ತಂಬಾಕು ಉತ್ಪನ್ನ ಮಾರಾಟ ಅಂಗಡಿಗಳ ಮೇಲೆ ದಾಳಿ
ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ:ಪಟ್ಟಣದಲ್ಲಿ ತಂಬಾಕು ನಿಯಂತ್ರಣ ಕೋಶ ಹಾಗೂ ತಾಲ್ಲೂಕು ತಂಬಾಕು ತನಿಖಾದಳ ಸದಸ್ಯರೊಂದಿಗೆ ಕೊಟ್ಟಾ 2003 ಕಾಯ್ದೆ ಅಡಿಯಲ್ಲಿ ತಾಲ್ಲೂಕ ಆರೋಗ್ಯ ಅಧಿಕಾರಿ ಡಾ. ಸತೀಶ್ ತಿವಾರಿ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಪಟ್ಟಣದ ಬಸವೇಶ್ವರ ವೃತ್ತದಿಂದ ಆಲಮಟ್ಟಿ ರಸ್ತೆ ವರಗೆ ಹಾಗೂ ಮುಖ್ಯ ರಸ್ತೆ ಬಜಾರ್ ಸುತ್ತ ಮುತ್ತ ಮಾರ್ಗಮಧ್ಯದಲ್ಲಿ ಇರತಕ್ಕಂತ ಪಾನ್ ಶಾಪ್ ಹಾಗೂ ಹೋಟೆಲ್ ಗಳಿಗೆ ಎಚ್ಚರಿಕೆ ನೀಡಿ ದಾಳಿಮಾಡಿ ದಂಡವನ್ನು ವಿಧಿಸಲಾಯಿತು ಸದರಿ ದಾಳಿಯಲ್ಲಿ ಸಾರ್ವಜನಿಕರಿಗೆ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಲಾಯಿತು.
ತಂಬಾಕು ಉತ್ಪನ್ನ ಮಾರಾಟಗಾರರಿಗೆ ದಂಡ; ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿ ಮಾಲಕರಿಗೆ, ವ್ಯಾಪಾರಸ್ಥರಿಗೆ ಕೊಟ್ಟ 2003 ಕಾಯ್ದೆ ಅಡಿ 10 ಪ್ರಕರಣವನ್ನು ದಾಖಲಿಸಿ ರೂ.3700 ದಂಡ ವಸೂಲು ಮಾಡಲಾಯಿತು ಸೆಕ್ಷನ್ 4 ಮತ್ತು 6 (ಎ)ಗಳ ನಾಮಫಲಕಗಳನ್ನು ಅಳವಡಿಸಿ ತಂಬಾಕು ಉತ್ಪನ್ನಗಳ ಜಾಹಿರಾತು ಫಲಕಗಳನ್ನು ತೆರವುಗೊಳಿಸಲಾಯಿತು.
ಈ ದಾಳಿಯಲ್ಲಿ ಅಬಕಾರಿ ಮುಖ್ಯ ಪೇದೆ ಬಿ ಎಸ್ ತಡಕಲ್, ಗ್ರಹ ರಕ್ಷಕ ಶರಣು ಹೆಬ್ಬಾಳ, ಇಲಾಖೆಯ ಆರೋಗ್ಯ ಇಲಾಖೆಯ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಯಲ್ಲಪ್ಪ ಚಲವಾದಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಎಂ ಎಸ್ ಗೌಡರ, ಆರ್ ಎಸ್ ಸಜ್ಜನ, ಇಸ್ಮಾಯಿಲ್ ವಾಲಿಕಾರ, ಹಾಗೂ ಪುರಸಭೆ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.