ಪುರುಷರಿಗೆ ಸಮಾನವಾಗಿ ನಿಲ್ಲಬಲ್ಲಳು ಎಂಬುದನ್ನು ಜಗತ್ತಿಗೆ ಸಾಬೀತು ಪಡಿಸಿದ ಧೀರ ಮಹಿಳೆ ಅಕ್ಕ ಮಹಾದೇವಿ ಎಂದು ತಹಶಿಲ್ದಾರ ಮಂಜುಳಾ ನಾಯಿಕ ಗುಣಗಾನ ಮಾಡಿದರು.
ಮಂಗಳವಾರ ತಾಲ್ಲೂಕು ಆಡಳಿತ ಸೌಧದಲ್ಲಿ ಆಯೋಜಿಸಿದ್ದ ಅಕ್ಕ ಮಹಾದೇವಿ ಜಯಂತಿಯಲ್ಲಿ, ಅಕ್ಕ ಮಹಾದೇವಿ ಭಾವಚಿತ್ರಕ್ಕೆ ಪುಷ್ಪಾರ್ಚಾಣೆ ಮಾಡಿ ಪೂಜೆ ಸಲ್ಲಿಸಿ ಮಾತನಾಡಿದರು.
‘ಓಡುವ ಮನಸ್ಸನ್ನು ನಿಲ್ಲಿಸಿದ ಅಕ್ಕ ನಿರಾಕಾರ ದೇವನ ಸತಿಯಾದಳು. ಲೋಕದ ಎಲ್ಲಾ ಕ್ರಿಯೆಗಳಿಗೆ ಸೂರ್ಯನೇ ಕೇಂದ್ರಬೀಂದು. ಸೂರ್ಯನ ಉದಯವು ಜಗದ ಕ್ರಿಯಾಶೀಲತೆಗೆ ಸಾಕ್ಷಿಯಾಗಿದೆ ಎಂದು ಸಾರಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರೇಡ್ 2 ತಹಶಿಲ್ದಾರ ಧನಪಾಲಶೆಟ್ಟಿ ದೇವೂರ, ಶಿರಸ್ತೆದಾರ ಎಸ್ ಆರ್ ಮುಜಗೊಂಡ,ಕಂದಾಯ ನಿರೀಕ್ಷಕ ಎಚ್ ಎಸ್ ಗುನ್ನಾಪುರ ಹಾಗೂ ಇನ್ನೂ ಅನೇಕ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.